<p><strong>ಬೆಂಗಳೂರು</strong>: ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಅಣಿಗೊಳ್ಳುತ್ತಿರುವ ಹೊತ್ತಿನಲ್ಲೇ, ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಒದಗಿಸಿದ ಮೊತ್ತಕ್ಕಿಂತ ಸುಮಾರು ಮೂರು ಪಟ್ಟು ಅಧಿಕ ವೆಚ್ಚದ 13 ಸಾವಿರಕ್ಕೂ ಹೆಚ್ಚು ಗ್ರಾಮೀಣ ರಸ್ತೆಗಳ ಕಾಮಗಾರಿಗಳಿಗೆ ಬಿಜೆಪಿ ಸರ್ಕಾರ ಮಂಜೂರಾತಿ ನೀಡಿದೆ.</p>.<p>ಒಂದೇ ಲೆಕ್ಕ ಶೀರ್ಷಿಕೆಯಡಿ (5054) ಈ ಎಲ್ಲ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದ್ದು, ಈ ಪೈಕಿ ಬಹುತೇಕ ಕಾಮಗಾರಿಗಳಿಗೆ ಶಾಸಕರ ಬೇಡಿಕೆಯಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಜೂರಾತಿ ನೀಡಿದ್ದಾರೆ.</p>.<p>ಬಜೆಟ್ನಲ್ಲಿ ಅನುದಾನ ಒದಗಿಸದೇ ಇದ್ದರೂ, ಗ್ರಾಮೀಣ ರಸ್ತೆಗಳ ಕಾಮಗಾರಿಗಳಿಗೆ ಮಂಜೂರಾತಿ ನೀಡುವ ಮೂಲಕ ಶಾಸಕರನ್ನು ಸಂತೃಪ್ತಿಪಡಿಸಲು ಮುಖ್ಯಮಂತ್ರಿ ಮುಂದಾಗಿದ್ದಾರೆ ಎಂದು ಹೇಳಲಾಗಿದೆ.</p>.<p>2021–22 ಮತ್ತು 2022–23ನೇ ಸಾಲಿನ ಬಜೆಟ್ನಲ್ಲಿ ₹ 1,520 ಕೋಟಿ ಮೊತ್ತವನ್ನು ಈ ಉದ್ದೇಶಕ್ಕೆ ನೀಡಲಾಗಿತ್ತು. ಈ ಆರ್ಥಿಕ ವರ್ಷದಲ್ಲಿ ರಾಜ್ಯ ಸರ್ಕಾರ ₹ 4,248.61 ಕೋಟಿ ವೆಚ್ಚದ ಒಟ್ಟು 13,850 ರಸ್ತೆ ಕಾಮಗಾರಿಗಳಿಗೆ ಮಂಜೂರಾತಿ ನೀಡಿದೆ.</p>.<p>ಒಟ್ಟು ಕಾಮಗಾರಿಯಲ್ಲಿ ಐದನೇ ಎರಡು ಭಾಗದಷ್ಟು ಕಾಮಗಾರಿಗಳನ್ನು ಬಿಜೆಪಿ ಪಾಲಿಗೆ ಮಹತ್ವದ ಜಿಲ್ಲೆಗಳಾದ ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ತುಮಕೂರು ಜಿಲ್ಲೆಗಳಿಗೆ ಮಂಜೂರು ಮಾಡಲಾಗಿದೆ.</p>.<p>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಡಳಿತಾವಧಿಯಲ್ಲಿ ಬಿಜೆಪಿ ತನ್ನ ಶಕ್ತಿ ವೃದ್ಧಿಸಿಕೊಳ್ಳಲು ಯತ್ನಿಸುತ್ತಿರುವ ಹಾಸನ, ತುಮಕೂರು ಮತ್ತು ರಾಮನಗರ ಜಿಲ್ಲೆಗಳಿಗೆ ಅತೀ ಹೆಚ್ಚು ಸಂಖ್ಯೆಯಲ್ಲಿ ಹೊಸ ರಸ್ತೆ ಕಾಮಗಾರಿಗಳನ್ನು ಮಂಜೂರು ಮಾಡಲಾಗಿದೆ.</p>.<p>ಆದರೆ, ಇತ್ತೀಚೆಗೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಪೈಕಿ ಹಲವು ರಸ್ತೆಗಳ ಕಾಮಗಾರಿ ಇನ್ನೂ ಆರಂಭ ಆಗದಿರುವುದನ್ನು ಗಮನಿಸಿರುವ ಮುಖ್ಯಮಂತ್ರಿ, ಶೀಘ್ರದಲ್ಲಿ ಕಾಮಗಾರಿಗಳಿಗೆ ಚಾಲನೆ ನೀಡುವಂತೆ ಸೂಚಿಸಿದ್ದಾರೆ ಎಂದು ಮೂಲಗಳು ಹೇಳಿವೆ.</p>.<p>‘ಕಾಮಗಾರಿಗಳು ಪೂರ್ಣಗೊಂಡ ಬಳಿಕ ಬಿಲ್ಗಳ ಪಾವತಿಗಾಗಿ ಆಡಳಿತಾತ್ಮಕ ಅನುಮೋದನೆಗೆ ಕಳುಹಿಸಲಾಗುತ್ತದೆ. ಈ ಬಿಲ್ಗಳನ್ನು ಬಾಕಿ ಬಿಲ್ಗಳೆಂದು ಪರಿಗಣಿಸಿ ಪೂರಕ ಅಂದಾಜಿನಲ್ಲಿ ಸೇರಿಸಲಾಗುತ್ತದೆ. ಆ ಮೂಲಕ, ಬಜೆಟ್ ಹಂಚಿಕೆಗಿಂತಲೂ ಹೆಚ್ಚು ಎಂದು ಪರಿಗಣಿಸಿ ಪಾವತಿಸಲಾಗುತ್ತದೆ’ ಎಂದು ಆರ್ಥಿಕ ಇಲಾಖೆ ಮೂಲಗಳು ತಿಳಿಸಿವೆ.</p>.<p>‘ಕಾಂಗ್ರೆಸ್– ಜೆಡಿಎಸ್ ಸಮ್ಮಿಶ್ರ ಸರ್ಕಾರದ (2018–19) ಅವಧಿಯಿಂದಲೂ 5054 ಲೆಕ್ಕ ಶೀರ್ಷಿಕೆಯಡಿ ಮಂಜೂರಾತಿ ನೀಡಿದ ಕಾಮಗಾರಿಗಳ ಬಿಲ್ ಬಾಕಿ ಇದೆ. ಆಗ ಮುಖ್ಯಮಂತ್ರಿಯಾಗಿದ್ದ ಎಚ್.ಡಿ. ಕುಮಾರಸ್ವಾಮಿ ಅವರು ₹ 983 ಕೋಟಿ ಮೊತ್ತದ ಬಿಲ್ಗಳನ್ನು ವಿಲೇವಾರಿ ಮಾಡಿದ್ದರು. ಆ ಬಳಿಕ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸುಮಾರು ₹ 2,100 ಕೋಟಿ ವೆಚ್ಚದ ರಸ್ತೆ ಕಾಮಗಾರಿಗಳಿಗೆ ಮಂಜೂರಾತಿ ನೀಡಲಾಗಿತ್ತು’ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಅಣಿಗೊಳ್ಳುತ್ತಿರುವ ಹೊತ್ತಿನಲ್ಲೇ, ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಒದಗಿಸಿದ ಮೊತ್ತಕ್ಕಿಂತ ಸುಮಾರು ಮೂರು ಪಟ್ಟು ಅಧಿಕ ವೆಚ್ಚದ 13 ಸಾವಿರಕ್ಕೂ ಹೆಚ್ಚು ಗ್ರಾಮೀಣ ರಸ್ತೆಗಳ ಕಾಮಗಾರಿಗಳಿಗೆ ಬಿಜೆಪಿ ಸರ್ಕಾರ ಮಂಜೂರಾತಿ ನೀಡಿದೆ.</p>.<p>ಒಂದೇ ಲೆಕ್ಕ ಶೀರ್ಷಿಕೆಯಡಿ (5054) ಈ ಎಲ್ಲ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದ್ದು, ಈ ಪೈಕಿ ಬಹುತೇಕ ಕಾಮಗಾರಿಗಳಿಗೆ ಶಾಸಕರ ಬೇಡಿಕೆಯಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಜೂರಾತಿ ನೀಡಿದ್ದಾರೆ.</p>.<p>ಬಜೆಟ್ನಲ್ಲಿ ಅನುದಾನ ಒದಗಿಸದೇ ಇದ್ದರೂ, ಗ್ರಾಮೀಣ ರಸ್ತೆಗಳ ಕಾಮಗಾರಿಗಳಿಗೆ ಮಂಜೂರಾತಿ ನೀಡುವ ಮೂಲಕ ಶಾಸಕರನ್ನು ಸಂತೃಪ್ತಿಪಡಿಸಲು ಮುಖ್ಯಮಂತ್ರಿ ಮುಂದಾಗಿದ್ದಾರೆ ಎಂದು ಹೇಳಲಾಗಿದೆ.</p>.<p>2021–22 ಮತ್ತು 2022–23ನೇ ಸಾಲಿನ ಬಜೆಟ್ನಲ್ಲಿ ₹ 1,520 ಕೋಟಿ ಮೊತ್ತವನ್ನು ಈ ಉದ್ದೇಶಕ್ಕೆ ನೀಡಲಾಗಿತ್ತು. ಈ ಆರ್ಥಿಕ ವರ್ಷದಲ್ಲಿ ರಾಜ್ಯ ಸರ್ಕಾರ ₹ 4,248.61 ಕೋಟಿ ವೆಚ್ಚದ ಒಟ್ಟು 13,850 ರಸ್ತೆ ಕಾಮಗಾರಿಗಳಿಗೆ ಮಂಜೂರಾತಿ ನೀಡಿದೆ.</p>.<p>ಒಟ್ಟು ಕಾಮಗಾರಿಯಲ್ಲಿ ಐದನೇ ಎರಡು ಭಾಗದಷ್ಟು ಕಾಮಗಾರಿಗಳನ್ನು ಬಿಜೆಪಿ ಪಾಲಿಗೆ ಮಹತ್ವದ ಜಿಲ್ಲೆಗಳಾದ ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ತುಮಕೂರು ಜಿಲ್ಲೆಗಳಿಗೆ ಮಂಜೂರು ಮಾಡಲಾಗಿದೆ.</p>.<p>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಡಳಿತಾವಧಿಯಲ್ಲಿ ಬಿಜೆಪಿ ತನ್ನ ಶಕ್ತಿ ವೃದ್ಧಿಸಿಕೊಳ್ಳಲು ಯತ್ನಿಸುತ್ತಿರುವ ಹಾಸನ, ತುಮಕೂರು ಮತ್ತು ರಾಮನಗರ ಜಿಲ್ಲೆಗಳಿಗೆ ಅತೀ ಹೆಚ್ಚು ಸಂಖ್ಯೆಯಲ್ಲಿ ಹೊಸ ರಸ್ತೆ ಕಾಮಗಾರಿಗಳನ್ನು ಮಂಜೂರು ಮಾಡಲಾಗಿದೆ.</p>.<p>ಆದರೆ, ಇತ್ತೀಚೆಗೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಪೈಕಿ ಹಲವು ರಸ್ತೆಗಳ ಕಾಮಗಾರಿ ಇನ್ನೂ ಆರಂಭ ಆಗದಿರುವುದನ್ನು ಗಮನಿಸಿರುವ ಮುಖ್ಯಮಂತ್ರಿ, ಶೀಘ್ರದಲ್ಲಿ ಕಾಮಗಾರಿಗಳಿಗೆ ಚಾಲನೆ ನೀಡುವಂತೆ ಸೂಚಿಸಿದ್ದಾರೆ ಎಂದು ಮೂಲಗಳು ಹೇಳಿವೆ.</p>.<p>‘ಕಾಮಗಾರಿಗಳು ಪೂರ್ಣಗೊಂಡ ಬಳಿಕ ಬಿಲ್ಗಳ ಪಾವತಿಗಾಗಿ ಆಡಳಿತಾತ್ಮಕ ಅನುಮೋದನೆಗೆ ಕಳುಹಿಸಲಾಗುತ್ತದೆ. ಈ ಬಿಲ್ಗಳನ್ನು ಬಾಕಿ ಬಿಲ್ಗಳೆಂದು ಪರಿಗಣಿಸಿ ಪೂರಕ ಅಂದಾಜಿನಲ್ಲಿ ಸೇರಿಸಲಾಗುತ್ತದೆ. ಆ ಮೂಲಕ, ಬಜೆಟ್ ಹಂಚಿಕೆಗಿಂತಲೂ ಹೆಚ್ಚು ಎಂದು ಪರಿಗಣಿಸಿ ಪಾವತಿಸಲಾಗುತ್ತದೆ’ ಎಂದು ಆರ್ಥಿಕ ಇಲಾಖೆ ಮೂಲಗಳು ತಿಳಿಸಿವೆ.</p>.<p>‘ಕಾಂಗ್ರೆಸ್– ಜೆಡಿಎಸ್ ಸಮ್ಮಿಶ್ರ ಸರ್ಕಾರದ (2018–19) ಅವಧಿಯಿಂದಲೂ 5054 ಲೆಕ್ಕ ಶೀರ್ಷಿಕೆಯಡಿ ಮಂಜೂರಾತಿ ನೀಡಿದ ಕಾಮಗಾರಿಗಳ ಬಿಲ್ ಬಾಕಿ ಇದೆ. ಆಗ ಮುಖ್ಯಮಂತ್ರಿಯಾಗಿದ್ದ ಎಚ್.ಡಿ. ಕುಮಾರಸ್ವಾಮಿ ಅವರು ₹ 983 ಕೋಟಿ ಮೊತ್ತದ ಬಿಲ್ಗಳನ್ನು ವಿಲೇವಾರಿ ಮಾಡಿದ್ದರು. ಆ ಬಳಿಕ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸುಮಾರು ₹ 2,100 ಕೋಟಿ ವೆಚ್ಚದ ರಸ್ತೆ ಕಾಮಗಾರಿಗಳಿಗೆ ಮಂಜೂರಾತಿ ನೀಡಲಾಗಿತ್ತು’ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>