<p><strong>ಬೆಂಗಳೂರು:</strong> ಕೃತಕ ಬುದ್ಧಿಮತ್ತೆ ತಂತ್ರಜ್ಞಾನದಿಂದ ಕಾರ್ಯನಿರ್ವಹಿಸುವ ಅತ್ಯಾಧುನಿಕ ‘ಎಐ ಸರ್ವರ್’ಗಳನ್ನು ಅಮೆರಿಕದ ಬುರ್ಕಾನ್ ವರ್ಲ್ಡ್ ಇನ್ವೆಸ್ಟ್ಮೆಂಟ್ ಗ್ರೂಪ್ ಕರ್ನಾಟಕದಲ್ಲೇ ತಯಾರಿಸಲಿದೆ. </p>.<p>ಬುರ್ಕಾನ್ ವರ್ಲ್ಡ್ನ ಅಧೀನ ಸಂಸ್ಥೆ ದಿ ಘಾಜಿ ಗ್ರೂಪ್ ಸಿಇಒ ಶಫಿ ಖಾನ್ ಅವರ ನೇತೃತ್ವದ ನಿಯೋಗದ ಜತೆ ಹೂಡಿಕೆ ಕುರಿತು ಗುರುವಾರ ಮಾತುಕತೆ ನಡೆಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಈ ವಿಷಯ ತಿಳಿಸಿದರು.</p>.<p>ಅಮೆರಿಕದ ಮಿಯಾಮಿಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಈ ಕಂಪನಿ ರಾಜ್ಯದಲ್ಲಿ ₹1,500 ಕೋಟಿ ಬಂಡವಾಳ ಹೂಡಲು ಮುಂದೆ ಬಂದಿದೆ. ದೇವನಹಳ್ಳಿ ಸಮೀಪ 10-15 ಎಕರೆ ಭೂಮಿ ನೀಡಲಾಗುವುದು. ಹೂಡಿಕೆಯಿಂದ ತಯಾರಿಕಾ ವಲಯದಲ್ಲಿ ಸಾಕಷ್ಟು ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಹೇಳಿದರು.</p>.<p>ಡೇಟಾ ಕೇಂದ್ರಗಳಲ್ಲಿ ಬಳಕೆಯಾಗುವ ಸರ್ವರ್ಗಳಿಗೆ ಬಹು ಬೇಡಿಕೆ ಇದೆ. ಇದಕ್ಕೆ ಸಂಬಂಧಿಸಿದ ತಂತ್ರಜ್ಞಾನ ಹಾಗೂ ಉಪಕರಣಗಳನ್ನು ಬೇರೆ ದೇಶಗಳಿಗೆ ರಫ್ತು ಮಾಡಲು ಸಹಕಾರ ನೀಡಲಾಗುವುದು. ಅತ್ಯಾಧುನಿಕ ಸಿಪಿಯು, ಜಿಪಿಯು, ಎಐ-ರೆಡಿ ನೆಟ್ವರ್ಕ್ ಸ್ವಿಚ್ ತಯಾರಿಕೆಯನ್ನೂ ಕಂಪನಿ ಆರಂಭಿಸಲಿದೆ. ಜಾಗತಿಕ ತಾಂತ್ರಿಕ ಪಾಲುದಾರ ಕಂಪನಿಗಳಾದ ಗಿಗಾಬೈಟ್ ಮತ್ತು ಸೆರಾ ನೆಟ್ವರ್ಕ್ ಸಹಯೋಗ ನೀಡಲಿವೆ. ಸೆಮಿಕಂಡಕ್ಟರ್, ಎಐ ಹಾರ್ಡ್-ವೇರ್, ಆಧುನಿಕ ಎಲೆಕ್ಟ್ರಾನಿಕ್ಸ್ ಕಾರ್ಯಪರಿಸರದ ಬಲವರ್ಧನೆಯಾಗಲಿದೆ. ಸ್ಥಳೀಯವಾಗಿ ಆರ್ ಆ್ಯಂಡ್ ಡಿ, ತಂತ್ರಜ್ಞಾನ ವರ್ಗಾವಣೆ, ಶಿಕ್ಷಣ ಸಂಸ್ಥೆಗಳು ಮತ್ತು ಇಲ್ಲಿಯ ಕೈಗಾರಿಕೆಗಳ ಸಹಭಾಗಿತ್ವ ಸಿಗಲಿದೆ ಎಂದರು.</p>.<p>ಶಾಸಕ ಯಾಸಿರ್ ಅಹಮದ್ ಪಠಾಣ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು, ಕ್ವಾಡ್-ಜೆನ್ ಕಂಪನಿ ಅಧ್ಯಕ್ಷ ಸಿ.ಎಸ್.ರಾವ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೃತಕ ಬುದ್ಧಿಮತ್ತೆ ತಂತ್ರಜ್ಞಾನದಿಂದ ಕಾರ್ಯನಿರ್ವಹಿಸುವ ಅತ್ಯಾಧುನಿಕ ‘ಎಐ ಸರ್ವರ್’ಗಳನ್ನು ಅಮೆರಿಕದ ಬುರ್ಕಾನ್ ವರ್ಲ್ಡ್ ಇನ್ವೆಸ್ಟ್ಮೆಂಟ್ ಗ್ರೂಪ್ ಕರ್ನಾಟಕದಲ್ಲೇ ತಯಾರಿಸಲಿದೆ. </p>.<p>ಬುರ್ಕಾನ್ ವರ್ಲ್ಡ್ನ ಅಧೀನ ಸಂಸ್ಥೆ ದಿ ಘಾಜಿ ಗ್ರೂಪ್ ಸಿಇಒ ಶಫಿ ಖಾನ್ ಅವರ ನೇತೃತ್ವದ ನಿಯೋಗದ ಜತೆ ಹೂಡಿಕೆ ಕುರಿತು ಗುರುವಾರ ಮಾತುಕತೆ ನಡೆಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಈ ವಿಷಯ ತಿಳಿಸಿದರು.</p>.<p>ಅಮೆರಿಕದ ಮಿಯಾಮಿಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಈ ಕಂಪನಿ ರಾಜ್ಯದಲ್ಲಿ ₹1,500 ಕೋಟಿ ಬಂಡವಾಳ ಹೂಡಲು ಮುಂದೆ ಬಂದಿದೆ. ದೇವನಹಳ್ಳಿ ಸಮೀಪ 10-15 ಎಕರೆ ಭೂಮಿ ನೀಡಲಾಗುವುದು. ಹೂಡಿಕೆಯಿಂದ ತಯಾರಿಕಾ ವಲಯದಲ್ಲಿ ಸಾಕಷ್ಟು ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಹೇಳಿದರು.</p>.<p>ಡೇಟಾ ಕೇಂದ್ರಗಳಲ್ಲಿ ಬಳಕೆಯಾಗುವ ಸರ್ವರ್ಗಳಿಗೆ ಬಹು ಬೇಡಿಕೆ ಇದೆ. ಇದಕ್ಕೆ ಸಂಬಂಧಿಸಿದ ತಂತ್ರಜ್ಞಾನ ಹಾಗೂ ಉಪಕರಣಗಳನ್ನು ಬೇರೆ ದೇಶಗಳಿಗೆ ರಫ್ತು ಮಾಡಲು ಸಹಕಾರ ನೀಡಲಾಗುವುದು. ಅತ್ಯಾಧುನಿಕ ಸಿಪಿಯು, ಜಿಪಿಯು, ಎಐ-ರೆಡಿ ನೆಟ್ವರ್ಕ್ ಸ್ವಿಚ್ ತಯಾರಿಕೆಯನ್ನೂ ಕಂಪನಿ ಆರಂಭಿಸಲಿದೆ. ಜಾಗತಿಕ ತಾಂತ್ರಿಕ ಪಾಲುದಾರ ಕಂಪನಿಗಳಾದ ಗಿಗಾಬೈಟ್ ಮತ್ತು ಸೆರಾ ನೆಟ್ವರ್ಕ್ ಸಹಯೋಗ ನೀಡಲಿವೆ. ಸೆಮಿಕಂಡಕ್ಟರ್, ಎಐ ಹಾರ್ಡ್-ವೇರ್, ಆಧುನಿಕ ಎಲೆಕ್ಟ್ರಾನಿಕ್ಸ್ ಕಾರ್ಯಪರಿಸರದ ಬಲವರ್ಧನೆಯಾಗಲಿದೆ. ಸ್ಥಳೀಯವಾಗಿ ಆರ್ ಆ್ಯಂಡ್ ಡಿ, ತಂತ್ರಜ್ಞಾನ ವರ್ಗಾವಣೆ, ಶಿಕ್ಷಣ ಸಂಸ್ಥೆಗಳು ಮತ್ತು ಇಲ್ಲಿಯ ಕೈಗಾರಿಕೆಗಳ ಸಹಭಾಗಿತ್ವ ಸಿಗಲಿದೆ ಎಂದರು.</p>.<p>ಶಾಸಕ ಯಾಸಿರ್ ಅಹಮದ್ ಪಠಾಣ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು, ಕ್ವಾಡ್-ಜೆನ್ ಕಂಪನಿ ಅಧ್ಯಕ್ಷ ಸಿ.ಎಸ್.ರಾವ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>