ಬೆಂಗಳೂರು: ‘ವಸ್ತುಗಳನ್ನು ಕೊಳ್ಳುವಾಗ, ಗ್ರಾಮೀಣ ಪ್ರದೇಶದಲ್ಲಿ ಸಣ್ಣ ಪ್ರಾಣಿಗಳನ್ನು ಖರೀದಿಸುವಾಗ ತೂಕ, ಗಾತ್ರ ಎಲ್ಲವನ್ನೂ ನೋಡಿ, ಹಲವು ಬಾರಿ ಯೋಚಿಸಿ ನಿರ್ಧಾರ ತೆಗೆದುಕೊಳ್ಳುತ್ತಾರೆ. ಪಕ್ಷಕ್ಕೆ ಸೇರಿಸಿಕೊಳ್ಳುವಾಗಲೂ ಗುಣ, ತತ್ವ, ಹಿನ್ನೆಲೆಗಳನ್ನು ಪರಿಶೀಲಿಸುವುದು ಮುಖ್ಯ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.