<p><strong>ಬೆಂಗಳೂರು:</strong> ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ (ಎನ್ಇಪಿ) ಹಲವು ವಿಷಯಗಳ ಸೇರ್ಪಡೆಗಾಗಿ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಸಲ್ಲಿಸಲು ಸಿದ್ಧಪಡಿಸಿರುವ ವರದಿ ಅತ್ಯಂತ ಅವೈಜ್ಞಾನಿಕವಾಗಿದೆ ಎಂದು ಎಐಡಿಎಸ್ಒ ದೂರಿದೆ.</p>.<p>ಸತ್ಯಕ್ಕೆ ದೂರವಾದ ಮತ್ತು ಐತಿಹಾಸಿಕ ಘಟನೆಗಳನ್ನು ತಿರುಚಿರುವ ಹಾಗೂ ಗೊಡ್ಡು ವಿಚಾರಗಳಿಂದ ಕೂಡಿರುವ ಈ ವರದಿಯನ್ನು ರಾಜ್ಯ ಸರ್ಕಾರ ಈ ಕೂಡಲೇ ಹಿಂಪಡೆಯಬೇಕು ಎಂದು ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಒತ್ತಾಯಿಸಿದ್ದಾರೆ.</p>.<p>ಎನ್ಇಪಿ ಪಠ್ಯಕ್ರಮದಲ್ಲಿ ಕೆಲವು ಅಂಶಗಳ ಸೇರ್ಪಡೆಗೆ ರಾಜ್ಯ ನಿಯೋಜಿಸಿದ 26 ಸದಸ್ಯರ ಸಮಿತಿಯು ತನ್ನ ಶಿಫಾರಸನ್ನು ಈಗ ಕೇಂದ್ರ ಸರ್ಕಾರಕ್ಕೆ ನೀಡಿದೆ. ಆದರೆ, ಶಾಲೆಗಳಲ್ಲಿ ಕಲಿಸುವ ಸ್ಥಾಪಿತ ವೈಜ್ಞಾನಿಕ ಅಂಶಗಳನ್ನು ಈ ಸಮಿತಿ ಅಲ್ಲಗೆಳೆದಿರುವುದು ಆಘಾತಕಾರಿಯಾಗಿದೆ ಎಂದು ತಿಳಿಸಿದ್ದಾರೆ.</p>.<p>'ಪೈಥಾಗರಸ್ ಪ್ರಮೇಯ' ಹಾಗೂ 'ಗುರುತ್ವಾಕರ್ಷಣೆ ಕುರಿತ ನ್ಯೂಟನ್ ಅವರ ಸೇಬಿನ ಘಟನೆಯನ್ನು 'ನಕಲಿ ಸುದ್ದಿ’ ಎಂದು ಈ ಸಮಿತಿಯು ಹೇಳಿದೆ. ಇಂತಹ ಹಲವಾರು ಅಂಶಗಳನ್ನು ಒಳಗೊಂಡಿರುವ ಸಮಿತಿಯ ಈ ವರದಿಯನ್ನು ರಾಜ್ಯ ಸರ್ಕಾರ ಸಾರಾಸಗಟಾಗಿ ತಿರಸ್ಕರಿಸಬೇಕು ಎಂದು ಒತ್ತಾಯಿಸಿದ್ದಾರೆ.</p>.<p>ಶೈಕ್ಷಣಿಕ ರಂಗದಲ್ಲಿ ಕೇವಲ ಸ್ಥಾಪಿತ ಸತ್ಯ, ವೈಜ್ಞಾನಿಕ ಮನೋಭಾವ, ತಾರ್ಕಿಕ ಚಿಂತನೆ ಮತ್ತು ಭಾರತದ ನಿಜವಾದ ಇತಿಹಾಸವನ್ನು ಮಾತ್ರವೇ ಪ್ರೋತ್ಸಾಹಿಸಬೇಕು ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ (ಎನ್ಇಪಿ) ಹಲವು ವಿಷಯಗಳ ಸೇರ್ಪಡೆಗಾಗಿ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಸಲ್ಲಿಸಲು ಸಿದ್ಧಪಡಿಸಿರುವ ವರದಿ ಅತ್ಯಂತ ಅವೈಜ್ಞಾನಿಕವಾಗಿದೆ ಎಂದು ಎಐಡಿಎಸ್ಒ ದೂರಿದೆ.</p>.<p>ಸತ್ಯಕ್ಕೆ ದೂರವಾದ ಮತ್ತು ಐತಿಹಾಸಿಕ ಘಟನೆಗಳನ್ನು ತಿರುಚಿರುವ ಹಾಗೂ ಗೊಡ್ಡು ವಿಚಾರಗಳಿಂದ ಕೂಡಿರುವ ಈ ವರದಿಯನ್ನು ರಾಜ್ಯ ಸರ್ಕಾರ ಈ ಕೂಡಲೇ ಹಿಂಪಡೆಯಬೇಕು ಎಂದು ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಒತ್ತಾಯಿಸಿದ್ದಾರೆ.</p>.<p>ಎನ್ಇಪಿ ಪಠ್ಯಕ್ರಮದಲ್ಲಿ ಕೆಲವು ಅಂಶಗಳ ಸೇರ್ಪಡೆಗೆ ರಾಜ್ಯ ನಿಯೋಜಿಸಿದ 26 ಸದಸ್ಯರ ಸಮಿತಿಯು ತನ್ನ ಶಿಫಾರಸನ್ನು ಈಗ ಕೇಂದ್ರ ಸರ್ಕಾರಕ್ಕೆ ನೀಡಿದೆ. ಆದರೆ, ಶಾಲೆಗಳಲ್ಲಿ ಕಲಿಸುವ ಸ್ಥಾಪಿತ ವೈಜ್ಞಾನಿಕ ಅಂಶಗಳನ್ನು ಈ ಸಮಿತಿ ಅಲ್ಲಗೆಳೆದಿರುವುದು ಆಘಾತಕಾರಿಯಾಗಿದೆ ಎಂದು ತಿಳಿಸಿದ್ದಾರೆ.</p>.<p>'ಪೈಥಾಗರಸ್ ಪ್ರಮೇಯ' ಹಾಗೂ 'ಗುರುತ್ವಾಕರ್ಷಣೆ ಕುರಿತ ನ್ಯೂಟನ್ ಅವರ ಸೇಬಿನ ಘಟನೆಯನ್ನು 'ನಕಲಿ ಸುದ್ದಿ’ ಎಂದು ಈ ಸಮಿತಿಯು ಹೇಳಿದೆ. ಇಂತಹ ಹಲವಾರು ಅಂಶಗಳನ್ನು ಒಳಗೊಂಡಿರುವ ಸಮಿತಿಯ ಈ ವರದಿಯನ್ನು ರಾಜ್ಯ ಸರ್ಕಾರ ಸಾರಾಸಗಟಾಗಿ ತಿರಸ್ಕರಿಸಬೇಕು ಎಂದು ಒತ್ತಾಯಿಸಿದ್ದಾರೆ.</p>.<p>ಶೈಕ್ಷಣಿಕ ರಂಗದಲ್ಲಿ ಕೇವಲ ಸ್ಥಾಪಿತ ಸತ್ಯ, ವೈಜ್ಞಾನಿಕ ಮನೋಭಾವ, ತಾರ್ಕಿಕ ಚಿಂತನೆ ಮತ್ತು ಭಾರತದ ನಿಜವಾದ ಇತಿಹಾಸವನ್ನು ಮಾತ್ರವೇ ಪ್ರೋತ್ಸಾಹಿಸಬೇಕು ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>