‘ಭೂಗೋಳ ವಿಜ್ಞಾನ ವಿಷಯದ ಪ್ರಶ್ನೆಗಳು ಸೋರಿಕೆಯಾದ ಪ್ರಕರಣದಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಕುಲಸಚಿವರಾಗಿದ್ದ (ಮೌಲ್ಯಮಾಪನ) ಪ್ರೊ.ಎಚ್.ನಾಗರಾಜ್ ಹಾಗೂ ಅವರ ವಿದ್ಯಾರ್ಥಿನಿ ಸೌಮ್ಯಾ ಎಂಬುವರನ್ನು ಬಂಧಿಸಲಾಗಿದೆ. ಅರ್ಥಶಾಸ್ತ್ರ, ಸಮಾಜವಿಜ್ಞಾನ ಹಾಗೂ ಇಂಗ್ಲಿಷ್ ವಿಷಯದ ಪರೀಕ್ಷೆಯಲ್ಲೂ ಅಕ್ರಮ ನಡೆದಿರುವುದು ದೃಢಪಟ್ಟಿದೆ. ಶೈಕ್ಷಣಿಕ ರಂಗದಲ್ಲೇ ಇಂಥ ಅಕ್ರಮ ನಡೆದಿರುವುದು ನಾಚಿಕೆಯ ಸಂಗತಿ’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.