‘ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳು ಅತೀ ಹಿಂದುಳಿದ ಜಿಲ್ಲೆಗಳಾಗಿವೆ. ಈ ಜಿಲ್ಲೆಗಳಲ್ಲಿ ಶೇ 70ರಷ್ಟು ಒಬಿಸಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರು ಇದ್ದಾರೆ. ಸಾಕ್ಷರತೆ ಪ್ರಮಾಣ ಶೇ 59ರಷ್ಟಿದೆ. ರಾಯಚೂರು ಕ್ಷೇತ್ರದಲ್ಲಿರುವ ಒಬಿಸಿ/ಎಸ್ಸಿ/ಎಸ್ಟಿ ಜನರು ಆರ್ಥಿಕವಾಗಿ ಹಿಂದುಳಿದವರು. ಹೀಗಾಗಿ, ಮಕ್ಕಳಿಗೆ ಉತ್ತಮ ಶಿಕ್ಷಣ ಹಾಗೂ ವೈದ್ಯಕೀಯ ವ್ಯವಸ್ಥೆ ಲಭ್ಯವಾಗುತ್ತಿಲ್ಲ. ಏಮ್ಸ್ ಸ್ಥಾಪಿಸಿದರೆ ಜೀವನಮಟ್ಟ ಸುಧಾರಣೆ ಆಗಲಿದೆ. ಜತೆಗೆ ಉದ್ಯೋಗ ಸೃಷ್ಟಿಯಾಗಲಿದೆ’ ಎಂದು ಅವರು ಗಮನ ಸೆಳೆದರು.