ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಪ್ರತಿಭಟನಾ ಸ್ಥಳಕ್ಕೆ ಬಂದು ರೈತರಿಗೆ ಬೆಂಬಲ ಸೂಚಿಸಿದರು. ರಸ್ತೆಯಲ್ಲೇ ಕುಳಿತ ಸಿದ್ದರಾಮಯ್ಯ, ರೈತ ಮುಖಂಡರ ಭಾಷಣಗಳನ್ನು ಆಲಿಸಿದರು. ಶಾಸಕರಾದ ರಮೇಶ್ ಕುಮಾರ್, ಕೃಷ್ಣ ಬೈರೇಗೌಡ, ಜಮೀರ್ ಅಹಮ್ಮದ್, ಯು.ಟಿ.ಖಾದರ್ ಹಾಗೂ ಹಲವರು ಜತೆಗಿದ್ದರು.