<p><strong>ಹುಬ್ಬಳ್ಳಿ:</strong> ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ ಕಡೆ ಪ್ರವಾಸ ಮಾಡುತ್ತೇನೆ. ಉತ್ತರ ಕರ್ನಾಟಕ ಭಾಗದ 11 ಸ್ಥಾನಗಳಲ್ಲಿ 7 ಸ್ಥಾನಗಳಲ್ಲಿ ಗೆಲ್ಲಲು ಶ್ರಮಿಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ್ ಹೇಳಿದರು.</p><p>ಶನಿವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಗುರಿ ಇಟ್ಟುಕೊಳ್ಳಲಾಗಿದೆ. ಪಕ್ಷವು ನನ್ನ ಅನುಭವ ಬಳಸಿಕೊಳ್ಳಲಿದೆ ಎಂದರು.</p><p>ವಿಧಾನ ಪರಿಷತ್ ಸದಸ್ಯನಾಗಿರುವುದು ನನ್ನ ರಾಜಕೀಯ ಜೀವನದಲ್ಲಿ ಹೊಸ ಅಧ್ಯಾಯ. ಈ ಎರಡನೇ ಇನಿಂಗ್ಸ್ ನಲ್ಲಿ ಉತ್ತಮ ಫಲಿತಾಂಶ ಸಿಗುವ ವಿಶ್ವಾಸ ಇದೆ ಎಂದು ಹೇಳಿದರು.</p><p>ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನನಗೆ ಹೆಚ್ಚಿನ ಸ್ಥಾನಮಾನ ನೀಡುವ ಭರವಸೆ ನೀಡಿದ್ದರು. ಈಗ ವಿಧಾನ ಪರಿಷತ್ ಸಭಾಪತಿ ಸೇರಿದಂತೆ ಯಾವುದೇ ಹುದ್ದೆ ನೀಡುವ ಪ್ರಸ್ತಾವ ಮಾಡಿಲ್ಲ. ಯಾವ ಹುದ್ದೆ ನೀಡಬೇಕು ಎಂಬುದು ಪಕ್ಷಕ್ಕೆ ಬಿಟ್ಟ ವಿಚಾರ ಎಂದರು.</p><p>ಈ ಭಾಗದ ಜ್ವಲಂತ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಪರಿಹರಿಸಲು ಪ್ರಯತ್ನಿಸುತ್ತೇನೆ. ನನೆಗುದಿಗೆ ಬಿದ್ದಿರುವ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸಲು ಶ್ರಮಿಸುತ್ತೇನೆ ಎಂದು ಹೇಳಿದರು. </p><p>ವಿಧಾನ ಪರಿಷತ್ ಸದಸ್ಯನಾಗಿ ಸೇವೆ ಮಾಡಲು ಕಾಂಗ್ರೆಸ್ ಪಕ್ಷ ಅವಕಾಶ ಕಲ್ಪಿಸಿದೆ. ಇದಕ್ಕೆ ಪಕ್ಷದ ಕೇಂದ್ರದ ನಾಯಕರು, ಮುಖ್ಯಮಂತ್ರಿ ಮತ್ತು ಎಲ್ಲ ಶಾಸಕರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು.</p><p>ಸೋತಿರುವ ಬಿಜೆಪಿ ನಾಯಕರನ್ನು ಸೆಳೆಯುವ ಕೆಲಸವನ್ನು ನಾವು ಮಾಡುತ್ತಿಲ್ಲ. ಅಲ್ಲಿ ಸಾಕಷ್ಟು ಅಸಮಾಧಾನ, ಬಿರುಕು ಇದೆ. ಅದು ಯಾವಾಗ ಸ್ಫೋಟ ಆಗುತ್ತದೆ ಗೊತ್ತಿಲ್ಲ ಎಂದು ಹೇಳಿದರು.</p><p>ನಾಲ್ಕು ಗೋಡೆಗಳ ಮಧ್ಯೆ ಚರ್ಚಿಸಬೇಕಾದ ವಿಷಯವನ್ನು ಸಂಸದ ಪ್ರತಾಪಸಿಂಹ ಅವರು ಬಹಿರಂಗವಾಗಿ ಹೇಳಿದ್ದಾರೆ. ಒಳ ಒಪ್ಪಂದ ಮಾಡಿಕೊಂಡಿರುವ ತಮ್ಮ ನಾಯಕರ ಹೆಸರನ್ನು ಅವರು ಬಹಿರಂಗ ಪಡಿಸಬೇಕು. ಇದು ಜನರಿಗೆ ಗೊತ್ತಾಗಬೇಕು. ಇಲ್ಲದಿದ್ದರೆ ಕಾರ್ಯಕರ್ತರು ಗೊಂದಲಕ್ಕೆ ಒಳಗಾಗುತ್ತಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ ಕಡೆ ಪ್ರವಾಸ ಮಾಡುತ್ತೇನೆ. ಉತ್ತರ ಕರ್ನಾಟಕ ಭಾಗದ 11 ಸ್ಥಾನಗಳಲ್ಲಿ 7 ಸ್ಥಾನಗಳಲ್ಲಿ ಗೆಲ್ಲಲು ಶ್ರಮಿಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ್ ಹೇಳಿದರು.</p><p>ಶನಿವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಗುರಿ ಇಟ್ಟುಕೊಳ್ಳಲಾಗಿದೆ. ಪಕ್ಷವು ನನ್ನ ಅನುಭವ ಬಳಸಿಕೊಳ್ಳಲಿದೆ ಎಂದರು.</p><p>ವಿಧಾನ ಪರಿಷತ್ ಸದಸ್ಯನಾಗಿರುವುದು ನನ್ನ ರಾಜಕೀಯ ಜೀವನದಲ್ಲಿ ಹೊಸ ಅಧ್ಯಾಯ. ಈ ಎರಡನೇ ಇನಿಂಗ್ಸ್ ನಲ್ಲಿ ಉತ್ತಮ ಫಲಿತಾಂಶ ಸಿಗುವ ವಿಶ್ವಾಸ ಇದೆ ಎಂದು ಹೇಳಿದರು.</p><p>ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನನಗೆ ಹೆಚ್ಚಿನ ಸ್ಥಾನಮಾನ ನೀಡುವ ಭರವಸೆ ನೀಡಿದ್ದರು. ಈಗ ವಿಧಾನ ಪರಿಷತ್ ಸಭಾಪತಿ ಸೇರಿದಂತೆ ಯಾವುದೇ ಹುದ್ದೆ ನೀಡುವ ಪ್ರಸ್ತಾವ ಮಾಡಿಲ್ಲ. ಯಾವ ಹುದ್ದೆ ನೀಡಬೇಕು ಎಂಬುದು ಪಕ್ಷಕ್ಕೆ ಬಿಟ್ಟ ವಿಚಾರ ಎಂದರು.</p><p>ಈ ಭಾಗದ ಜ್ವಲಂತ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಪರಿಹರಿಸಲು ಪ್ರಯತ್ನಿಸುತ್ತೇನೆ. ನನೆಗುದಿಗೆ ಬಿದ್ದಿರುವ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸಲು ಶ್ರಮಿಸುತ್ತೇನೆ ಎಂದು ಹೇಳಿದರು. </p><p>ವಿಧಾನ ಪರಿಷತ್ ಸದಸ್ಯನಾಗಿ ಸೇವೆ ಮಾಡಲು ಕಾಂಗ್ರೆಸ್ ಪಕ್ಷ ಅವಕಾಶ ಕಲ್ಪಿಸಿದೆ. ಇದಕ್ಕೆ ಪಕ್ಷದ ಕೇಂದ್ರದ ನಾಯಕರು, ಮುಖ್ಯಮಂತ್ರಿ ಮತ್ತು ಎಲ್ಲ ಶಾಸಕರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು.</p><p>ಸೋತಿರುವ ಬಿಜೆಪಿ ನಾಯಕರನ್ನು ಸೆಳೆಯುವ ಕೆಲಸವನ್ನು ನಾವು ಮಾಡುತ್ತಿಲ್ಲ. ಅಲ್ಲಿ ಸಾಕಷ್ಟು ಅಸಮಾಧಾನ, ಬಿರುಕು ಇದೆ. ಅದು ಯಾವಾಗ ಸ್ಫೋಟ ಆಗುತ್ತದೆ ಗೊತ್ತಿಲ್ಲ ಎಂದು ಹೇಳಿದರು.</p><p>ನಾಲ್ಕು ಗೋಡೆಗಳ ಮಧ್ಯೆ ಚರ್ಚಿಸಬೇಕಾದ ವಿಷಯವನ್ನು ಸಂಸದ ಪ್ರತಾಪಸಿಂಹ ಅವರು ಬಹಿರಂಗವಾಗಿ ಹೇಳಿದ್ದಾರೆ. ಒಳ ಒಪ್ಪಂದ ಮಾಡಿಕೊಂಡಿರುವ ತಮ್ಮ ನಾಯಕರ ಹೆಸರನ್ನು ಅವರು ಬಹಿರಂಗ ಪಡಿಸಬೇಕು. ಇದು ಜನರಿಗೆ ಗೊತ್ತಾಗಬೇಕು. ಇಲ್ಲದಿದ್ದರೆ ಕಾರ್ಯಕರ್ತರು ಗೊಂದಲಕ್ಕೆ ಒಳಗಾಗುತ್ತಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>