‘ಲಾ ನಿನಾ’ ಪರಿಣಾಮದ ಕಾರಣ ಈ ವರ್ಷ ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ 12 ಬಾರಿ ವಾಯು ಭಾರ ಕುಸಿದಿದೆ. ಇದು ಅತ್ಯಂತ ವಿರಳಾತೀವಿರಳ ವಿದ್ಯಮಾನ. ಅಕ್ಟೋಬರ್ನಲ್ಲೇ ಮೂರು ಬಾರಿ ವಾಯುಭಾರ ಕುಸಿತವಾಗಿ, ಕರ್ನಾಟಕ, ಮಹಾರಾಷ್ಟ್ರ, ಆಂಧ್ರ, ತೆಲಂಗಾಣ ರಾಜ್ಯಗಳು ಮಳೆ ಮತ್ತು ಪ್ರವಾಹಕ್ಕೆ ತತ್ತರಿಸಿವೆ’ ಎನ್ನುತ್ತಾರೆ ಕರ್ನಾಟಕ ರಾಜ್ಯ ನಿಸರ್ಗ ವಿಕೋಪ ಉಸ್ತುವಾರಿ ಕೇಂದ್ರದ ಮಾಜಿ ನಿರ್ದೇಶಕ ಹಾಗೂ ಸರ್ಕಾರದ ಸಲಹೆಗಾರ ಡಾ.ಶ್ರೀನಿವಾಸ ರೆಡ್ಡಿ.