<p><strong>ಬೆಂಗಳೂರು</strong>: ಕರ್ನಾಟಕ ಕೇಡರ್ನ ಹಿರಿಯ ಐಐಎಸ್ ಅಧಿಕಾರಿ ಅಜಯ್ ಸೇಠ್ ಅವರಿಗೆ ಕೇಂದ್ರ ಸರ್ಕಾರದಲ್ಲಿ ಉನ್ನತ ಹುದ್ದೆ ದೊರೆತಿದೆ.</p><p>ಕೇಂದ್ರ ಹಣಕಾಸು ಸಚಿವಾಲಯದ ಕಾರ್ಯದರ್ಶಿಯಾಗಿ ಹಾಗೂ ಕಂದಾಯ ಕಾರ್ಯದರ್ಶಿಯಾಗಿ ಅಜಯ್ ಸೇಠ್ ನಿಯುಕ್ತಿಗೊಂಡಿದ್ದಾರೆ. ಇದಕ್ಕೂ ಮೊದಲು ಅವರು ಹಣಕಾಸು ಸಚಿವಾಲಯದ ‘ಆರ್ಥಿಕ ವ್ಯವಹಾರಗಳ ಇಲಾಖೆ’ಯ ಕಾರ್ಯದರ್ಶಿಯಾಗಿ 2021ರ ಏಪ್ರಿಲ್ನಿಂದ ಕಾರ್ಯನಿರ್ವಹಿಸುತ್ತಿದ್ದರು.</p><p>ಕೇಂದ್ರ ಹಣಕಾಸು ಸಚಿವಾಲಯದ ಕಾರ್ಯದರ್ಶಿಯಾಗಿದ್ದ ತುಹಿನ್ ಕಾಂತ್ ಪಾಂಡೆ ಅವರು ಸೆಬಿ ಅಧ್ಯಕ್ಷ ಸ್ಥಾನಕ್ಕೆ ನೇಮಕವಾಗಿದ್ದರು. ಅವರ ಸ್ಥಾನವನ್ನು ಅಜಯ್ ಸೇಠ್ ಅಲಂಕರಿಸಿದ್ದಾರೆ.</p><p>ಐಎಎಸ್ 1987ರ ಬ್ಯಾಚ್ನ ಕರ್ನಾಟಕ ಕೇಡರ್ ಹಿರಿಯ ಅಧಿಕಾರಿಯಾಗಿರುವ ಅಜಯ್ ಸೇಠ್ ಅವರು 2018ರ ಜುಲೈನಲ್ಲಿ ಬೆಂಗಳೂರು ಮೆಟ್ರೊ ರೈಲು ನಿಗಮದ (ಬಿಎಂಆರ್ಸಿಎಲ್) ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದ್ದರು. 2021ರ ಏಪ್ರಿಲ್ನಲ್ಲಿ ಅವರು ಕೇಂದ್ರ ಸೇವೆಗೆ ತೆರಳಿದ್ದರು.</p><p>ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾಗ ನಮ್ಮ ಮೆಟ್ರೊ ನಿರ್ಮಾಣ ಕಾರ್ಯ ವೇಗ ಪಡೆದುಕೊಳ್ಳುವಲ್ಲಿ ಸೇಠ್ ಶ್ರಮಿಸಿದ್ದರು.</p><p>ಕೇಂದ್ರ ಹಣಕಾಸು ಸಚಿವಾಲಯದ ಕಾರ್ಯದರ್ಶಿ ಹುದ್ದೆಯೂ ಆ ಸಚಿವಾಲಯದ ಸಚಿವರ ನಂತರದ ಆಡಳಿತಾತ್ಮಕ ಪ್ರಮುಖ ಹುದ್ದೆಯಾಗಿದೆ. ಈ ಕುರಿತು ಫಿನಾನ್ಸಿಯಲ್ ಎಕ್ಸ್ಪ್ರೆಸ್ ವೆಬ್ಸೈಟ್ ವರದಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕರ್ನಾಟಕ ಕೇಡರ್ನ ಹಿರಿಯ ಐಐಎಸ್ ಅಧಿಕಾರಿ ಅಜಯ್ ಸೇಠ್ ಅವರಿಗೆ ಕೇಂದ್ರ ಸರ್ಕಾರದಲ್ಲಿ ಉನ್ನತ ಹುದ್ದೆ ದೊರೆತಿದೆ.</p><p>ಕೇಂದ್ರ ಹಣಕಾಸು ಸಚಿವಾಲಯದ ಕಾರ್ಯದರ್ಶಿಯಾಗಿ ಹಾಗೂ ಕಂದಾಯ ಕಾರ್ಯದರ್ಶಿಯಾಗಿ ಅಜಯ್ ಸೇಠ್ ನಿಯುಕ್ತಿಗೊಂಡಿದ್ದಾರೆ. ಇದಕ್ಕೂ ಮೊದಲು ಅವರು ಹಣಕಾಸು ಸಚಿವಾಲಯದ ‘ಆರ್ಥಿಕ ವ್ಯವಹಾರಗಳ ಇಲಾಖೆ’ಯ ಕಾರ್ಯದರ್ಶಿಯಾಗಿ 2021ರ ಏಪ್ರಿಲ್ನಿಂದ ಕಾರ್ಯನಿರ್ವಹಿಸುತ್ತಿದ್ದರು.</p><p>ಕೇಂದ್ರ ಹಣಕಾಸು ಸಚಿವಾಲಯದ ಕಾರ್ಯದರ್ಶಿಯಾಗಿದ್ದ ತುಹಿನ್ ಕಾಂತ್ ಪಾಂಡೆ ಅವರು ಸೆಬಿ ಅಧ್ಯಕ್ಷ ಸ್ಥಾನಕ್ಕೆ ನೇಮಕವಾಗಿದ್ದರು. ಅವರ ಸ್ಥಾನವನ್ನು ಅಜಯ್ ಸೇಠ್ ಅಲಂಕರಿಸಿದ್ದಾರೆ.</p><p>ಐಎಎಸ್ 1987ರ ಬ್ಯಾಚ್ನ ಕರ್ನಾಟಕ ಕೇಡರ್ ಹಿರಿಯ ಅಧಿಕಾರಿಯಾಗಿರುವ ಅಜಯ್ ಸೇಠ್ ಅವರು 2018ರ ಜುಲೈನಲ್ಲಿ ಬೆಂಗಳೂರು ಮೆಟ್ರೊ ರೈಲು ನಿಗಮದ (ಬಿಎಂಆರ್ಸಿಎಲ್) ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದ್ದರು. 2021ರ ಏಪ್ರಿಲ್ನಲ್ಲಿ ಅವರು ಕೇಂದ್ರ ಸೇವೆಗೆ ತೆರಳಿದ್ದರು.</p><p>ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾಗ ನಮ್ಮ ಮೆಟ್ರೊ ನಿರ್ಮಾಣ ಕಾರ್ಯ ವೇಗ ಪಡೆದುಕೊಳ್ಳುವಲ್ಲಿ ಸೇಠ್ ಶ್ರಮಿಸಿದ್ದರು.</p><p>ಕೇಂದ್ರ ಹಣಕಾಸು ಸಚಿವಾಲಯದ ಕಾರ್ಯದರ್ಶಿ ಹುದ್ದೆಯೂ ಆ ಸಚಿವಾಲಯದ ಸಚಿವರ ನಂತರದ ಆಡಳಿತಾತ್ಮಕ ಪ್ರಮುಖ ಹುದ್ದೆಯಾಗಿದೆ. ಈ ಕುರಿತು ಫಿನಾನ್ಸಿಯಲ್ ಎಕ್ಸ್ಪ್ರೆಸ್ ವೆಬ್ಸೈಟ್ ವರದಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>