<p><strong>ಬೆಂಗಳೂರು</strong>: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಘಟಕದ ನೂತನ ಅಧ್ಯಕ್ಷರಾಗಿ ಉದ್ಯಮಿ ಎಸ್. ರಘುನಾಥ್ ಆಯ್ಕೆಯಾಗಿದ್ದಾರೆ.</p>.<p>ಪ್ರತಿಸ್ಪರ್ಧಿ ಶ್ರೀರಂಗಪಟ್ಟಣದ ವೈದಿಕ ವಿದ್ವಾಂಸ ಭಾನುಪ್ರಕಾಶ್ ಶರ್ಮ ಅವರನ್ನು 2,611 ಮತಗಳ ಅಂತರದಿಂದ ಪರಾಭವಗೊಳಿಸಿದ್ದಾರೆ.</p>.<p>ರಾಜ್ಯದಲ್ಲಿ 66 ಸಾವಿರ ಮತದಾರರಿದ್ದಾರೆ. ಬೆಂಗಳೂರು ನಗರ ಪ್ರದೇಶದಲ್ಲೇ 34 ಸಾವಿರ ಮತದಾರರು ಇದ್ದಾರೆ. ಈ ಪೈಕಿ 24,574 ಮಂದಿ ಮತ ಚಲಾಯಿಸಿದರು. ಶರ್ಮ ಅವರಿಗೆ 11,235 ಮತ, ಎಸ್.ರಘುನಾಥ್ ಅವರು 13,339 ಮತ ಪಡೆದರು. </p>.<p>ಕಳೆದ ಬಾರಿ ಚುನಾವಣೆಯಲ್ಲಿ ಎಸ್. ರಘುನಾಥ್ ಅವರು ಅಶೋಕ ಹಾರನಹಳ್ಳಿ ಅವರ ವಿರುದ್ಧ 447 ಮತಗಳಿಂದ ಪರಾಭವಗೊಂಡಿದ್ದರು. ಈ ಬಾರಿ ಅಶೋಕ ಹಾರನಹಳ್ಳಿ ಅವರ ಬೆಂಬಲದೊಂದಿಗೆ ಭಾನುಪ್ರಕಾಶ್ ಶರ್ಮ ಸ್ಪರ್ಧಿಸಿದ್ದರು. ಕಳೆದ ಬಾರಿ ಸೋತಿದ್ದ ಆರ್. ಲಕ್ಷ್ಮಿಕಾಂತ್ ಅವರು, ತಮ್ಮ ತಂಡದೊಂದಿಗೆ ರಘುನಾಥ್ ಅವರನ್ನು ಬೆಂಬಲಿಸಿದ್ದರು.</p>.<p>ಇದೇ ಮೊದಲಿಗೆ ರಾಜ್ಯದ ಪ್ರತಿ ಜಿಲ್ಲೆಗೊಬ್ಬರು ಪ್ರತಿನಿಧಿ ಆಯ್ಕೆ ಮಾಡಲು ಚುನಾವಣೆ ನಡೆಸಲಾಗಿದೆ. ಬೆಂಗಳೂರು ನಗರ ಸೇರಿದಂತೆ ರಾಜ್ಯದ 21 ಜಿಲ್ಲೆಗಳಲ್ಲಿ (1000ಕ್ಕೂ ಮತ ಇರುವ ಜಿಲ್ಲೆಗಳಲ್ಲಿ) ಮತಗಟ್ಟೆ ಸ್ಥಾಪನೆ ಮಾಡಲಾಗಿತ್ತು. ಆಯಾ ಜಿಲ್ಲೆಯವರು ಅಲ್ಲಿಯೇ ಮತ ಚಲಾಯಿಸುವ ವ್ಯವಸ್ಥೆ ಮಾಡಲಾಗಿತ್ತು.</p>.<p>ಬೆಂಗಳೂರಿನಲ್ಲಿ ರಾಯರಾಯ ಕಲ್ಯಾಣ ಮಂಟಪ, ಚಂದ್ರಶೇಖರಭಾರತಿ ಕಲ್ಯಾಣ ಮಂಟಪ ಮತ್ತು ಎ.ಪಿ.ಎಸ್.ಕಾಲೇಜಿನಲ್ಲಿ ಮತದಾನ ಕೇಂದ್ರಗಳನ್ನು ತೆರೆಯಲಾಗಿತ್ತು. ಭಾನುವಾರ ಬೆಳಿಗ್ಗೆ 8 ರಿಂದ ಸಂಜೆ 4ರವರೆಗೆ ಮತದಾನ, ನಂತರ ಮತ ಎಣಿಕೆ ಕಾರ್ಯ ಜರುಗಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಘಟಕದ ನೂತನ ಅಧ್ಯಕ್ಷರಾಗಿ ಉದ್ಯಮಿ ಎಸ್. ರಘುನಾಥ್ ಆಯ್ಕೆಯಾಗಿದ್ದಾರೆ.</p>.<p>ಪ್ರತಿಸ್ಪರ್ಧಿ ಶ್ರೀರಂಗಪಟ್ಟಣದ ವೈದಿಕ ವಿದ್ವಾಂಸ ಭಾನುಪ್ರಕಾಶ್ ಶರ್ಮ ಅವರನ್ನು 2,611 ಮತಗಳ ಅಂತರದಿಂದ ಪರಾಭವಗೊಳಿಸಿದ್ದಾರೆ.</p>.<p>ರಾಜ್ಯದಲ್ಲಿ 66 ಸಾವಿರ ಮತದಾರರಿದ್ದಾರೆ. ಬೆಂಗಳೂರು ನಗರ ಪ್ರದೇಶದಲ್ಲೇ 34 ಸಾವಿರ ಮತದಾರರು ಇದ್ದಾರೆ. ಈ ಪೈಕಿ 24,574 ಮಂದಿ ಮತ ಚಲಾಯಿಸಿದರು. ಶರ್ಮ ಅವರಿಗೆ 11,235 ಮತ, ಎಸ್.ರಘುನಾಥ್ ಅವರು 13,339 ಮತ ಪಡೆದರು. </p>.<p>ಕಳೆದ ಬಾರಿ ಚುನಾವಣೆಯಲ್ಲಿ ಎಸ್. ರಘುನಾಥ್ ಅವರು ಅಶೋಕ ಹಾರನಹಳ್ಳಿ ಅವರ ವಿರುದ್ಧ 447 ಮತಗಳಿಂದ ಪರಾಭವಗೊಂಡಿದ್ದರು. ಈ ಬಾರಿ ಅಶೋಕ ಹಾರನಹಳ್ಳಿ ಅವರ ಬೆಂಬಲದೊಂದಿಗೆ ಭಾನುಪ್ರಕಾಶ್ ಶರ್ಮ ಸ್ಪರ್ಧಿಸಿದ್ದರು. ಕಳೆದ ಬಾರಿ ಸೋತಿದ್ದ ಆರ್. ಲಕ್ಷ್ಮಿಕಾಂತ್ ಅವರು, ತಮ್ಮ ತಂಡದೊಂದಿಗೆ ರಘುನಾಥ್ ಅವರನ್ನು ಬೆಂಬಲಿಸಿದ್ದರು.</p>.<p>ಇದೇ ಮೊದಲಿಗೆ ರಾಜ್ಯದ ಪ್ರತಿ ಜಿಲ್ಲೆಗೊಬ್ಬರು ಪ್ರತಿನಿಧಿ ಆಯ್ಕೆ ಮಾಡಲು ಚುನಾವಣೆ ನಡೆಸಲಾಗಿದೆ. ಬೆಂಗಳೂರು ನಗರ ಸೇರಿದಂತೆ ರಾಜ್ಯದ 21 ಜಿಲ್ಲೆಗಳಲ್ಲಿ (1000ಕ್ಕೂ ಮತ ಇರುವ ಜಿಲ್ಲೆಗಳಲ್ಲಿ) ಮತಗಟ್ಟೆ ಸ್ಥಾಪನೆ ಮಾಡಲಾಗಿತ್ತು. ಆಯಾ ಜಿಲ್ಲೆಯವರು ಅಲ್ಲಿಯೇ ಮತ ಚಲಾಯಿಸುವ ವ್ಯವಸ್ಥೆ ಮಾಡಲಾಗಿತ್ತು.</p>.<p>ಬೆಂಗಳೂರಿನಲ್ಲಿ ರಾಯರಾಯ ಕಲ್ಯಾಣ ಮಂಟಪ, ಚಂದ್ರಶೇಖರಭಾರತಿ ಕಲ್ಯಾಣ ಮಂಟಪ ಮತ್ತು ಎ.ಪಿ.ಎಸ್.ಕಾಲೇಜಿನಲ್ಲಿ ಮತದಾನ ಕೇಂದ್ರಗಳನ್ನು ತೆರೆಯಲಾಗಿತ್ತು. ಭಾನುವಾರ ಬೆಳಿಗ್ಗೆ 8 ರಿಂದ ಸಂಜೆ 4ರವರೆಗೆ ಮತದಾನ, ನಂತರ ಮತ ಎಣಿಕೆ ಕಾರ್ಯ ಜರುಗಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>