ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಪ್ರಕಟಗೊಂಡಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯು 32 ಪುಟಗಳನ್ನು ಹೊಂದಿದೆ. ಮುಖಪುಟದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್.ಎಂ. ವಿಶ್ವೇಶ್ವರಯ್ಯ, ಸರ್ ಮಿರ್ಜಾ ಇಸ್ಮಾಯಿಲ್ ಭಾವಚಿತ್ರ ಪ್ರಕಟಿಸಲಾಗಿದೆ. ಜತೆಗೆ ಸಮ್ಮೇಳನದ ಲಾಂಛನ, ಭುವನೇಶ್ವರಿ ದೇವಿ, ಸಮ್ಮೇಳನಾಧ್ಯಕ್ಷ ಡಾ.ದೊಡ್ಡರಂಗೇಗೌಡ ಹಾಗೂ ಪುರಸಿದ್ಧೇಶ್ವರ ದೇವಸ್ಥಾನದ ಚಿತ್ರವನ್ನು ಒಳಗೊಂಡಿದೆ.