ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅತ್ಯಾಚಾರ, ಅನಾಚಾರದ ಆರೋಪ ಎದುರಿಸುತ್ತಿರುವವರು ಶಂಕರಪೀಠದಲ್ಲಿ ಇರಲು ಅರ್ಹರಲ್ಲ ಎಂದು ಸನಾತನ ಸಂವರ್ಧಿನಿ ಸಭಾ ಈ ಹಿಂದೆ ತೆಗೆದುಕೊಂಡಿದ್ದ ನಿರ್ಣಯವನ್ನು ಹವ್ಯಕ ಮಹಾಸಭಾ ಖಂಡಿಸಿದೆ. ಈ ಖಂಡನಾ ನಿರ್ಣಯವನ್ನು ಹಿಂದಕ್ಕೆ ಪಡೆಯಬೇಕು ಎಂದು ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಒತ್ತಾಯಿಸಿದ್ದರೂ ಮಹಾಸಭಾ ಆ ಬಗ್ಗೆ ಪ್ರತಿಕ್ರಿಯೆ ನೀಡದಿರುವುದು ಖಂಡನೀಯ’ ಎಂದರು.