<p><strong>ಬೆಂಗಳೂರು</strong>: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಗೃಹ ಸಚಿವ ಜಿ. ಪರಮೇಶ್ವರ ಅವರನ್ನು ಸದಾಶಿವನಗರದಲ್ಲಿರುವ ಮನೆಯಲ್ಲಿ ಶನಿವಾರ ಭೇಟಿ ಮಾಡಿ ಕೆಲಹೊತ್ತು ಚರ್ಚೆ ನಡೆಸಿದರು.</p>.<p>ಸಂಬಂಧಿಯೊಬ್ಬರ ಮನೆಗೆ ಬಂದಿದ್ದ ಅಖಿಲೇಶ್ ಸುದ್ದಿಗಾರರ ಜೊತೆ ಮಾತನಾಡಿ, ‘ಇದು ಸೌಜನ್ಯ ಮತ್ತು ಶಿಷ್ಟಾಚಾರದ ಭೇಟಿ ಅಷ್ಟೇ’ ಎಂದರು.</p>.<p>ಬಿಹಾರ ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಅಲ್ಲಿನ ಜನರು ಬದಲಾವಣೆ ಬಯಸಿದ್ದರು. ನಿರುದ್ಯೋಗ, ಬೆಲೆ ಏರಿಕೆ ಬಗ್ಗೆ ಚರ್ಚೆ ನಡೆಸುತ್ತಿದ್ದರು. ಆದರೆ, ಏನಾಯಿತೆಂದು ಗೊತ್ತಿಲ್ಲ’ ಎಂದರು.</p>.<p>‘ಚುನಾವಣೆ ಎದುರಿಸಲು ಬಿಹಾರದ ಜೆಡಿಯು ಸರ್ಕಾರ ಮಾಡಿದ ರೀತಿಯಲ್ಲಿ ನಾವು (ಉತ್ತರ ಪ್ರದೇಶದಲ್ಲಿ) ಘೋಷಣೆಗಳನ್ನು ಮಾಡಬೇಕಿದೆ’ ಎಂದರು. </p>.<p>ಮತ ಕಳವು ಆರೋಪವನ್ನು ಸಮರ್ಥಿಸಿದ ಅಖಿಲೇಶ್, ‘ಉತ್ತರಪ್ರದೇಶದಲ್ಲಿ ಚುನಾವಣೆ ವೇಳೆ ಪೊಲೀಸ್ ಬಲ ಬಳಸಿ ಮತದಾನ ಮಾಡದಂತೆ ತಡೆಯಲಾಗಿತ್ತು. ಬಿಹಾರದಲ್ಲಿ ಹಣ ಕೊಟ್ಟು ಚುನಾವಣೆ ಗೆದ್ದಿದ್ದಾರೆ. ಮುಂದೆ ನಾವು ಕೂಡಾ ಅದೇ ದಾರಿ ಹಿಡಿಯಬೇಕೇ ಎಂಬ ಪ್ರಶ್ನೆಯಿದೆ’ ಎಂದರು.</p>.<p>‘ಕಾಂಗ್ರೆಸ್ ಜೊತೆ ಕೈಜೋಡಿಸಿದರೆ ಅಧಃಪತನ’ ಎಂಬ ಆರೋಪಗಳಿಗೆ ಪ್ರತಿಕ್ರಿಯಿಸಿದ ಅವರು, ‘ಕಾಂಗ್ರೆಸ್ ನಮ್ಮ ಮಿತ್ರ ಪಕ್ಷವೂ ಹೌದು. ಸ್ನೇಹಿತ ಸಂಕಷ್ಟದಲ್ಲಿದ್ದಾಗ ಕೈಬಿಡಬಾರದು. ಮೈತ್ರಿಕೂಟದ ಬಗ್ಗೆ ಈಗ ಮಾತು ಬೇಡ. ಸಮಯ ಬಂದಾಗ ಈ ಬಗ್ಗೆ ಮಾತನಾಡುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಗೃಹ ಸಚಿವ ಜಿ. ಪರಮೇಶ್ವರ ಅವರನ್ನು ಸದಾಶಿವನಗರದಲ್ಲಿರುವ ಮನೆಯಲ್ಲಿ ಶನಿವಾರ ಭೇಟಿ ಮಾಡಿ ಕೆಲಹೊತ್ತು ಚರ್ಚೆ ನಡೆಸಿದರು.</p>.<p>ಸಂಬಂಧಿಯೊಬ್ಬರ ಮನೆಗೆ ಬಂದಿದ್ದ ಅಖಿಲೇಶ್ ಸುದ್ದಿಗಾರರ ಜೊತೆ ಮಾತನಾಡಿ, ‘ಇದು ಸೌಜನ್ಯ ಮತ್ತು ಶಿಷ್ಟಾಚಾರದ ಭೇಟಿ ಅಷ್ಟೇ’ ಎಂದರು.</p>.<p>ಬಿಹಾರ ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಅಲ್ಲಿನ ಜನರು ಬದಲಾವಣೆ ಬಯಸಿದ್ದರು. ನಿರುದ್ಯೋಗ, ಬೆಲೆ ಏರಿಕೆ ಬಗ್ಗೆ ಚರ್ಚೆ ನಡೆಸುತ್ತಿದ್ದರು. ಆದರೆ, ಏನಾಯಿತೆಂದು ಗೊತ್ತಿಲ್ಲ’ ಎಂದರು.</p>.<p>‘ಚುನಾವಣೆ ಎದುರಿಸಲು ಬಿಹಾರದ ಜೆಡಿಯು ಸರ್ಕಾರ ಮಾಡಿದ ರೀತಿಯಲ್ಲಿ ನಾವು (ಉತ್ತರ ಪ್ರದೇಶದಲ್ಲಿ) ಘೋಷಣೆಗಳನ್ನು ಮಾಡಬೇಕಿದೆ’ ಎಂದರು. </p>.<p>ಮತ ಕಳವು ಆರೋಪವನ್ನು ಸಮರ್ಥಿಸಿದ ಅಖಿಲೇಶ್, ‘ಉತ್ತರಪ್ರದೇಶದಲ್ಲಿ ಚುನಾವಣೆ ವೇಳೆ ಪೊಲೀಸ್ ಬಲ ಬಳಸಿ ಮತದಾನ ಮಾಡದಂತೆ ತಡೆಯಲಾಗಿತ್ತು. ಬಿಹಾರದಲ್ಲಿ ಹಣ ಕೊಟ್ಟು ಚುನಾವಣೆ ಗೆದ್ದಿದ್ದಾರೆ. ಮುಂದೆ ನಾವು ಕೂಡಾ ಅದೇ ದಾರಿ ಹಿಡಿಯಬೇಕೇ ಎಂಬ ಪ್ರಶ್ನೆಯಿದೆ’ ಎಂದರು.</p>.<p>‘ಕಾಂಗ್ರೆಸ್ ಜೊತೆ ಕೈಜೋಡಿಸಿದರೆ ಅಧಃಪತನ’ ಎಂಬ ಆರೋಪಗಳಿಗೆ ಪ್ರತಿಕ್ರಿಯಿಸಿದ ಅವರು, ‘ಕಾಂಗ್ರೆಸ್ ನಮ್ಮ ಮಿತ್ರ ಪಕ್ಷವೂ ಹೌದು. ಸ್ನೇಹಿತ ಸಂಕಷ್ಟದಲ್ಲಿದ್ದಾಗ ಕೈಬಿಡಬಾರದು. ಮೈತ್ರಿಕೂಟದ ಬಗ್ಗೆ ಈಗ ಮಾತು ಬೇಡ. ಸಮಯ ಬಂದಾಗ ಈ ಬಗ್ಗೆ ಮಾತನಾಡುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>