<p><strong>ಬೆಂಗಳೂರು</strong>: ರಾಜ್ಯದಲ್ಲಿ ನಡೆದಿದೆ ಎನ್ನಲಾದ ಮತ ಕಳವು ಪ್ರಕರಣಗಳ ಕುರಿತು ರಾಜ್ಯದಾದ್ಯಂತ ದಾಖಲಾಗಿರುವ ಮತ್ತು ಮುಂದೆ ದಾಖಲಾಗಲಿರುವ ಎಲ್ಲ ದೂರುಗಳ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿದೆ.</p><p>ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 5,994 ಮತದಾರರ ಚೀಟಿಗಳನ್ನು ಅನಧಿಕೃತವಾಗಿ ರದ್ದುಪಡಿಸಲು ಯತ್ನಿಸಲಾಗಿತ್ತು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರವು ಈ ಕ್ರಮ ತೆಗೆದುಕೊಂಡಿದೆ.</p><p>ಅಪರಾಧ ತನಿಖಾ ದಳದ (ಸಿಐಡಿ) ಎಡಿಜಿಪಿ ಬಿ.ಕೆ.ಸಿಂಗ್ ಅವರು ಎಸ್ಐಟಿಯ ಮುಖ್ಯಸ್ಥರನ್ನಾಗಿಸಿ, ಸಿಐಡಿಯ ಎಸ್ಪಿಗಳಾದ ಸೈದುಲ್ ಅದಾವತ್ ಮತ್ತು ಶುಭಾನ್ವಿತ ಅವರನ್ನು ಸದಸ್ಯರನ್ನಾಗಿ ಮಾಡಿ ಒಳಾಡಳಿತ ಇಲಾಖೆಯು ಆದೇಶಿಸಿದೆ. ಸಿಐಡಿ ಪೊಲೀಸ್ ಮಹಾ ನಿರ್ದೇಶಕರ ಮೇಲ್ವಿಚಾರಣೆಯಲ್ಲಿ ಎಸ್ಐಟಿ ಕಾರ್ಯನಿರ್ವಹಿಸಲಿದೆ.</p><p>ಎಸ್ಐಟಿಗೆ ಪೊಲೀಸ್ ಠಾಣೆಯ ಸ್ಥಾನ ನೀಡಿ, ಇಡೀ ರಾಜ್ಯದ ವ್ಯಾಪ್ತಿಯಲ್ಲಿ ತನಿಖೆ ನಡೆಸುವ ಅಧಿಕಾರ ನೀಡಲಾಗಿದೆ. ಆಳಂದ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ (26/2023), ಬೇರೆ ಠಾಣೆಗಳಲ್ಲಿ ಈಗಾಗಲೇ ದಾಖಲಾಗಿರುವ ದೂರುಗಳು ಮತ್ತು ಮುಂದೆ ದಾಖಲಾಗಿರುವ ದೂರುಗಳನ್ನು ಎಸ್ಐಟಿ ತನಿಖೆಗೆ ಒಳಪಡಿಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯದಲ್ಲಿ ನಡೆದಿದೆ ಎನ್ನಲಾದ ಮತ ಕಳವು ಪ್ರಕರಣಗಳ ಕುರಿತು ರಾಜ್ಯದಾದ್ಯಂತ ದಾಖಲಾಗಿರುವ ಮತ್ತು ಮುಂದೆ ದಾಖಲಾಗಲಿರುವ ಎಲ್ಲ ದೂರುಗಳ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿದೆ.</p><p>ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 5,994 ಮತದಾರರ ಚೀಟಿಗಳನ್ನು ಅನಧಿಕೃತವಾಗಿ ರದ್ದುಪಡಿಸಲು ಯತ್ನಿಸಲಾಗಿತ್ತು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರವು ಈ ಕ್ರಮ ತೆಗೆದುಕೊಂಡಿದೆ.</p><p>ಅಪರಾಧ ತನಿಖಾ ದಳದ (ಸಿಐಡಿ) ಎಡಿಜಿಪಿ ಬಿ.ಕೆ.ಸಿಂಗ್ ಅವರು ಎಸ್ಐಟಿಯ ಮುಖ್ಯಸ್ಥರನ್ನಾಗಿಸಿ, ಸಿಐಡಿಯ ಎಸ್ಪಿಗಳಾದ ಸೈದುಲ್ ಅದಾವತ್ ಮತ್ತು ಶುಭಾನ್ವಿತ ಅವರನ್ನು ಸದಸ್ಯರನ್ನಾಗಿ ಮಾಡಿ ಒಳಾಡಳಿತ ಇಲಾಖೆಯು ಆದೇಶಿಸಿದೆ. ಸಿಐಡಿ ಪೊಲೀಸ್ ಮಹಾ ನಿರ್ದೇಶಕರ ಮೇಲ್ವಿಚಾರಣೆಯಲ್ಲಿ ಎಸ್ಐಟಿ ಕಾರ್ಯನಿರ್ವಹಿಸಲಿದೆ.</p><p>ಎಸ್ಐಟಿಗೆ ಪೊಲೀಸ್ ಠಾಣೆಯ ಸ್ಥಾನ ನೀಡಿ, ಇಡೀ ರಾಜ್ಯದ ವ್ಯಾಪ್ತಿಯಲ್ಲಿ ತನಿಖೆ ನಡೆಸುವ ಅಧಿಕಾರ ನೀಡಲಾಗಿದೆ. ಆಳಂದ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ (26/2023), ಬೇರೆ ಠಾಣೆಗಳಲ್ಲಿ ಈಗಾಗಲೇ ದಾಖಲಾಗಿರುವ ದೂರುಗಳು ಮತ್ತು ಮುಂದೆ ದಾಖಲಾಗಿರುವ ದೂರುಗಳನ್ನು ಎಸ್ಐಟಿ ತನಿಖೆಗೆ ಒಳಪಡಿಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>