<p><strong>ಬೆಂಗಳೂರು</strong>: ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಗುರುತಿನ ಚೀಟಿ ರದ್ದತಿಗೆ ಶಂಕಾಸ್ಪದ ಸ್ವರೂಪದಲ್ಲಿ 6,018 ಅರ್ಜಿಗಳನ್ನು ಸಲ್ಲಿಸಲಾಗಿತ್ತು ಎಂಬುದನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ತಿಳಿಸಿದೆ.</p>.<p>ಆಳಂದ ಕ್ಷೇತ್ರದ ಮತದಾರರಿಗೆ ಗೊತ್ತಾಗದ ರೀತಿಯಲ್ಲಿ 6,018 ಮತದಾರರ ಚೀಟಿಯನ್ನು ರದ್ದುಪಡಿಸಲು ಯತ್ನಿಸಲಾಗಿತ್ತು ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಆರೋಪ ಕುರಿತಾಗಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯು ‘ಎಕ್ಸ್’ನಲ್ಲಿ ಪ್ರಕಟಣೆ ಹೊರಡಿಸಿದೆ.</p>.<p>‘2022ರ ಡಿಸೆಂಬರ್ನಲ್ಲಿ ಎನ್ವಿಎಸ್ಪಿ, ವಿಎಚ್ಎ ಮತ್ತು ಗರುಡ ಆ್ಯಪ್ಗಳನ್ನು ಬಳಸಿಕೊಂಡು 6,018 ಅರ್ಜಿ (ಮತದಾರರ ಚೀಟಿ ರದ್ದತಿಗೆ ಬಳಸುವ ನಮೂನೆ–7) ಅನ್ನು ಆನ್ಲೈನ್ ಮೂಲಕ ಸಲ್ಲಿಸಲಾಗಿತ್ತು. ಅಷ್ಟು ದೊಡ್ಡ ಪ್ರಮಾಣದಲ್ಲಿ ಅರ್ಜಿಗಳು ಸಲ್ಲಿಕೆಯಾಗಿದ್ದರಿಂದ ಆ ಬಗ್ಗೆ ಸಂದೇಹ ವ್ಯಕ್ತವಾಗಿತ್ತು’ ಎಂದು ಪ್ರಕಟಣೆ ತಿಳಿಸಿದೆ.</p>.ಆಳಂದ ಕ್ಷೇತ್ರದಲ್ಲಿ ಮತಕಳವು ಆರೋಪ: ಚುನಾವಣಾ ಆಯೋಗಕ್ಕೆ ರಾಹುಲ್ ಗಾಂಧಿ ಗಡುವು.<p>‘ಆ ಪ್ರತಿ ಅರ್ಜಿಗಳನ್ನು ನಮ್ಮ ಮತಗಟ್ಟೆ ಅಧಿಕಾರಿಗಳು, ಮತದಾರರ ನೋಂದಣಿ ಅಧಿಕಾರಿಗಳು ಕೂಲಂಕಷವಾಗಿ ಪರಿಶೀಲಿಸಿದ್ದರು. ಅವುಗಳಲ್ಲಿ 24 ಮಾತ್ರವೇ ನೈಜ ಅರ್ಜಿಗಳಾಗಿದ್ದು, ಅವುಗಳನ್ನು ಮಾತ್ರ ಅಂಗೀಕರಿಸಲಾಗಿತ್ತು. ಉಳಿದ 5,994 ಅರ್ಜಿಗಳನ್ನು ತಿರಸ್ಕರಿಸಲಾಗಿತ್ತು’ ಎಂದು ವಿವರಿಸಿದೆ.</p>.<p>‘ಮತಗಟ್ಟೆ ಅಧಿಕಾರಿಗಳು ಮತ್ತು ಮತದಾರರ ನೋಂದಣಾಧಿಕಾರಿಗಳ ವರದಿಯ ಆಧಾರದಲ್ಲಿ 2023ರ ಫೆಬ್ರುವರಿ 21ರಂದು ಆಳಂದ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. ತನಿಖಾಧಿಕಾರಿಯ ಕೋರಿಕೆ ಮೇರೆಗೆ, ಮುಖ್ಯ ಚುನಾವಣಾಧಿಕಾರಿಯು ತನಿಖಾಧಿಕಾರಿ ಮತ್ತು ಸೈಬರ್ ಭದ್ರತಾ ತಜ್ಞರ ಜತೆಗೆ ಸಭೆ ನಡೆಸಿದ್ದರು’ ಎಂದು ತಿಳಿಸಿದೆ.</p>.ಆಳಂದ ಕ್ಷೇತ್ರದಲ್ಲಿ ಮತಕಳವು ಆರೋಪ: ಚುನಾವಣಾ ಆಯೋಗಕ್ಕೆ ರಾಹುಲ್ ಗಾಂಧಿ ಗಡುವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಗುರುತಿನ ಚೀಟಿ ರದ್ದತಿಗೆ ಶಂಕಾಸ್ಪದ ಸ್ವರೂಪದಲ್ಲಿ 6,018 ಅರ್ಜಿಗಳನ್ನು ಸಲ್ಲಿಸಲಾಗಿತ್ತು ಎಂಬುದನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ತಿಳಿಸಿದೆ.</p>.<p>ಆಳಂದ ಕ್ಷೇತ್ರದ ಮತದಾರರಿಗೆ ಗೊತ್ತಾಗದ ರೀತಿಯಲ್ಲಿ 6,018 ಮತದಾರರ ಚೀಟಿಯನ್ನು ರದ್ದುಪಡಿಸಲು ಯತ್ನಿಸಲಾಗಿತ್ತು ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಆರೋಪ ಕುರಿತಾಗಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯು ‘ಎಕ್ಸ್’ನಲ್ಲಿ ಪ್ರಕಟಣೆ ಹೊರಡಿಸಿದೆ.</p>.<p>‘2022ರ ಡಿಸೆಂಬರ್ನಲ್ಲಿ ಎನ್ವಿಎಸ್ಪಿ, ವಿಎಚ್ಎ ಮತ್ತು ಗರುಡ ಆ್ಯಪ್ಗಳನ್ನು ಬಳಸಿಕೊಂಡು 6,018 ಅರ್ಜಿ (ಮತದಾರರ ಚೀಟಿ ರದ್ದತಿಗೆ ಬಳಸುವ ನಮೂನೆ–7) ಅನ್ನು ಆನ್ಲೈನ್ ಮೂಲಕ ಸಲ್ಲಿಸಲಾಗಿತ್ತು. ಅಷ್ಟು ದೊಡ್ಡ ಪ್ರಮಾಣದಲ್ಲಿ ಅರ್ಜಿಗಳು ಸಲ್ಲಿಕೆಯಾಗಿದ್ದರಿಂದ ಆ ಬಗ್ಗೆ ಸಂದೇಹ ವ್ಯಕ್ತವಾಗಿತ್ತು’ ಎಂದು ಪ್ರಕಟಣೆ ತಿಳಿಸಿದೆ.</p>.ಆಳಂದ ಕ್ಷೇತ್ರದಲ್ಲಿ ಮತಕಳವು ಆರೋಪ: ಚುನಾವಣಾ ಆಯೋಗಕ್ಕೆ ರಾಹುಲ್ ಗಾಂಧಿ ಗಡುವು.<p>‘ಆ ಪ್ರತಿ ಅರ್ಜಿಗಳನ್ನು ನಮ್ಮ ಮತಗಟ್ಟೆ ಅಧಿಕಾರಿಗಳು, ಮತದಾರರ ನೋಂದಣಿ ಅಧಿಕಾರಿಗಳು ಕೂಲಂಕಷವಾಗಿ ಪರಿಶೀಲಿಸಿದ್ದರು. ಅವುಗಳಲ್ಲಿ 24 ಮಾತ್ರವೇ ನೈಜ ಅರ್ಜಿಗಳಾಗಿದ್ದು, ಅವುಗಳನ್ನು ಮಾತ್ರ ಅಂಗೀಕರಿಸಲಾಗಿತ್ತು. ಉಳಿದ 5,994 ಅರ್ಜಿಗಳನ್ನು ತಿರಸ್ಕರಿಸಲಾಗಿತ್ತು’ ಎಂದು ವಿವರಿಸಿದೆ.</p>.<p>‘ಮತಗಟ್ಟೆ ಅಧಿಕಾರಿಗಳು ಮತ್ತು ಮತದಾರರ ನೋಂದಣಾಧಿಕಾರಿಗಳ ವರದಿಯ ಆಧಾರದಲ್ಲಿ 2023ರ ಫೆಬ್ರುವರಿ 21ರಂದು ಆಳಂದ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. ತನಿಖಾಧಿಕಾರಿಯ ಕೋರಿಕೆ ಮೇರೆಗೆ, ಮುಖ್ಯ ಚುನಾವಣಾಧಿಕಾರಿಯು ತನಿಖಾಧಿಕಾರಿ ಮತ್ತು ಸೈಬರ್ ಭದ್ರತಾ ತಜ್ಞರ ಜತೆಗೆ ಸಭೆ ನಡೆಸಿದ್ದರು’ ಎಂದು ತಿಳಿಸಿದೆ.</p>.ಆಳಂದ ಕ್ಷೇತ್ರದಲ್ಲಿ ಮತಕಳವು ಆರೋಪ: ಚುನಾವಣಾ ಆಯೋಗಕ್ಕೆ ರಾಹುಲ್ ಗಾಂಧಿ ಗಡುವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>