<p><strong>ಬೆಂಗಳೂರು:</strong> ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಲೇ ಇದ್ದು, ಕೋವಿಡ್-19 ನಿಯಂತ್ರಣಕ್ಕಾಗಿ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಸರ್ವಪಕ್ಷಗಳ ನಾಯಕರ ಸಭೆ ನಡೆಯಿತು.</p>.<p>ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ, ಕೊರೊನಾ ವೈರಸ್ ಸೋಂಕು ಹರಡದಂತೆ ನಿಯಂತ್ರಿಸಲು ಬೇಕಾದ ಹಲವು ನಿರ್ಧಾರಗಳನ್ನು ಸಭೆಯಲ್ಲಿ ಕೈಗೊಳ್ಳಲಾಯಿತು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/siddaramaia-urges-government-to-take-stringent-action-to-controll-coronavirus-715906.html" itemprop="url">ನಮ್ಮ ತಪ್ಪಿಂದ ಯಾವುದೇ ತೊಂದರೆ ಆಗದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು: ಸಿದ್ದರಾಮಯ್ಯ </a></p>.<p>1. ಸರ್ವ ಪಕ್ಷಗಳ ಸಭೆಯಲ್ಲಿ ನಾಯಕರು ಉಪಯುಕ್ತ ಸಲಹೆಗಳನ್ನು ನೀಡಿರುತ್ತಾರೆ. ಸರ್ಕಾರ ಅವುಗಳನ್ನು ಗಂಭೀರವಾಗಿ ಪರಿಗಣಿಸಿ ಅನುಷ್ಠಾನಕ್ಕೆ ತರಲಿದೆ.</p>.<p>2. ಸರ್ವ ಪಕ್ಷದ ಮುಖಂಡರು ಸರ್ಕಾರದ ಕ್ರಮಗಳಿಗೆ ಒಕ್ಕೂರಲಿನ ಬೆಂಬಲ ವ್ಯಕ್ತಪಡಿಸಿ, ಈ ಸಂಕಷ್ಟದ ಸನ್ನಿವೇಶದಲ್ಲಿ ಸರ್ಕಾರದ ಜೊತೆ ಕೈಜೋಡಿಸುವುದಾಗಿ ಸಹಮತ ವ್ಯಕ್ತಪಡಿಸಿದರು.</p>.<p>3. ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರು, ನರ್ಸ್ಗಳು ಹಾಗೂ ಅರೇ ವೈದ್ಯಕೀಯ ಸಿಬ್ಬಂದಿಗೆ ಪಿಪಿಇ ಕಿಟ್, ಮಾಸ್ಕ್ ಹಾಗೂ ಸ್ಯಾನಿಟೈಜರ್ ಬಾಟಲಿಗಳನ್ನು ಸರಬರಾಜು ಮಾಡಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು.</p>.<p>4. ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ರಕ್ಷಣಾ ಸಾಧನಗಳನ್ನು ಒದಗಿಸಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು.</p>.<p>5. ರಾಜ್ಯದ ಗಡಿಗಳಲ್ಲಿ ಸಿಕ್ಕಿಕೊಂಡಿರುವ ಜನರ ವೈದ್ಯಕೀಯ ತಪಾಸಣೆ ನಡೆಸಿ, ಅವರಿಗೆ ಆಶ್ರಯ ಕಲ್ಪಿಸಲು ವ್ಯವಸ್ಥೆ ಮಾಡಲಾಗುವುದು.</p>.<p>6. ಸೋಂಕಿಗೊಳಗಾಗಿರುವ ಪ್ರಯಾಣಿಕರಿಗೆ ಕ್ವಾರಂಟೈನ್ ವ್ಯವಸ್ಥೆಗೆ ಒಳಪಡಿಸಲು ಹಾಗೂ ಆರೋಗ್ಯವಾಗಿರುವ ಪ್ರಯಾಣಿಕರನ್ನು ಅವರ ಸ್ಥಳಗಳಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು.</p>.<p>7. ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಿಗೆ ಅಗತ್ಯ ಸಂಖ್ಯೆಯಲ್ಲಿ ಟೆಸ್ಟಿಂಗ್ ಕಿಟ್ (ಪರೀಕ್ಷಾ ಸಾಧನಗಳು) ವಿತರಿಸಲಾಗುವುದು.</p>.<p>8. ರೈತರ ಕೃಷಿ ಉತ್ಪನ್ನಗಳ, ಸಾಗಣೆ, ಮಾರಾಟ ಮತ್ತು ಒಳಕೆದಾರರಿಗೆ ಸೂಕ್ತವಾಗಿ ವಿತರಿಸಲು ವ್ಯವಸ್ಥೆ ಮಾಡಲಾಗುವುದು.</p>.<p>9. ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಇತ್ಯಾದಿಗಳ ವಿತರಣೆ ಸೂಕ್ತ ವ್ಯವಸ್ಥೆ ಮಾಡಲಾಗುವುದು.</p>.<p>10. ಪಡಿತರವನ್ನು ಫಲಾನುಭವಿಗಳ ಮನೆಬಾಗಿಲಿಗೆ ತಲುಪಿಸುವ ಸಲಹೆಯನ್ನು ವಿರೋಧ ಪಕ್ಷದ ನಾಯಕರು ನೀಡಿದ್ದು, ಆ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು.</p>.<p>11. ಮುಸ್ಲಿಂ ಬಾಂಧವರ ಜೊತೆ ನಾನು ಸಭೆ ನಡೆಸಿದ್ದು, ಅವರೆಲ್ಲರೂ ತಮ್ಮ ತಮ್ಮ ಮನೆಗಳಲ್ಲಿಯೇ ಪ್ರಾರ್ಥನೆಯನ್ನು ನಡೆಸಲು ಒಪ್ಪಿ ಸಹಕರಿಸಿರುತ್ತಾರೆ ಅವರನ್ನು ಅಭಿನಂದಿಸುತ್ತೇನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಲೇ ಇದ್ದು, ಕೋವಿಡ್-19 ನಿಯಂತ್ರಣಕ್ಕಾಗಿ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಸರ್ವಪಕ್ಷಗಳ ನಾಯಕರ ಸಭೆ ನಡೆಯಿತು.</p>.<p>ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ, ಕೊರೊನಾ ವೈರಸ್ ಸೋಂಕು ಹರಡದಂತೆ ನಿಯಂತ್ರಿಸಲು ಬೇಕಾದ ಹಲವು ನಿರ್ಧಾರಗಳನ್ನು ಸಭೆಯಲ್ಲಿ ಕೈಗೊಳ್ಳಲಾಯಿತು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/siddaramaia-urges-government-to-take-stringent-action-to-controll-coronavirus-715906.html" itemprop="url">ನಮ್ಮ ತಪ್ಪಿಂದ ಯಾವುದೇ ತೊಂದರೆ ಆಗದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು: ಸಿದ್ದರಾಮಯ್ಯ </a></p>.<p>1. ಸರ್ವ ಪಕ್ಷಗಳ ಸಭೆಯಲ್ಲಿ ನಾಯಕರು ಉಪಯುಕ್ತ ಸಲಹೆಗಳನ್ನು ನೀಡಿರುತ್ತಾರೆ. ಸರ್ಕಾರ ಅವುಗಳನ್ನು ಗಂಭೀರವಾಗಿ ಪರಿಗಣಿಸಿ ಅನುಷ್ಠಾನಕ್ಕೆ ತರಲಿದೆ.</p>.<p>2. ಸರ್ವ ಪಕ್ಷದ ಮುಖಂಡರು ಸರ್ಕಾರದ ಕ್ರಮಗಳಿಗೆ ಒಕ್ಕೂರಲಿನ ಬೆಂಬಲ ವ್ಯಕ್ತಪಡಿಸಿ, ಈ ಸಂಕಷ್ಟದ ಸನ್ನಿವೇಶದಲ್ಲಿ ಸರ್ಕಾರದ ಜೊತೆ ಕೈಜೋಡಿಸುವುದಾಗಿ ಸಹಮತ ವ್ಯಕ್ತಪಡಿಸಿದರು.</p>.<p>3. ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರು, ನರ್ಸ್ಗಳು ಹಾಗೂ ಅರೇ ವೈದ್ಯಕೀಯ ಸಿಬ್ಬಂದಿಗೆ ಪಿಪಿಇ ಕಿಟ್, ಮಾಸ್ಕ್ ಹಾಗೂ ಸ್ಯಾನಿಟೈಜರ್ ಬಾಟಲಿಗಳನ್ನು ಸರಬರಾಜು ಮಾಡಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು.</p>.<p>4. ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ರಕ್ಷಣಾ ಸಾಧನಗಳನ್ನು ಒದಗಿಸಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು.</p>.<p>5. ರಾಜ್ಯದ ಗಡಿಗಳಲ್ಲಿ ಸಿಕ್ಕಿಕೊಂಡಿರುವ ಜನರ ವೈದ್ಯಕೀಯ ತಪಾಸಣೆ ನಡೆಸಿ, ಅವರಿಗೆ ಆಶ್ರಯ ಕಲ್ಪಿಸಲು ವ್ಯವಸ್ಥೆ ಮಾಡಲಾಗುವುದು.</p>.<p>6. ಸೋಂಕಿಗೊಳಗಾಗಿರುವ ಪ್ರಯಾಣಿಕರಿಗೆ ಕ್ವಾರಂಟೈನ್ ವ್ಯವಸ್ಥೆಗೆ ಒಳಪಡಿಸಲು ಹಾಗೂ ಆರೋಗ್ಯವಾಗಿರುವ ಪ್ರಯಾಣಿಕರನ್ನು ಅವರ ಸ್ಥಳಗಳಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು.</p>.<p>7. ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಿಗೆ ಅಗತ್ಯ ಸಂಖ್ಯೆಯಲ್ಲಿ ಟೆಸ್ಟಿಂಗ್ ಕಿಟ್ (ಪರೀಕ್ಷಾ ಸಾಧನಗಳು) ವಿತರಿಸಲಾಗುವುದು.</p>.<p>8. ರೈತರ ಕೃಷಿ ಉತ್ಪನ್ನಗಳ, ಸಾಗಣೆ, ಮಾರಾಟ ಮತ್ತು ಒಳಕೆದಾರರಿಗೆ ಸೂಕ್ತವಾಗಿ ವಿತರಿಸಲು ವ್ಯವಸ್ಥೆ ಮಾಡಲಾಗುವುದು.</p>.<p>9. ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಇತ್ಯಾದಿಗಳ ವಿತರಣೆ ಸೂಕ್ತ ವ್ಯವಸ್ಥೆ ಮಾಡಲಾಗುವುದು.</p>.<p>10. ಪಡಿತರವನ್ನು ಫಲಾನುಭವಿಗಳ ಮನೆಬಾಗಿಲಿಗೆ ತಲುಪಿಸುವ ಸಲಹೆಯನ್ನು ವಿರೋಧ ಪಕ್ಷದ ನಾಯಕರು ನೀಡಿದ್ದು, ಆ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು.</p>.<p>11. ಮುಸ್ಲಿಂ ಬಾಂಧವರ ಜೊತೆ ನಾನು ಸಭೆ ನಡೆಸಿದ್ದು, ಅವರೆಲ್ಲರೂ ತಮ್ಮ ತಮ್ಮ ಮನೆಗಳಲ್ಲಿಯೇ ಪ್ರಾರ್ಥನೆಯನ್ನು ನಡೆಸಲು ಒಪ್ಪಿ ಸಹಕರಿಸಿರುತ್ತಾರೆ ಅವರನ್ನು ಅಭಿನಂದಿಸುತ್ತೇನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>