<p><strong>ಬೆಂಗಳೂರು</strong>: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ (ಎಸ್ಐಆರ್) ಪೂರ್ವಭಾವಿ ಪ್ರಕ್ರಿಯೆ ಕರ್ನಾಟಕದಲ್ಲೂ ಆರಂಭವಾಗಿದ್ದು, 5.57 ಕೋಟಿ ಮತದಾರರ ಪೈಕಿ 3.05 ಕೋಟಿ ಜನರ ವಿವರಗಳಷ್ಟೇ ತಾಳೆಯಾಗಿದೆ.</p>.<p>ಭಾರತೀಯ ಚುನಾವಣಾ ಆಯೋಗವು ದೇಶದ ಹಲವು ರಾಜ್ಯದಲ್ಲಿ ಎಸ್ಐಆರ್ ನಡೆಸುತ್ತಿದೆ. ಕರ್ನಾಟಕದಲ್ಲಿ ಎಸ್ಐಆರ್ಗೆ ಪೂರ್ವಭಾವಿಯಾಗಿ 2002ರ ಮತ್ತು 2025ರ ಮತದಾರರ ಪಟ್ಟಿಯನ್ನು ಹೋಲಿಕೆ ಮಾಡಲಾಗುತ್ತಿದೆ. ಈ ಕೆಲಸ ಬಹುತೇಕ ಪೂರ್ಣಗೊಂಡಿದ್ದು, ರಾಜ್ಯದ 2.51 ಕೋಟಿ ಮತದಾರರ ವಿವರ ತಾಳೆಯಾಗಿಲ್ಲ. ಬೆಂಗಳೂರು ಒಂದರಲ್ಲೇ 85.14 ಲಕ್ಷ ಮತದಾರರ ವಿವರಗಳು ಹೊಂದಿಕೆಯಾಗಿಲ್ಲ. </p>.<p>ಬೆಂಗಳೂರು ನಗರ ವ್ಯಾಪ್ತಿಯಲ್ಲಿ 1.03 ಕೋಟಿ ಮತದಾರರಿದ್ದು, ಈವರೆಗೆ 17.86 ಲಕ್ಷ ಮಂದಿಯ ವಿವರಗಳಷ್ಟೇ ತಾಳೆಯಾಗಿದೆ. </p>.<p>ದೇಶದ ಹಲವು ರಾಜ್ಯಗಳಲ್ಲಿ ನಡೆಸಲಾಗುತ್ತಿರುವ ಎಸ್ಐಆರ್ ಪ್ರಕ್ರಿಯೆಗೆ 2002ರ ಮತದಾರರ ಪಟ್ಟಿಯನ್ನು ಮೂಲ ಅಧಾರವಾಗಿ ಪರಿಗಣಿಸಲಾಗಿದೆ. 2002ರ ಮತದಾರರ ಪಟ್ಟಿಯ ಜತೆಗೆ ವಿವರ ತಾಳೆಯಾದವರು, ಎಸ್ಐಆರ್ ವೇಳೆ ಯಾವುದೇ ದಾಖಲೆಗಳನ್ನು ಸಲ್ಲಿಸಬೇಕಿಲ್ಲ. ಉಳಿದವರು ತಮ್ಮ ಅರ್ಹತೆಯನ್ನು ಸಾಬೀತುಪಡಿಸಲು ದಾಖಲೆ ಪತ್ರಗಳನ್ನು ಒದಗಿಸಬೇಕಾಗುತ್ತದೆ. </p>.<p>ರಾಜ್ಯದಲ್ಲಿ ಎಸ್ಐಆರ್ ಪೂರ್ವಭಾವಿ ಪ್ರಕ್ರಿಯೆಗೆ ಚುನಾವಣಾ ಆಯೋಗವು 2025ರ ಡಿಸೆಂಬರ್ನಲ್ಲಿಯೇ ಚಾಲನೆ ನೀಡಿದೆ. ಈ ಪ್ರಕ್ರಿಯೆಯ ಈವರೆಗಿನ ಪ್ರಗತಿಗೆ ಸಂಬಂಧಿಸಿದಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯು ಸಿದ್ಧಪಡಿಸಿರುವ ವರದಿಯು ‘ಪ್ರಜಾವಾಣಿ’ಗೆ ಲಭ್ಯವಾಗಿದೆ.</p>.<p>ಈ ಪ್ರಕ್ರಿಯೆಯ ಭಾಗವಾಗಿ ಮೊದಲ ಹಂತದಲ್ಲಿ, 40 ವರ್ಷಕ್ಕಿಂತ ಹೆಚ್ಚು ವಯಸ್ಸಿನವರ ವಿವರಗಳನ್ನು ಹೊಂದಿಸಿ ನೋಡಲಾಗಿದೆ. ರಾಜ್ಯದಲ್ಲಿ ಈ ವಯಸ್ಸಿನ 3.12 ಕೋಟಿ ಮತದಾರರು ಇದ್ದು, ಆ ಪೈಕಿ 1.87 ಕೋಟಿ ಜನರ ವಿವರಗಳಷ್ಟೇ ತಾಳೆಯಾಗಿವೆ. ಇಲ್ಲಿ 1.25 ಕೋಟಿ ಮತದಾರರ ವಿವರಗಳು ಒಂದಕ್ಕೊಂದು ಹೊಂದಿಕೆಯಾಗಿಲ್ಲ.</p>.<p>ನಂತರದ ಹಂತದಲ್ಲಿ ಎಲ್ಲ ವಯಸ್ಸಿನ ಮತದಾರರ ವಿವರಗಳನ್ನು ಮತಗಟ್ಟೆ, ವಿಧಾನಸಭಾ ಕ್ಷೇತ್ರ, ಜಿಲ್ಲೆ ಮತ್ತು ಅಂತರ ಜಿಲ್ಲಾ ಮಟ್ಟದಲ್ಲಿ ಹೋಲಿಸಿ ನೋಡಲಾಗಿದೆ. ಇಷ್ಟು ಹಂತಗಳ ಹೋಲಿಕೆಯ ನಂತರವೂ 2.51 ಕೋಟಿ ಮಂದಿಯ ವಿವರ ತಾಳೆಯಾಗಿಲ್ಲ. ಈ ಪೈಕಿ, 40 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರ ಸಂಖ್ಯೆಯೇ 1.25 ಕೋಟಿಯಷ್ಟಿದೆ.</p>.<p>‘ಇದು ಎಸ್ಐಆರ್ಗೆ ಪೂರ್ವಭಾವಿಯಾಗಿ ನಡೆಯುತ್ತಿರುವ ಪ್ರಕ್ರಿಯೆ. ಎಸ್ಐಆರ್ ಆರಂಭವಾದ ನಂತರ, ಮತಗಟ್ಟೆ ಅಧಿಕಾರಿಗಳು ಮನೆ–ಮನೆಗೆ ಹೋಗಿ ಮತದಾರರ ಪಟ್ಟಿಯ ಪರಿಶೀಲನೆ ನಡೆಸಲಿದ್ದಾರೆ. ಮೃತಪಟ್ಟವರು, ವಿಳಾಸ ಬದಲಾದವರು, ಒಂದಕ್ಕಿಂತ ಹೆಚ್ಚು ಕಡೆ ಮತದಾರರ ಚೀಟಿ ಹೊಂದಿರುವವರ ವಿವರವನ್ನು ಆ ಹಂತದಲ್ಲಿ ಕಲೆ ಹಾಕಲಾಗುತ್ತದೆ. ಅರ್ಹ ದಾಖಲೆಗಳನ್ನು ಒದಗಿಸಿದವರು ಮತದಾರರ ಪಟ್ಟಿಯಲ್ಲಿ ಉಳಿಯುತ್ತಾರೆ. ಆನಂತರ ಅರ್ಹ ಮತದಾರರ ಸಂಖ್ಯೆ ಮತ್ತು ಪ್ರಮಾಣದ ನೈಜ ಚಿತ್ರಣ ಸಿಗಲಿದೆ’ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.</p>.<p>ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್ ಅವರ ಕಚೇರಿ ಫೋನ್ ಮತ್ತು ಮೊಬೈಲ್ಗೆ ಕರೆ ಮಾಡಲಾಗಿತ್ತು. ಅವರು ಕರೆ ಸ್ವೀಕರಿಸಲಿಲ್ಲ.</p>.<p><strong>ಉತ್ತರಹಳ್ಳಿ: ವಿವರ ಲಭ್ಯವಿಲ್ಲ</strong></p><p>2025ರ ಮತದಾರರ ಪಟ್ಟಿಯಲ್ಲಿ ಇರುವವರ ವಿವರಗಳನ್ನು ಮುಖ್ಯ ಚುನಾವಣಾಧಿಕಾರಿ ಕಚೇರಿಯ ಜಾಲತಾಣದಲ್ಲಿ, ಪ್ರತ್ಯೇಕವಾಗಿ ಹುಡುಕುವ ವ್ಯವಸ್ಥೆ ಮಾಡಲಾಗಿದೆ. ಆದರೆ, 2002ರ ಮತದಾರರ ಪಟ್ಟಿ ಮತ್ತು ಚೀಟಿಗೆ ಸಂಬಂಧಿಸಿದಂತೆ ಬೆಂಗಳೂರು ನಗರ ಜಿಲ್ಲೆಯ, ಅಂದಿನ ಅವಿಭಜಿತ ಉತ್ತರಹಳ್ಳಿ ವಿಧಾನಸಭಾ ಕ್ಷೇತ್ರದ ಮತದಾರರ ವಿವರಗಳು ಈ ವ್ಯವಸ್ಥೆಯಲ್ಲಿ ಲಭ್ಯವಿಲ್ಲ.</p><p>‘ಈ ವಿವರಗಳನ್ನು ಒದಗಿಸಿ ಎಂದು ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ಹಲವು ಬಾರಿ ಪತ್ರ ಬರೆಯಲಾಗಿದೆ. ಆದರೆ ಈವರೆಗೆ ಆ ಲೋಪವನ್ನು ಸರಿಪಡಿಸಿಲ್ಲ. ಪರಿಣಾಮವಾಗಿ ಎರಡೂ ಮತದಾರರ ಪಟ್ಟಿಯನ್ನು ಹೋಲಿಸಿ ನೋಡುವ ಕೆಲಸ ವಿಳಂಬವಾಗುತ್ತಿದೆ’ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ (ಎಸ್ಐಆರ್) ಪೂರ್ವಭಾವಿ ಪ್ರಕ್ರಿಯೆ ಕರ್ನಾಟಕದಲ್ಲೂ ಆರಂಭವಾಗಿದ್ದು, 5.57 ಕೋಟಿ ಮತದಾರರ ಪೈಕಿ 3.05 ಕೋಟಿ ಜನರ ವಿವರಗಳಷ್ಟೇ ತಾಳೆಯಾಗಿದೆ.</p>.<p>ಭಾರತೀಯ ಚುನಾವಣಾ ಆಯೋಗವು ದೇಶದ ಹಲವು ರಾಜ್ಯದಲ್ಲಿ ಎಸ್ಐಆರ್ ನಡೆಸುತ್ತಿದೆ. ಕರ್ನಾಟಕದಲ್ಲಿ ಎಸ್ಐಆರ್ಗೆ ಪೂರ್ವಭಾವಿಯಾಗಿ 2002ರ ಮತ್ತು 2025ರ ಮತದಾರರ ಪಟ್ಟಿಯನ್ನು ಹೋಲಿಕೆ ಮಾಡಲಾಗುತ್ತಿದೆ. ಈ ಕೆಲಸ ಬಹುತೇಕ ಪೂರ್ಣಗೊಂಡಿದ್ದು, ರಾಜ್ಯದ 2.51 ಕೋಟಿ ಮತದಾರರ ವಿವರ ತಾಳೆಯಾಗಿಲ್ಲ. ಬೆಂಗಳೂರು ಒಂದರಲ್ಲೇ 85.14 ಲಕ್ಷ ಮತದಾರರ ವಿವರಗಳು ಹೊಂದಿಕೆಯಾಗಿಲ್ಲ. </p>.<p>ಬೆಂಗಳೂರು ನಗರ ವ್ಯಾಪ್ತಿಯಲ್ಲಿ 1.03 ಕೋಟಿ ಮತದಾರರಿದ್ದು, ಈವರೆಗೆ 17.86 ಲಕ್ಷ ಮಂದಿಯ ವಿವರಗಳಷ್ಟೇ ತಾಳೆಯಾಗಿದೆ. </p>.<p>ದೇಶದ ಹಲವು ರಾಜ್ಯಗಳಲ್ಲಿ ನಡೆಸಲಾಗುತ್ತಿರುವ ಎಸ್ಐಆರ್ ಪ್ರಕ್ರಿಯೆಗೆ 2002ರ ಮತದಾರರ ಪಟ್ಟಿಯನ್ನು ಮೂಲ ಅಧಾರವಾಗಿ ಪರಿಗಣಿಸಲಾಗಿದೆ. 2002ರ ಮತದಾರರ ಪಟ್ಟಿಯ ಜತೆಗೆ ವಿವರ ತಾಳೆಯಾದವರು, ಎಸ್ಐಆರ್ ವೇಳೆ ಯಾವುದೇ ದಾಖಲೆಗಳನ್ನು ಸಲ್ಲಿಸಬೇಕಿಲ್ಲ. ಉಳಿದವರು ತಮ್ಮ ಅರ್ಹತೆಯನ್ನು ಸಾಬೀತುಪಡಿಸಲು ದಾಖಲೆ ಪತ್ರಗಳನ್ನು ಒದಗಿಸಬೇಕಾಗುತ್ತದೆ. </p>.<p>ರಾಜ್ಯದಲ್ಲಿ ಎಸ್ಐಆರ್ ಪೂರ್ವಭಾವಿ ಪ್ರಕ್ರಿಯೆಗೆ ಚುನಾವಣಾ ಆಯೋಗವು 2025ರ ಡಿಸೆಂಬರ್ನಲ್ಲಿಯೇ ಚಾಲನೆ ನೀಡಿದೆ. ಈ ಪ್ರಕ್ರಿಯೆಯ ಈವರೆಗಿನ ಪ್ರಗತಿಗೆ ಸಂಬಂಧಿಸಿದಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯು ಸಿದ್ಧಪಡಿಸಿರುವ ವರದಿಯು ‘ಪ್ರಜಾವಾಣಿ’ಗೆ ಲಭ್ಯವಾಗಿದೆ.</p>.<p>ಈ ಪ್ರಕ್ರಿಯೆಯ ಭಾಗವಾಗಿ ಮೊದಲ ಹಂತದಲ್ಲಿ, 40 ವರ್ಷಕ್ಕಿಂತ ಹೆಚ್ಚು ವಯಸ್ಸಿನವರ ವಿವರಗಳನ್ನು ಹೊಂದಿಸಿ ನೋಡಲಾಗಿದೆ. ರಾಜ್ಯದಲ್ಲಿ ಈ ವಯಸ್ಸಿನ 3.12 ಕೋಟಿ ಮತದಾರರು ಇದ್ದು, ಆ ಪೈಕಿ 1.87 ಕೋಟಿ ಜನರ ವಿವರಗಳಷ್ಟೇ ತಾಳೆಯಾಗಿವೆ. ಇಲ್ಲಿ 1.25 ಕೋಟಿ ಮತದಾರರ ವಿವರಗಳು ಒಂದಕ್ಕೊಂದು ಹೊಂದಿಕೆಯಾಗಿಲ್ಲ.</p>.<p>ನಂತರದ ಹಂತದಲ್ಲಿ ಎಲ್ಲ ವಯಸ್ಸಿನ ಮತದಾರರ ವಿವರಗಳನ್ನು ಮತಗಟ್ಟೆ, ವಿಧಾನಸಭಾ ಕ್ಷೇತ್ರ, ಜಿಲ್ಲೆ ಮತ್ತು ಅಂತರ ಜಿಲ್ಲಾ ಮಟ್ಟದಲ್ಲಿ ಹೋಲಿಸಿ ನೋಡಲಾಗಿದೆ. ಇಷ್ಟು ಹಂತಗಳ ಹೋಲಿಕೆಯ ನಂತರವೂ 2.51 ಕೋಟಿ ಮಂದಿಯ ವಿವರ ತಾಳೆಯಾಗಿಲ್ಲ. ಈ ಪೈಕಿ, 40 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರ ಸಂಖ್ಯೆಯೇ 1.25 ಕೋಟಿಯಷ್ಟಿದೆ.</p>.<p>‘ಇದು ಎಸ್ಐಆರ್ಗೆ ಪೂರ್ವಭಾವಿಯಾಗಿ ನಡೆಯುತ್ತಿರುವ ಪ್ರಕ್ರಿಯೆ. ಎಸ್ಐಆರ್ ಆರಂಭವಾದ ನಂತರ, ಮತಗಟ್ಟೆ ಅಧಿಕಾರಿಗಳು ಮನೆ–ಮನೆಗೆ ಹೋಗಿ ಮತದಾರರ ಪಟ್ಟಿಯ ಪರಿಶೀಲನೆ ನಡೆಸಲಿದ್ದಾರೆ. ಮೃತಪಟ್ಟವರು, ವಿಳಾಸ ಬದಲಾದವರು, ಒಂದಕ್ಕಿಂತ ಹೆಚ್ಚು ಕಡೆ ಮತದಾರರ ಚೀಟಿ ಹೊಂದಿರುವವರ ವಿವರವನ್ನು ಆ ಹಂತದಲ್ಲಿ ಕಲೆ ಹಾಕಲಾಗುತ್ತದೆ. ಅರ್ಹ ದಾಖಲೆಗಳನ್ನು ಒದಗಿಸಿದವರು ಮತದಾರರ ಪಟ್ಟಿಯಲ್ಲಿ ಉಳಿಯುತ್ತಾರೆ. ಆನಂತರ ಅರ್ಹ ಮತದಾರರ ಸಂಖ್ಯೆ ಮತ್ತು ಪ್ರಮಾಣದ ನೈಜ ಚಿತ್ರಣ ಸಿಗಲಿದೆ’ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.</p>.<p>ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್ ಅವರ ಕಚೇರಿ ಫೋನ್ ಮತ್ತು ಮೊಬೈಲ್ಗೆ ಕರೆ ಮಾಡಲಾಗಿತ್ತು. ಅವರು ಕರೆ ಸ್ವೀಕರಿಸಲಿಲ್ಲ.</p>.<p><strong>ಉತ್ತರಹಳ್ಳಿ: ವಿವರ ಲಭ್ಯವಿಲ್ಲ</strong></p><p>2025ರ ಮತದಾರರ ಪಟ್ಟಿಯಲ್ಲಿ ಇರುವವರ ವಿವರಗಳನ್ನು ಮುಖ್ಯ ಚುನಾವಣಾಧಿಕಾರಿ ಕಚೇರಿಯ ಜಾಲತಾಣದಲ್ಲಿ, ಪ್ರತ್ಯೇಕವಾಗಿ ಹುಡುಕುವ ವ್ಯವಸ್ಥೆ ಮಾಡಲಾಗಿದೆ. ಆದರೆ, 2002ರ ಮತದಾರರ ಪಟ್ಟಿ ಮತ್ತು ಚೀಟಿಗೆ ಸಂಬಂಧಿಸಿದಂತೆ ಬೆಂಗಳೂರು ನಗರ ಜಿಲ್ಲೆಯ, ಅಂದಿನ ಅವಿಭಜಿತ ಉತ್ತರಹಳ್ಳಿ ವಿಧಾನಸಭಾ ಕ್ಷೇತ್ರದ ಮತದಾರರ ವಿವರಗಳು ಈ ವ್ಯವಸ್ಥೆಯಲ್ಲಿ ಲಭ್ಯವಿಲ್ಲ.</p><p>‘ಈ ವಿವರಗಳನ್ನು ಒದಗಿಸಿ ಎಂದು ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ಹಲವು ಬಾರಿ ಪತ್ರ ಬರೆಯಲಾಗಿದೆ. ಆದರೆ ಈವರೆಗೆ ಆ ಲೋಪವನ್ನು ಸರಿಪಡಿಸಿಲ್ಲ. ಪರಿಣಾಮವಾಗಿ ಎರಡೂ ಮತದಾರರ ಪಟ್ಟಿಯನ್ನು ಹೋಲಿಸಿ ನೋಡುವ ಕೆಲಸ ವಿಳಂಬವಾಗುತ್ತಿದೆ’ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>