ಈ ಸಂಬಂಧ ಮಧುಕರ್ ಅಂಗೂರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಾನ್ಯ ಮಾಡಿದ್ದು, ‘ಅಗತ್ಯ ಎನಿಸಿದರೆ ಜಾರಿ ನಿರ್ದೇಶನಾಲಯ ಸುಪ್ರೀಂ ಕೋರ್ಟ್ ಮುಂದೆ ಈ ಸಂಬಂಧ ಮರು ಪರಿಶೀಲನಾ ಅರ್ಜಿ ಸಲ್ಲಿಸಿ ಅರ್ಜಿಯನ್ನು ಪುನಃ ಪರಿಗಣಿಸುವಂತೆ ಕೋರಲು ಸ್ವತಂತ್ರವಿದೆ’ ಎಂದು ತಿಳಿಸಿದೆ.