‘ನನ್ನನ್ನು ಸಿ.ಎಂ ಮಾಡಿದ್ದು ನಾನು ಎಂದು ಮಾಜಿ ಮುಖ್ಯಮಂತ್ರಿಯೊಬ್ಬರು ಹೇಳುತ್ತಾರೆ. ಆದರೆ, ತಂದೆ–ತಾಯಿ, ನಿಮ್ಮೆಲ್ಲರ ಆಶೀರ್ವಾದದಿಂದ ಅದು ಸಾಧ್ಯವಾಗಿದೆ’ ಎಂದು ಕಾಂಗ್ರೆಸ್ನ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದರು. ‘ಜಿಲ್ಲೆಗೆ ನೀಡಿದ್ದ ಅನುದಾನ ಕಡಿತಗೊಳಿಸಿದ್ದ ಬಿಜೆಪಿ ಸರ್ಕಾರ ಮಂಡ್ಯದಲ್ಲಿ ವಿಜಯ ಪತಾಕೆ ಹಾರಿಸುತ್ತೇವೆ ಎನ್ನುತ್ತಾರೆ. ಆದರೆ, ಯಾವ ರೀತಿ ಪತಾಕೆ ಹಾರಿಸುತ್ತಾರೋ ಗೊತ್ತಿಲ್ಲ’ ಎಂದು ಸಚಿವ ನಾರಾಯಣ ಗೌಡ ವಿರುದ್ಧ ಪರೋಕ್ಷವಾಗಿ
ವ್ಯಂಗ್ಯವಾಡಿದರು.