ಸುದ್ದಿಗಾರರ ಜತೆ ಬುಧವಾರ ಈ ಕುರಿತು ಮಾತನಾಡಿದ ಸಿದ್ದರಾಮಯ್ಯ, ರಾಜ್ಯ ಸರ್ಕಾರ ನಮ್ಮ ಕುಟುಂಬದ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂಬ ಕುಮಾರಸ್ವಾಮಿ ಹೇಳಿಕೆಯಲ್ಲಿ ಸತ್ಯವಿಲ್ಲ. ಅಂತಹ ಕೆಲಸವನ್ನು ಸರ್ಕಾರ ಮಾಡಿಲ್ಲ. ಹಿಂದೆ ಮುಖ್ಯಮಂತ್ರಿಯಾದಾಗಲೂ, ಈಗಲೂ ಮಾಡಿಲ್ಲ. ನನ್ನ ರಾಜಕೀಯ ಜೀವನದಲ್ಲಿ ಇಲ್ಲಿಯವರೆಗೂ ಇಂತಹ ನೀಚತನಕ್ಕೆ ಅವಕಾಶ ನೀಡಿಲ್ಲ’ ಎಂದರು.