ಬೆಂಗಳೂರು: ಅಕ್ರಮವಾಗಿ ಕೋಟ್ಯಂತರ ರೂಪಾಯಿಯನ್ನು ಮೂರನೇ ವ್ಯಕ್ತಿಗೆ ವರ್ಗಾವಣೆ ಮಾಡಿದ ಆರೋಪ ಎದುರಿಸುತ್ತಿರುವ ಕನ್ನಡದ ಸುದ್ದಿ ವಾಹಿನಿ ‘ಬಿ’ ಟಿವಿ ವ್ಯವಸ್ಥಾಪಕ ನಿರ್ದೇಶಕ ಗಂಗಾಧರಪ್ಪ ಮುನೀಂದ್ರ ಕುಮಾರ್ ಅಲಿಯಾಸ್ ಜಿ.ಎಂ.ಕುಮಾರ್ (50) ಅವರಿಗೆ ಸೆಷನ್ಸ್ ನ್ಯಾಯಾಲಯ ನೀಡಿದ್ದ ಜಾಮೀನನ್ನು ರದ್ದುಪಡಿಸಿರುವ ಹೈಕೋರ್ಟ್, ಆರೋಪಿಯನ್ನು ಕೂಡಲೇ ವಶಕ್ಕೆ ಪಡೆದು ಸಂಬಂಧಿಸಿದ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುವಂತೆ ಸಿಸಿಬಿ ಪೊಲೀಸರಿಗೆ ಆದೇಶಿಸಿದೆ.