ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಪೇಂದ್ರ ರೆಡ್ಡಿ ಅವರ ಗೆಲುವಿಗಾಗಿ ಶಾಸಕರ ಖರೀದಿಗೆ ಯತ್ನ ಆರೋಪ– ಕಾಂಗ್ರೆಸ್ ದೂರು

Published 20 ಫೆಬ್ರುವರಿ 2024, 20:32 IST
Last Updated 20 ಫೆಬ್ರುವರಿ 2024, 20:32 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯಸಭೆ ಚುನಾವಣೆಯಲ್ಲಿ ಐದನೇ ಅಭ್ಯರ್ಥಿಯಾಗಿ ಕಣದಲ್ಲಿರುವ ಡಿ. ಕುಪೇಂದ್ರ ರೆಡ್ಡಿ ಅವರ ಗೆಲುವಿಗಾಗಿ ಜೆಡಿಎಸ್ ಮತ್ತು ಬಿಜೆಪಿ ನಾಯಕರು, ಪಕ್ಷದ ಶಾಸಕರ ಖರೀದಿಗೆ ಮುಂದಾಗಿದ್ದಾರೆ’ ಎಂದು ಆರೋಪಿಸಿ ಪೊಲೀಸ್ ಕಮಿಷನರ್‌ ಬಿ. ದಯಾನಂದ ಅವರಿಗೆ ಕಾಂಗ್ರೆಸ್‌ ಮುಖಂಡರು ದೂರು ನೀಡಿದ್ದಾರೆ.

ಮುಖ್ಯಮಂತ್ರಿಯ ಕಾನೂನು ಸಲಹೆಗಾರರೂ ಆದ ಶಾಸಕರಾದ ಎ.ಎಸ್‌. ಪೊನ್ನಣ್ಣ, ಎನ್‌.ಎಚ್‌. ಕೋನರಡ್ಡಿ ನೇತೃತ್ವದ ಕಾಂಗ್ರೆಸ್‌ ನಿಯೋಗವು ಈ ದೂರು ನೀಡಿದ್ದು, ರಾಜ್ಯಸಭಾ ಚುನಾವಣೆಯನ್ನು ಪಾರದರ್ಶಕವಾಗಿ ನಡೆಸಲು ಕ್ರಮಕೈಗೊಳ್ಳಬೇಕು ಎಂದೂ ಒತ್ತಾಯಿಸಿದೆ.

ರಾಜ್ಯಸಭೆ ಚುನಾವಣೆಗೆ ಆಮಿಷ ನೀಡುತ್ತಿರುವ ಬಗ್ಗೆ ಕಾಂಗ್ರೆಸ್ ಶಾಸಕರು ದೂರು ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ‘ನನಗೂ ಈ ವಿಚಾರವಾಗಿ ಮಾಹಿತಿ ಬಂದಿವೆ. ತನಿಖಾ ತಂಡ ಈ ವಿಚಾರದ ಕುರಿತು ತನಿಖೆ ನಡೆಸಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT