<p><strong>ಬೆಂಗಳೂರು</strong>: ವಿಧಾನಸಭಾ ಕ್ಷೇತ್ರಗಳಲ್ಲಿನ ವಿವಿಧ ಮಠಗಳ ಅಭಿವೃದ್ಧಿ ಮತ್ತು ದೇವಾಲಯಗಳ ಜೀರ್ಣೋದ್ಧಾರಕ್ಕೆ ಮುಖ್ಯಮಂತ್ರಿ ವಿಶೇಷ ಅನುದಾನದಡಿ ₹85 ಕೋಟಿ ಹಾಗೂ ವಿವಿಧ ಸಮುದಾಯಗಳ ಅಭಿವೃದ್ಧಿ ಕಾರ್ಯಕ್ರಮದಡಿ ಹೆಚ್ಚುವರಿಯಾಗಿ ₹70 ಕೋಟಿ ನೀಡಿದೆ. </p>.<p>ವಿಧಾನಸಭೆಯಲ್ಲಿ ಮಂಗಳವಾರ ಮಂಡಿಸಿದ ಈ ಸಾಲಿನ ಮೊದಲ ಪೂರಕ ಅಂದಾಜಿನಲ್ಲಿ ಒಟ್ಟು ₹8,573.72 ಕೋಟಿ ಒದಗಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಕಾನೂನು ಸಚಿವ ಎಚ್.ಕೆ.ಪಾಟೀಲ ಅವರು ಪೂರಕ ಅಂದಾಜು ಮಂಡಿಸಿದರು.</p>.<p>ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲು ₹52.05 ಕೋಟಿ ಹಾಗೂ ಕರ್ನಾಟಕ ರಾಜ್ಯ ಹಜ್ ಸಮಿತಿಯ ಆಡಳಿತಾತ್ಮಕ ವೆಚ್ಚ ಮತ್ತು ಹಜ್ ಭವನದ ನಿರ್ವಹಣೆಗಾಗಿ ₹1.50 ಕೋಟಿ ಹೆಚ್ಚುವರಿಯಾಗಿ ನೀಡಲಾಗಿದೆ</p>.<p>ಗ್ರಾಮೀಣ ರಸ್ತೆಗಳು ಯೋಜನೆಯಡಿ ಕಾಮಗಾರಿಗಳ ಅನುಷ್ಠಾನಕ್ಕಾಗಿ ₹450 ಕೋಟಿ ಅನುದಾನವನ್ನು ಹೆಚ್ಚುವರಿಯಾಗಿ ಒದಗಿಸಲಾಗುವುದು.</p>.<p>ಪ್ರಮುಖ ವಲಯಗಳಲ್ಲಿ ಖಾಸಗಿ ಸಹಭಾಗಿತ್ವವನ್ನು(ಪಿಪಿಸಿ) ಪ್ರೋತ್ಸಾಹಿಸುವ ಉದ್ದೇಶದಿಂದ ವಿಶ್ಲೇಷಣಾತ್ಮಕ ಅಧ್ಯಯನ ಕೈಗೊಳ್ಳಲಾಗುತ್ತಿದ್ದು, ಅದರ ವೆಚ್ಚಕ್ಕಾಗಿ ₹9.75 ಕೋಟಿ ಹೆಚ್ಚುವರಿ ಮೊತ್ತ ಒದಗಿಸಲಾಗುವುದು. ಸಚಿವಾಲಯ ಮತ್ತು ಸರ್ಕಾರಿ ವಾಹನ ಖರೀದಿಗೆ ₹5 ಕೋಟಿ, ವಿಧಾನಸಭಾ ಸದಸ್ಯರಿಗೆ ಮೋಟಾರು ವಾಹನಗಳ ಖರೀದಿಗೆ ಹೆಚ್ಚುವರಿಯಾಗಿ ₹1 ಕೋಟಿ, ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರ ಉಪಯೋಗಕ್ಕಾಗಿ ವಾಹನ ಖರೀದಿಸಲು ₹40 ಲಕ್ಷ, ರಾಜ್ಯಪಾಲರ ಸಚಿವಾಲಯಕ್ಕೆ ವಾಹನ ಖರೀದಿಸಲು ₹79.24 ಲಕ್ಷ ಒದಗಿಸುವುದಾಗಿ ಪೂರಕ ಅಂದಾಜಿನಲ್ಲಿ ಉಲ್ಲೇಖಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವಿಧಾನಸಭಾ ಕ್ಷೇತ್ರಗಳಲ್ಲಿನ ವಿವಿಧ ಮಠಗಳ ಅಭಿವೃದ್ಧಿ ಮತ್ತು ದೇವಾಲಯಗಳ ಜೀರ್ಣೋದ್ಧಾರಕ್ಕೆ ಮುಖ್ಯಮಂತ್ರಿ ವಿಶೇಷ ಅನುದಾನದಡಿ ₹85 ಕೋಟಿ ಹಾಗೂ ವಿವಿಧ ಸಮುದಾಯಗಳ ಅಭಿವೃದ್ಧಿ ಕಾರ್ಯಕ್ರಮದಡಿ ಹೆಚ್ಚುವರಿಯಾಗಿ ₹70 ಕೋಟಿ ನೀಡಿದೆ. </p>.<p>ವಿಧಾನಸಭೆಯಲ್ಲಿ ಮಂಗಳವಾರ ಮಂಡಿಸಿದ ಈ ಸಾಲಿನ ಮೊದಲ ಪೂರಕ ಅಂದಾಜಿನಲ್ಲಿ ಒಟ್ಟು ₹8,573.72 ಕೋಟಿ ಒದಗಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಕಾನೂನು ಸಚಿವ ಎಚ್.ಕೆ.ಪಾಟೀಲ ಅವರು ಪೂರಕ ಅಂದಾಜು ಮಂಡಿಸಿದರು.</p>.<p>ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲು ₹52.05 ಕೋಟಿ ಹಾಗೂ ಕರ್ನಾಟಕ ರಾಜ್ಯ ಹಜ್ ಸಮಿತಿಯ ಆಡಳಿತಾತ್ಮಕ ವೆಚ್ಚ ಮತ್ತು ಹಜ್ ಭವನದ ನಿರ್ವಹಣೆಗಾಗಿ ₹1.50 ಕೋಟಿ ಹೆಚ್ಚುವರಿಯಾಗಿ ನೀಡಲಾಗಿದೆ</p>.<p>ಗ್ರಾಮೀಣ ರಸ್ತೆಗಳು ಯೋಜನೆಯಡಿ ಕಾಮಗಾರಿಗಳ ಅನುಷ್ಠಾನಕ್ಕಾಗಿ ₹450 ಕೋಟಿ ಅನುದಾನವನ್ನು ಹೆಚ್ಚುವರಿಯಾಗಿ ಒದಗಿಸಲಾಗುವುದು.</p>.<p>ಪ್ರಮುಖ ವಲಯಗಳಲ್ಲಿ ಖಾಸಗಿ ಸಹಭಾಗಿತ್ವವನ್ನು(ಪಿಪಿಸಿ) ಪ್ರೋತ್ಸಾಹಿಸುವ ಉದ್ದೇಶದಿಂದ ವಿಶ್ಲೇಷಣಾತ್ಮಕ ಅಧ್ಯಯನ ಕೈಗೊಳ್ಳಲಾಗುತ್ತಿದ್ದು, ಅದರ ವೆಚ್ಚಕ್ಕಾಗಿ ₹9.75 ಕೋಟಿ ಹೆಚ್ಚುವರಿ ಮೊತ್ತ ಒದಗಿಸಲಾಗುವುದು. ಸಚಿವಾಲಯ ಮತ್ತು ಸರ್ಕಾರಿ ವಾಹನ ಖರೀದಿಗೆ ₹5 ಕೋಟಿ, ವಿಧಾನಸಭಾ ಸದಸ್ಯರಿಗೆ ಮೋಟಾರು ವಾಹನಗಳ ಖರೀದಿಗೆ ಹೆಚ್ಚುವರಿಯಾಗಿ ₹1 ಕೋಟಿ, ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರ ಉಪಯೋಗಕ್ಕಾಗಿ ವಾಹನ ಖರೀದಿಸಲು ₹40 ಲಕ್ಷ, ರಾಜ್ಯಪಾಲರ ಸಚಿವಾಲಯಕ್ಕೆ ವಾಹನ ಖರೀದಿಸಲು ₹79.24 ಲಕ್ಷ ಒದಗಿಸುವುದಾಗಿ ಪೂರಕ ಅಂದಾಜಿನಲ್ಲಿ ಉಲ್ಲೇಖಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>