<p><strong>ಬೆಂಗಳೂರು</strong>: ‘ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಿಸುವ ವಿಚಾರ ಸುಪ್ರೀಂ ಕೋರ್ಟ್ನಲ್ಲಿ ಇರುವುದರಿಂದ ಭೂಸ್ವಾಧೀನಕ್ಕೆ ಅವಕಾಶ ನೀಡಬಾರದೆಂದು ಕೇಂದ್ರ ಸರ್ಕಾರಕ್ಕೆ ಆಂಧ್ರ ಪ್ರದೇಶ ಸರ್ಕಾರ ಪತ್ರ ಬರೆದಿದೆ. ಕೇಂದ್ರ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ, ಈ ಹಿಂದೆ ಆಗಿರುವ ಆದೇಶದಂತೆ ನಡೆದುಕೊಳ್ಳಬೇಕು’ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಒತ್ತಾಯಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು 519 ಮೀಟರ್ನಿಂದ 524 ಮೀಟರ್ಗೆ ಹೆಚ್ಚಿಸುವ ವಿಚಾರದಲ್ಲಿ ಮಹಾರಾಷ್ಟ್ರ ಹಾಗೂ ಆಂಧ್ರ ಪ್ರದೇಶ ಸರ್ಕಾರ ಮಧ್ಯಪ್ರವೇಶ ಮಾಡುವುದು ಸರಿಯಲ್ಲ’ ಎಂದರು.</p>.<p>‘ಮಾರ್ಚ್ 10ರಿಂದ ಲೋಕಸಭೆ ಕಲಾಪ ಆರಂಭವಾಗಲಿದ್ದು, ರಾಜ್ಯದ ಸಂಸದರು ಈ ವಿಚಾರವಾಗಿ ಪ್ರಧಾನಿ ಹಾಗೂ ಜಲಶಕ್ತಿ ಸಚಿವರ ಮೇಲೆ ಒತ್ತಡ ಹೇರಬೇಕು. ಬಜೆಟ್ ಅಧಿವೇಶನದ ಮಧ್ಯೆಯೇ ದೆಹಲಿಗೆ ಹೋಗಿ ಕೇಂದ್ರದ ಸಚಿವರನ್ನು ನಾನು ಭೇಟಿ ಮಾಡುತ್ತೇನೆ. ಈ ಬಗ್ಗೆ ಮುಖ್ಯಮಂತ್ರಿಯ ಗಮನಕ್ಕೂ ತರುತ್ತೇನೆ. ನಾವು ಸುಮ್ಮನೆ ಕುಳಿತುಕೊಂಡರೆ ರಾಜ್ಯದ ಹಿತಕ್ಕೆ ಧಕ್ಕೆ ಆಗಲಿದೆ’ ಎಂದರು.</p>.<p>‘ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೀಗೇಕೆ ಮಾಡುತ್ತಿದ್ದಾರೆಂದು ತಿಳಿಯುತ್ತಿಲ್ಲ. ತುಂಗಭದ್ರಾ ವಿಚಾರವಾಗಿಯೂ ಅವರು ಮಾತುಕತೆಗೆ ಬರುತ್ತಿಲ್ಲ. 30 ಟಿಎಂಸಿ ಅಡಿಯಷ್ಟು ತುಂಗಭದ್ರಾ ನದಿ ನೀರು ನಮಗೆ ನಷ್ಟವಾಗುತ್ತಿದೆ. ಅದನ್ನು ಸರಿದೂಗಿಸಲು ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇವೆ’ ಎಂದರು.</p>.<p>‘ಭೂಸ್ವಾಧೀನಕ್ಕೆ ₹ 70 ಸಾವಿರ ಕೋಟಿ ಖರ್ಚಾಗಲಿದೆ. ಅದಕ್ಕಾಗಿ ಮೂರು ಹಂತಗಳಲ್ಲಿ ಪ್ರತಿವರ್ಷ ₹ 20 ಸಾವಿರ ಕೋಟಿ ಮೀಸಲಿಟ್ಟು ಯೋಜನೆ ಪೂರ್ಣಗೊಳಿಸಲು ತೀರ್ಮಾನಿಸಿದ್ದೆವು. ಬಜೆಟ್ನಲ್ಲಿಯೂ ಹಣ ಮೀಸಲಿಡಲು ಯೋಚಿಸಿದ್ದೇವೆ. ಆದರೆ, ಯೋಜನೆ ಅನುಷ್ಠಾನಗೊಳಿಸಲು ಮಹಾರಾಷ್ಟ್ರ, ಆಂಧ್ರ ಪ್ರದೇಶ ಬಿಡುತ್ತಿಲ್ಲ. ನಾವು ನಮ್ಮ ಜಾಗದಲ್ಲಿ ಭೂಸ್ವಾಧೀನ ಮಾಡಿಕೊಳ್ಳುತ್ತಿದ್ದೇವೆ. ಮಹಾರಾಷ್ಟ್ರದಲ್ಲಿ ಮಾಡುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಉದಯಪುರ ಜಲಶಕ್ತಿ ಸಮಾವೇಶದಲ್ಲಿ ಮೂರೂ ರಾಜ್ಯಗಳ ಸಚಿವರು ಸೇರಿದ್ದೆವು. ಆದರೆ, ಆಂಧ್ರ ಪ್ರದೇಶದ ಸಚಿವರು ಮುಖ್ಯಮಂತ್ರಿಯ ಜೊತೆ ಚರ್ಚಿಸದೆ ತೀರ್ಮಾನ ಮಾಡಲು ಸಾಧ್ಯವಿಲ್ಲ ಎಂದಿದ್ದರು. ಈ ಹಿಂದೆ ಆದೇಶ ಬಂದಾಗ, ನಮ್ಮ ರಾಜ್ಯದವರು ಸುಪ್ರೀಂ ಕೋರ್ಟ್ಗೆ ಹೋಗಿದ್ದೇ ತಪ್ಪಾಯಿತು. ಅಂದು ಈ ತೀರ್ಮಾನವನ್ನು ಯಾರು ಮಾಡಿದರೊ ಗೊತ್ತಿಲ್ಲ. ನ್ಯಾಯಲಯಕ್ಕೆ ಹೋದರೆ ನಾವೇ ನಮ್ಮ ಕೈಯನ್ನು ಮೊಸಳೆ ಬಾಯಿಗೆ ನೀಡಿದಂತೆ’ ಎಂದರು.</p>.<p>‘ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗುವ ಯೋಜನೆ ಇದೆಯೇ’ ಎಂಬ ಪ್ರಶ್ನೆಗೆ, ‘ಅದಕ್ಕೆ ತಯಾರಿ ಮಾಡಿಕೊಳ್ಳುತ್ತಿದ್ದೇನೆ. ಇದರ ಪರಿಹಾರಕ್ಕೆ ಸರ್ವಪಕ್ಷ ನಿಯೋಗವನ್ನೇ ಕರೆದುಕೊಂಡು ಹೋಗಬೇಕು’ ಎಂದರು.</p>.<p>ಈ ವಿಚಾರದಲ್ಲಿ ದೇವೇಗೌಡರ ಸಲಹೆ ಪಡೆಯಬಹುದಲ್ಲವೇ ಎಂದಾಗ, ‘ಅವರ ಆರೋಗ್ಯ ಸರಿಯಿಲ್ಲ. ಅದನ್ನು ಕಾಪಾಡಿಕೊಳ್ಳಬೇಕು. ಅವರ ಕಡೆ ಹೋರಾಟ ಏನು ಮಾಡಬೇಕೊ ಮಾಡಲಿ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಿಸುವ ವಿಚಾರ ಸುಪ್ರೀಂ ಕೋರ್ಟ್ನಲ್ಲಿ ಇರುವುದರಿಂದ ಭೂಸ್ವಾಧೀನಕ್ಕೆ ಅವಕಾಶ ನೀಡಬಾರದೆಂದು ಕೇಂದ್ರ ಸರ್ಕಾರಕ್ಕೆ ಆಂಧ್ರ ಪ್ರದೇಶ ಸರ್ಕಾರ ಪತ್ರ ಬರೆದಿದೆ. ಕೇಂದ್ರ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ, ಈ ಹಿಂದೆ ಆಗಿರುವ ಆದೇಶದಂತೆ ನಡೆದುಕೊಳ್ಳಬೇಕು’ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಒತ್ತಾಯಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು 519 ಮೀಟರ್ನಿಂದ 524 ಮೀಟರ್ಗೆ ಹೆಚ್ಚಿಸುವ ವಿಚಾರದಲ್ಲಿ ಮಹಾರಾಷ್ಟ್ರ ಹಾಗೂ ಆಂಧ್ರ ಪ್ರದೇಶ ಸರ್ಕಾರ ಮಧ್ಯಪ್ರವೇಶ ಮಾಡುವುದು ಸರಿಯಲ್ಲ’ ಎಂದರು.</p>.<p>‘ಮಾರ್ಚ್ 10ರಿಂದ ಲೋಕಸಭೆ ಕಲಾಪ ಆರಂಭವಾಗಲಿದ್ದು, ರಾಜ್ಯದ ಸಂಸದರು ಈ ವಿಚಾರವಾಗಿ ಪ್ರಧಾನಿ ಹಾಗೂ ಜಲಶಕ್ತಿ ಸಚಿವರ ಮೇಲೆ ಒತ್ತಡ ಹೇರಬೇಕು. ಬಜೆಟ್ ಅಧಿವೇಶನದ ಮಧ್ಯೆಯೇ ದೆಹಲಿಗೆ ಹೋಗಿ ಕೇಂದ್ರದ ಸಚಿವರನ್ನು ನಾನು ಭೇಟಿ ಮಾಡುತ್ತೇನೆ. ಈ ಬಗ್ಗೆ ಮುಖ್ಯಮಂತ್ರಿಯ ಗಮನಕ್ಕೂ ತರುತ್ತೇನೆ. ನಾವು ಸುಮ್ಮನೆ ಕುಳಿತುಕೊಂಡರೆ ರಾಜ್ಯದ ಹಿತಕ್ಕೆ ಧಕ್ಕೆ ಆಗಲಿದೆ’ ಎಂದರು.</p>.<p>‘ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೀಗೇಕೆ ಮಾಡುತ್ತಿದ್ದಾರೆಂದು ತಿಳಿಯುತ್ತಿಲ್ಲ. ತುಂಗಭದ್ರಾ ವಿಚಾರವಾಗಿಯೂ ಅವರು ಮಾತುಕತೆಗೆ ಬರುತ್ತಿಲ್ಲ. 30 ಟಿಎಂಸಿ ಅಡಿಯಷ್ಟು ತುಂಗಭದ್ರಾ ನದಿ ನೀರು ನಮಗೆ ನಷ್ಟವಾಗುತ್ತಿದೆ. ಅದನ್ನು ಸರಿದೂಗಿಸಲು ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇವೆ’ ಎಂದರು.</p>.<p>‘ಭೂಸ್ವಾಧೀನಕ್ಕೆ ₹ 70 ಸಾವಿರ ಕೋಟಿ ಖರ್ಚಾಗಲಿದೆ. ಅದಕ್ಕಾಗಿ ಮೂರು ಹಂತಗಳಲ್ಲಿ ಪ್ರತಿವರ್ಷ ₹ 20 ಸಾವಿರ ಕೋಟಿ ಮೀಸಲಿಟ್ಟು ಯೋಜನೆ ಪೂರ್ಣಗೊಳಿಸಲು ತೀರ್ಮಾನಿಸಿದ್ದೆವು. ಬಜೆಟ್ನಲ್ಲಿಯೂ ಹಣ ಮೀಸಲಿಡಲು ಯೋಚಿಸಿದ್ದೇವೆ. ಆದರೆ, ಯೋಜನೆ ಅನುಷ್ಠಾನಗೊಳಿಸಲು ಮಹಾರಾಷ್ಟ್ರ, ಆಂಧ್ರ ಪ್ರದೇಶ ಬಿಡುತ್ತಿಲ್ಲ. ನಾವು ನಮ್ಮ ಜಾಗದಲ್ಲಿ ಭೂಸ್ವಾಧೀನ ಮಾಡಿಕೊಳ್ಳುತ್ತಿದ್ದೇವೆ. ಮಹಾರಾಷ್ಟ್ರದಲ್ಲಿ ಮಾಡುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಉದಯಪುರ ಜಲಶಕ್ತಿ ಸಮಾವೇಶದಲ್ಲಿ ಮೂರೂ ರಾಜ್ಯಗಳ ಸಚಿವರು ಸೇರಿದ್ದೆವು. ಆದರೆ, ಆಂಧ್ರ ಪ್ರದೇಶದ ಸಚಿವರು ಮುಖ್ಯಮಂತ್ರಿಯ ಜೊತೆ ಚರ್ಚಿಸದೆ ತೀರ್ಮಾನ ಮಾಡಲು ಸಾಧ್ಯವಿಲ್ಲ ಎಂದಿದ್ದರು. ಈ ಹಿಂದೆ ಆದೇಶ ಬಂದಾಗ, ನಮ್ಮ ರಾಜ್ಯದವರು ಸುಪ್ರೀಂ ಕೋರ್ಟ್ಗೆ ಹೋಗಿದ್ದೇ ತಪ್ಪಾಯಿತು. ಅಂದು ಈ ತೀರ್ಮಾನವನ್ನು ಯಾರು ಮಾಡಿದರೊ ಗೊತ್ತಿಲ್ಲ. ನ್ಯಾಯಲಯಕ್ಕೆ ಹೋದರೆ ನಾವೇ ನಮ್ಮ ಕೈಯನ್ನು ಮೊಸಳೆ ಬಾಯಿಗೆ ನೀಡಿದಂತೆ’ ಎಂದರು.</p>.<p>‘ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗುವ ಯೋಜನೆ ಇದೆಯೇ’ ಎಂಬ ಪ್ರಶ್ನೆಗೆ, ‘ಅದಕ್ಕೆ ತಯಾರಿ ಮಾಡಿಕೊಳ್ಳುತ್ತಿದ್ದೇನೆ. ಇದರ ಪರಿಹಾರಕ್ಕೆ ಸರ್ವಪಕ್ಷ ನಿಯೋಗವನ್ನೇ ಕರೆದುಕೊಂಡು ಹೋಗಬೇಕು’ ಎಂದರು.</p>.<p>ಈ ವಿಚಾರದಲ್ಲಿ ದೇವೇಗೌಡರ ಸಲಹೆ ಪಡೆಯಬಹುದಲ್ಲವೇ ಎಂದಾಗ, ‘ಅವರ ಆರೋಗ್ಯ ಸರಿಯಿಲ್ಲ. ಅದನ್ನು ಕಾಪಾಡಿಕೊಳ್ಳಬೇಕು. ಅವರ ಕಡೆ ಹೋರಾಟ ಏನು ಮಾಡಬೇಕೊ ಮಾಡಲಿ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>