ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಂಠೀರವ ಸ್ಟುಡಿಯೊದಲ್ಲಿ ರಾಜ್‌ ಸಮಾಧಿ ಬಳಿ ಅಂಬರೀಷ್‌ ಅಂತ್ಯಕ್ರಿಯೆ

Last Updated 25 ನವೆಂಬರ್ 2018, 10:05 IST
ಅಕ್ಷರ ಗಾತ್ರ

ಬೆಂಗಳೂರು:ಕಂಠೀರವ ಸ್ಟುಡಿಯೊದಲ್ಲಿರುವ ಹಿರಿಯ ನಟ ಡಾ.ರಾಜ್‌ಕುಮಾರ್‌ ಅವರ ಸಮಾಧಿ ಬಳಿ ಅಂಬರೀಷ್‌ ಅವರ ಅಂತ್ಯಕ್ರಿಯೆ ನಡೆಸಲಾಗುವುದು. ಮತ್ತು ಅಲ್ಲಿಯೇ ಅವರ ಸ್ಮಾರಕ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದರು.

ಈ ಸಂಬಂಧ ಕುಮಾರಸ್ವಾಮಿ ಅವರು ಅಂತ್ಯಕ್ರಿಯೆ ನಡೆಯಲಿರುವ ಸ್ಟುಡಿಯೊ ಆವರಣಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಡಾ.ರಾಜ್‌ಕುಮಾರ್ ಸಮಾಧಿಯ ಸಮೀಪದಲ್ಲಿ ಅಂತ್ಯಕ್ರಿಯೆ ನಡೆಸಲು ನಿಗದಿ ಪಡಿಸಿದ ಸ್ಥಳ ಪರಿಶೀಲನೆ ನಡೆಸಿ ಪೂರ್ವಸಿದ್ಧತೆ ಹಾಗೂ ಭದ್ರತಾ ವ್ಯವಸ್ಥೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಸ್ಥಳೀಯ ಶಾಸಕ ಗೋಪಾಲಯ್ಯ, ಪೊಲೀಸ್ ಆಯುಕ್ತ ಸುನಿಲ್ ಕುಮಾರ್ ಮತ್ತಿತರರು ಹಾಜರಿದ್ದರು.

ಸರ್ಕಾರದಿಂದ ಸ್ಮಾರಕ: ಸಿಎಂ
ಜನರ ಭಾವನೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಹಾಗೂ ಅವರ ಬಗ್ಗೆ ಜನರು ಹೊಂದಿರುವ ಗೌರವಾರ್ಥವಾಗಿ ಸರ್ಕಾರ ಒಂದೂವರೆ ಎಕರೆ ಜಾಗದಲ್ಲಿ ಸ್ಮಾರಕ ನಿರ್ಮಿಸಲಿದೆ. ಆದ್ದರಿಂದ, ಮಂಡ್ಯಕ್ಕೆ ಪಾರ್ಥಿವ ಶರೀರವನ್ನು ಕೊಂಡೊಯ್ಯದ್ದ ವೇಳೆ ಅಲ್ಲಿಯೇ ಅಂತ್ಯ ಸಂಸ್ಕಾರ ನಡೆಸಬೇಕು ಎಂದು ಪಟ್ಟು ಹಿಡಿಯಬಾರದು ಎಂದು ಸಿಎಂ ಮನವಿ ಮಾಡಿದರು.

ಜನರ ಭಾವನೆಗಳಿಗೆ ಮಣಿದು ಸರ್ಕಾರ ಪಾರ್ಥಿವ ಶರೀರವನ್ನು ಅಲ್ಲಿಗೆ ತೆಗೆದುಕೊಂಡು ಹೋಗಲು ವ್ಯವಸ್ಥೆ ಮಾಡಿದೆ. ಆದ್ದರಿಂದ, ಜನರು ಸಹಕಾರ ನೀಡಬೇಕು ಎಂದು ಸಿಎಂ ಕಂಠೀರವ ಕ್ರೀಡಾಂಗಣದಲ್ಲಿ ಅಂತಿಮ ದರ್ಶನ ಪಡೆದ ವೇಳೆ ಹೇಳಿದರು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT