<p><strong>ಬೆಂಗಳೂರು:</strong> ‘ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗಳನ್ನು ಬಲಗೈ ಸಮುದಾಯದವರಿಗೆ ಮಾತ್ರ ನೀಡಲಾಗಿದ್ದು, ಇದರಲ್ಲಿ ಸಚಿವರು, ಅಧಿಕಾರಿಗಳ ಕೈವಾಡವಿದೆ ಎಂಬ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಈ ಆರೋಪ ನ್ಯಾಯಸಮ್ಮತವಲ್ಲ. ಎಡಗೈ– ಬಲಗೈ ಸಮುದಾಯಗಳ ಮಧ್ಯೆ ಬಿರುಕು ಮೂಡಿಸುವ ಪ್ರಯತ್ನವಿದು’ ಎಂದು ಛಲವಾದಿ ಪರಿಷತ್ನ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ. ಮನೋಹರ್ ಹೇಳಿದ್ದಾರೆ.</p>.<p>‘ಅಸ್ಪಶ್ಯ ಸಮುದಾಯಗಳ ಮಧ್ಯೆ ಸಾಮರಸ್ಯ ಮೂಡಿಸುವ ಅಗತ್ಯವಿದೆ. ಈ ಕಾರಣಕ್ಕೆ ಅಂಬೇಡ್ಕರ್ ಪ್ರಶಸ್ತಿಗೆ ಈಗಾಗಲೇ ಆಯ್ಕೆ ಮಾಡಿರುವ 15 ಸಾಧಕರ ಜೊತೆಗೆ, ಪ್ರತಿ ವರ್ಷ ತಲಾ ಎರಡರಂತೆ ಇನ್ನೂ ಆರು ಪ್ರಶಸ್ತಿಗಳನ್ನು ಹೆಚ್ಚುವರಿಯಾಗಿ ಸೃಷ್ಟಿಸಿ ಈ ಎರಡೂ ಅಸ್ಪಶ್ಯ ಸಮುದಾಯದ ಹಿರಿಯ ಮುಖಂಡರಿಗೆ ಸಮನಾಗಿ ನೀಡಬೇಕು’ ಅವರು ಆಗ್ರಹಿಸಿದ್ದಾರೆ.</p>.<p>‘ರಾಜ್ಯ ಸರ್ಕಾರ ಬಾಬು ಜಗಜೀವನ್ ರಾಂ ಸ್ಮರಣಾರ್ಥ ಏಪ್ರಿಲ್ 5ರಂದು 2023, 2024 ಮತ್ತು 2025ನೇ ಸಾಲಿನ 15 ಪ್ರಶಸ್ತಿಗಳನ್ನು ಪ್ರದಾನ ಮಾಡಿತ್ತು. ಆ ಎಲ್ಲ ಪ್ರಶಸ್ತಿಗಳಿಗೆ ಎಡಗೈ ಸಮುದಾಯವರನ್ನು ಆಯ್ಕೆ ಮಾಡಲಾಗಿತ್ತು. ಆ ವೇಳೆಯಲ್ಲಿ ಬಲಗೈ ಸಮುದಾಯವನ್ನು ಕಡೆಗಣಿಸಲಾಗಿದೆ. ‘ಅಂಬೇಡ್ಕರ್ ಪ್ರಶಸ್ತಿ’ಗೆ 15 ಸಾಧಕರನ್ನು ಆಯ್ಕೆ ಮಾಡುವ ವೇಳೆಯಲ್ಲಿ ಈ ತಪ್ಪನ್ನು ಸರ್ಕಾರ ಸರಿಪಡಿಸಿದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗಳನ್ನು ಬಲಗೈ ಸಮುದಾಯದವರಿಗೆ ಮಾತ್ರ ನೀಡಲಾಗಿದ್ದು, ಇದರಲ್ಲಿ ಸಚಿವರು, ಅಧಿಕಾರಿಗಳ ಕೈವಾಡವಿದೆ ಎಂಬ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಈ ಆರೋಪ ನ್ಯಾಯಸಮ್ಮತವಲ್ಲ. ಎಡಗೈ– ಬಲಗೈ ಸಮುದಾಯಗಳ ಮಧ್ಯೆ ಬಿರುಕು ಮೂಡಿಸುವ ಪ್ರಯತ್ನವಿದು’ ಎಂದು ಛಲವಾದಿ ಪರಿಷತ್ನ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ. ಮನೋಹರ್ ಹೇಳಿದ್ದಾರೆ.</p>.<p>‘ಅಸ್ಪಶ್ಯ ಸಮುದಾಯಗಳ ಮಧ್ಯೆ ಸಾಮರಸ್ಯ ಮೂಡಿಸುವ ಅಗತ್ಯವಿದೆ. ಈ ಕಾರಣಕ್ಕೆ ಅಂಬೇಡ್ಕರ್ ಪ್ರಶಸ್ತಿಗೆ ಈಗಾಗಲೇ ಆಯ್ಕೆ ಮಾಡಿರುವ 15 ಸಾಧಕರ ಜೊತೆಗೆ, ಪ್ರತಿ ವರ್ಷ ತಲಾ ಎರಡರಂತೆ ಇನ್ನೂ ಆರು ಪ್ರಶಸ್ತಿಗಳನ್ನು ಹೆಚ್ಚುವರಿಯಾಗಿ ಸೃಷ್ಟಿಸಿ ಈ ಎರಡೂ ಅಸ್ಪಶ್ಯ ಸಮುದಾಯದ ಹಿರಿಯ ಮುಖಂಡರಿಗೆ ಸಮನಾಗಿ ನೀಡಬೇಕು’ ಅವರು ಆಗ್ರಹಿಸಿದ್ದಾರೆ.</p>.<p>‘ರಾಜ್ಯ ಸರ್ಕಾರ ಬಾಬು ಜಗಜೀವನ್ ರಾಂ ಸ್ಮರಣಾರ್ಥ ಏಪ್ರಿಲ್ 5ರಂದು 2023, 2024 ಮತ್ತು 2025ನೇ ಸಾಲಿನ 15 ಪ್ರಶಸ್ತಿಗಳನ್ನು ಪ್ರದಾನ ಮಾಡಿತ್ತು. ಆ ಎಲ್ಲ ಪ್ರಶಸ್ತಿಗಳಿಗೆ ಎಡಗೈ ಸಮುದಾಯವರನ್ನು ಆಯ್ಕೆ ಮಾಡಲಾಗಿತ್ತು. ಆ ವೇಳೆಯಲ್ಲಿ ಬಲಗೈ ಸಮುದಾಯವನ್ನು ಕಡೆಗಣಿಸಲಾಗಿದೆ. ‘ಅಂಬೇಡ್ಕರ್ ಪ್ರಶಸ್ತಿ’ಗೆ 15 ಸಾಧಕರನ್ನು ಆಯ್ಕೆ ಮಾಡುವ ವೇಳೆಯಲ್ಲಿ ಈ ತಪ್ಪನ್ನು ಸರ್ಕಾರ ಸರಿಪಡಿಸಿದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>