<p><strong>ದಾವಣಗೆರೆ: </strong>ಆಂಬಿಡೆಂಟ್ ಕಂಪನಿಯಿಂದ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್, ಮಾಜಿ ಸಚಿವ ರೋಷನ್ ಬೇಗ್ ಬಹುಕೋಟಿ ಹಣ ಪಡೆದಿದ್ದಾರೆ ಎಂದು ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದರು.</p>.<p>ಅಧಿಕಾರ ದುರ್ಬಳಕೆ ಮಾಡಿಕೊಂಡು ಜನಾರ್ದನ ರೆಡ್ಡಿ ಅವರನ್ನು ವಿನಾಕಾರಣ ಆಂಬಿಡೆಂಟ್ ಕಂಪನಿಗೆ ಕೊಂಡಿ ಕಲ್ಪಿಸಿ ಜೈಲಿಗೆ ಕಳುಹಿಸಲಾಗಿತ್ತು. ಸರ್ಕಾರಕ್ಕೆ ತಾಕತ್ತಿದ್ದರೆ ಸಿಸಿಬಿ ಮುಂದೆ ಫರೀದ್ ನೀಡಿರುವ ಹೇಳಿಕೆಯನ್ನು ಬಿಡುಗಡೆ ಮಾಡಲಿ ಎಂದು ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಸವಾಲು ಹಾಕಿದರು.</p>.<p>‘ಆಂಬಿಡೆಂಟ್ನಿಂದ ಪರಮೇಶ್ವರ್, ರೋಷನ್ ಬೇಗ್ ಹಣ ಪಡೆದಿರುವುದನ್ನು ತನಿಖೆ ವೇಳೆ ಸಿಸಿಬಿ ಮುಂದೆ ಕಂಪನಿಯ ಫರೀದ್ ಹೇಳಿಕೆ ನೀಡಿದ್ದಾರೆ ಎಂದು ನನಗೆ ಪೊಲೀಸರೇ ತಿಳಿಸಿದ್ದಾರೆ. ಆದರೆ ಸರ್ಕಾರ ಉಳಿಸಿಕೊಳ್ಳಲು ಅವರನ್ನು ಕುಮಾರಸ್ವಾಮಿ ರಕ್ಷಿಸುತ್ತಿದ್ದಾರೆ. ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಆಂಬಿಡೆಂಟ್ ಕಂಪನಿಯಿಂದ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್, ಮಾಜಿ ಸಚಿವ ರೋಷನ್ ಬೇಗ್ ಬಹುಕೋಟಿ ಹಣ ಪಡೆದಿದ್ದಾರೆ ಎಂದು ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದರು.</p>.<p>ಅಧಿಕಾರ ದುರ್ಬಳಕೆ ಮಾಡಿಕೊಂಡು ಜನಾರ್ದನ ರೆಡ್ಡಿ ಅವರನ್ನು ವಿನಾಕಾರಣ ಆಂಬಿಡೆಂಟ್ ಕಂಪನಿಗೆ ಕೊಂಡಿ ಕಲ್ಪಿಸಿ ಜೈಲಿಗೆ ಕಳುಹಿಸಲಾಗಿತ್ತು. ಸರ್ಕಾರಕ್ಕೆ ತಾಕತ್ತಿದ್ದರೆ ಸಿಸಿಬಿ ಮುಂದೆ ಫರೀದ್ ನೀಡಿರುವ ಹೇಳಿಕೆಯನ್ನು ಬಿಡುಗಡೆ ಮಾಡಲಿ ಎಂದು ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಸವಾಲು ಹಾಕಿದರು.</p>.<p>‘ಆಂಬಿಡೆಂಟ್ನಿಂದ ಪರಮೇಶ್ವರ್, ರೋಷನ್ ಬೇಗ್ ಹಣ ಪಡೆದಿರುವುದನ್ನು ತನಿಖೆ ವೇಳೆ ಸಿಸಿಬಿ ಮುಂದೆ ಕಂಪನಿಯ ಫರೀದ್ ಹೇಳಿಕೆ ನೀಡಿದ್ದಾರೆ ಎಂದು ನನಗೆ ಪೊಲೀಸರೇ ತಿಳಿಸಿದ್ದಾರೆ. ಆದರೆ ಸರ್ಕಾರ ಉಳಿಸಿಕೊಳ್ಳಲು ಅವರನ್ನು ಕುಮಾರಸ್ವಾಮಿ ರಕ್ಷಿಸುತ್ತಿದ್ದಾರೆ. ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>