ದೇವರಜೀವನಹಳ್ಳಿಯಲ್ಲಿ ಆ್ಯಂಬಿಡೆಂಟ್ ಕಂಪನಿ ತೆರೆದಿದ್ದ ಪ್ರಮುಖ ಆರೋಪಿ ಫರೀದ್ ಹಾಗೂ ಅವರ ಮಗ, ‘ನಮ್ಮಲ್ಲಿ ಹಣ ಹೂಡಿದರೆ, ಶೇ 40ರಿಂದ ಶೇ 50ರಷ್ಟು ಬಡ್ಡಿಯ ಸಮೇತ ನಾಲ್ಕು ತಿಂಗಳಲ್ಲಿ ಹಣ ಮರಳಿಸುತ್ತೇವೆ’ ಎಂದು ನಂಬಿಸಿ 15 ಸಾವಿರಕ್ಕೂ ಹೆಚ್ಚು ಮಂದಿಯಿಂದ ₹ 600 ಕೋಟಿಯಷ್ಟು ಹೂಡಿಕೆ ಮಾಡಿಸಿಕೊಂಡು ವಂಚಿಸಿದ್ದರು. ಹಣ ಕಳೆದುಕೊಂಡಿದ್ದ ಸಾರ್ವಜನಿಕರು ಕಂಪನಿ ವಿರುದ್ಧ ದೂರು ನೀಡಿದ್ದರು.