ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಬಿಗರ ಚೌಡಯ್ಯನವರ ವಚನ ಸಾಹಿತ್ಯ ಭಾಷಾಂತರವಾಗಲಿ- ಉದ್ಯಮಿ ಯೋಗೇಶ್

Last Updated 17 ಜನವರಿ 2022, 16:15 IST
ಅಕ್ಷರ ಗಾತ್ರ

ಬೆಂಗಳೂರು: ‘ಅಂಬಿಗರ ಚೌಡಯ್ಯನವರ ವಚನ ಸಾಹಿತ್ಯವು ಭಾಷಾಂತರವಾಗಬೇಕು. ಆಗ ಮಾತ್ರ ಇತರ ಭಾಷಿಕರಿಗೂ ಅವರ ಸಾಹಿತ್ಯ ತಲುಪಿಸಲು ಸಾಧ್ಯ’ ಎಂದು ಉದ್ಯಮಿ ಯೋಗೇಶ್ ಅಭಿಪ್ರಾಯಪಟ್ಟರು.

ಹಾವೇರಿ ಜಿಲ್ಲೆ ಚೌಡದಾನಪುರದಲ್ಲಿ ನಡೆದ ಅಂಬಿಗರ ಚೌಡಯ್ಯನವರ ಜಾತ್ರಾ ಮಹೋತ್ಸವ ಹಾಗೂ ವಿವಿಧ ಪೂಜಾ ಕಾರ್ಯಕ್ರಮಗಳಲ್ಲಿ ಮಾತನಾಡಿದರು.

‘ಚೌಡಯ್ಯನವರ ವಚನ ಸಾಹಿತ್ಯವನ್ನುದೇಶದ ಎಲ್ಲ ಜನಾಂಗದವರೂ ಅಧ್ಯಯನ ಮಾಡುವಂತಾಗಬೇಕು. ಅವರ ಸಾಹಿತ್ಯವು ಪದವಿ ತರಗತಿಯ ಪಠ್ಯ ವಿಷಯವಾಗಬೇಕು. ಈ ಬಗ್ಗೆ ಉನ್ನತ ಶಿಕ್ಷಣ ಸಚಿವರ ಜೊತೆ ಚರ್ಚಿಸಬೇಕು. ಅಂಬಿಗರ ಚೌಡಯ್ಯ ಜಯಂತ್ಯೋತ್ಸವವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಆಯೋಜಿಸಬೇಕು’ ಎಂದು ತಿಳಿಸಿದರು.

ಅಂಬಿಗರ ಚೌಡಯ್ಯ ಗುರುಪೀಠದ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮುಖಂಡರಾದ ಬಸವರಾಜ್, ವೆಂಕಟೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT