<p><strong>ಬೆಂಗಳೂರು</strong>: ಎರಡು ಪಾಳಿಯಲ್ಲಿ ಕಾರ್ಯನಿರ್ವಹಣೆಗೆ ಅವಕಾಶ ನೀಡುವಂತೆ ಆಗ್ರಹಿಸಿರುವ ‘108-ಆರೋಗ್ಯ ಕವಚ’ ಯೋಜನೆಯ ಆಂಬುಲೆನ್ಸ್ ನೌಕರರು, ಬೇಡಿಕೆ ಈಡೇರಿಸದಿದ್ದರೆ ಆಗಸ್ಟ್ 1ರಿಂದ ಮುಷ್ಕರ ಕೈಗೊಳ್ಳುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. </p>.<p>ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುವರ್ಣ ಕರ್ನಾಟಕ ಆರೋಗ್ಯ ಕವಚ (108) ನೌಕರರ ಸಂಘದ ಉಪಾಧ್ಯಕ್ಷ ಪರಮಶಿವ, ‘ಯೋಜನೆಯಡಿ 3,500 ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ. ಜನವರಿ 1ರಿಂದ ಸರ್ಕಾರದ ಆದೇಶಾನುಸಾರ ನೌಕರರು ಮೂರು ಪಾಳಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿಂದೆ 12 ಗಂಟೆಗಳ ಎರಡು ಪಾಳಿಯಿತ್ತು. ಈಗ 8 ಗಂಟೆಗಳ ಮೂರು ಪಾಳಿ ನಿಗದಿ ಮಾಡಿ, ವೇತನ ಕಡಿತ ಮಾಡಲಾಗಿದೆ. ಇದರಿಂದ ನೌಕರರಿಗೆ ತುಂಬಾ ಸಮಸ್ಯೆಯಾಗುತ್ತಿದೆ. ಬೆಳಿಗ್ಗೆ 6 ಗಂಟೆ ಮತ್ತು ರಾತ್ರಿ 10 ಗಂಟೆಯ ಪಾಳಿಗೆ ಹಾಜರಾಗುವ ನೌಕರರು ಸಾರಿಗೆ ವ್ಯವಸ್ಥೆಯಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ’ ಎಂದು ಹೇಳಿದರು. </p>.<p>‘ಯೋಜನೆಯಡಿ ಶೇ 33ರಷ್ಟು ಮಹಿಳಾ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಜತೆಗೆ ಗ್ರಾಮೀಣ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯೂ ಮೂರು ಪಾಳಿಗಳಿಂದ ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಸಾರಿಗೆ ವ್ಯವಸ್ಥೆ ಹಾಗೂ ಮೂಲಸೌಕರ್ಯವನ್ನು ಒದಗಿಸುವ ಜತೆಗೆ ವೇತನ ಹೆಚ್ಚಿಸಬೇಕು. ಅದು ಸಾಧ್ಯವಾಗದಿದ್ದಲ್ಲಿ ಈ ಮೊದಲಿನಂತೆ ಎರಡು ಪಾಳಿಯಲ್ಲಿ ಸಮಯ ನಿಗದಿ ಮಾಡಬೇಕು. ಈ ಬಗ್ಗೆ ಜುಲೈ 31ರೊಳಗೆ ನಿರ್ಧಾರ ತೆಗೆದುಕೊಳ್ಳದಿದ್ದರೆ, ಆ.1ರಿಂದ ಕರ್ತವ್ಯಕ್ಕೆ ಗೈರಾಗುವ ಮೂಲಕ ಮುಷ್ಕರ ಕೈಗೊಳ್ಳಲಾಗುವುದು’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಎರಡು ಪಾಳಿಯಲ್ಲಿ ಕಾರ್ಯನಿರ್ವಹಣೆಗೆ ಅವಕಾಶ ನೀಡುವಂತೆ ಆಗ್ರಹಿಸಿರುವ ‘108-ಆರೋಗ್ಯ ಕವಚ’ ಯೋಜನೆಯ ಆಂಬುಲೆನ್ಸ್ ನೌಕರರು, ಬೇಡಿಕೆ ಈಡೇರಿಸದಿದ್ದರೆ ಆಗಸ್ಟ್ 1ರಿಂದ ಮುಷ್ಕರ ಕೈಗೊಳ್ಳುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. </p>.<p>ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುವರ್ಣ ಕರ್ನಾಟಕ ಆರೋಗ್ಯ ಕವಚ (108) ನೌಕರರ ಸಂಘದ ಉಪಾಧ್ಯಕ್ಷ ಪರಮಶಿವ, ‘ಯೋಜನೆಯಡಿ 3,500 ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ. ಜನವರಿ 1ರಿಂದ ಸರ್ಕಾರದ ಆದೇಶಾನುಸಾರ ನೌಕರರು ಮೂರು ಪಾಳಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿಂದೆ 12 ಗಂಟೆಗಳ ಎರಡು ಪಾಳಿಯಿತ್ತು. ಈಗ 8 ಗಂಟೆಗಳ ಮೂರು ಪಾಳಿ ನಿಗದಿ ಮಾಡಿ, ವೇತನ ಕಡಿತ ಮಾಡಲಾಗಿದೆ. ಇದರಿಂದ ನೌಕರರಿಗೆ ತುಂಬಾ ಸಮಸ್ಯೆಯಾಗುತ್ತಿದೆ. ಬೆಳಿಗ್ಗೆ 6 ಗಂಟೆ ಮತ್ತು ರಾತ್ರಿ 10 ಗಂಟೆಯ ಪಾಳಿಗೆ ಹಾಜರಾಗುವ ನೌಕರರು ಸಾರಿಗೆ ವ್ಯವಸ್ಥೆಯಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ’ ಎಂದು ಹೇಳಿದರು. </p>.<p>‘ಯೋಜನೆಯಡಿ ಶೇ 33ರಷ್ಟು ಮಹಿಳಾ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಜತೆಗೆ ಗ್ರಾಮೀಣ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯೂ ಮೂರು ಪಾಳಿಗಳಿಂದ ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಸಾರಿಗೆ ವ್ಯವಸ್ಥೆ ಹಾಗೂ ಮೂಲಸೌಕರ್ಯವನ್ನು ಒದಗಿಸುವ ಜತೆಗೆ ವೇತನ ಹೆಚ್ಚಿಸಬೇಕು. ಅದು ಸಾಧ್ಯವಾಗದಿದ್ದಲ್ಲಿ ಈ ಮೊದಲಿನಂತೆ ಎರಡು ಪಾಳಿಯಲ್ಲಿ ಸಮಯ ನಿಗದಿ ಮಾಡಬೇಕು. ಈ ಬಗ್ಗೆ ಜುಲೈ 31ರೊಳಗೆ ನಿರ್ಧಾರ ತೆಗೆದುಕೊಳ್ಳದಿದ್ದರೆ, ಆ.1ರಿಂದ ಕರ್ತವ್ಯಕ್ಕೆ ಗೈರಾಗುವ ಮೂಲಕ ಮುಷ್ಕರ ಕೈಗೊಳ್ಳಲಾಗುವುದು’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>