ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ‘ಈ ತಿದ್ದುಪಡಿ ಮೂಲಕ, 2019–20ನೇ ಸಾಲಿನಲ್ಲಿ ನಡೆದ ವರ್ಗಾವಣೆ ವೇಳೆ ಪ್ರಾಥಮಿಕ ಶಾಲಾ ಶಿಕ್ಷಕನ ಸಂದರ್ಭದಲ್ಲಿ ತಾಲ್ಲೂಕಿನ ಹೊರಗೆ ಅಥವಾ ಪ್ರೌಢಶಾಲಾ ಶಿಕ್ಷಕನ ಸಂದರ್ಭದಲ್ಲಿ ಜಿಲ್ಲೆಯ ಹೊರಗೆ ವರ್ಗಾವಣೆಗೊಂಡ ಶಿಕ್ಷಕರಿಗೆ ಮುಂದಿನ ವರ್ಗಾವಣೆಯ ವೇಳೆ, ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ತಾಲ್ಲೂಕು ಅಥವಾ ಜಿಲ್ಲೆಯ ಒಳಗೆ ಸ್ಥಳ ನಿಯುಕ್ತಿಗೆ ಅನುಕೂಲ ಕಲ್ಪಿಸಲಾಗಿದೆ. ಅಲ್ಲದೆ, ಇತರ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯ ಮೊದಲೇ ಖಾಲಿ ಹುದ್ದೆಗಳ ಲಭ್ಯತೆಗೆ ಅನುಗುಣವಾಗಿ ಅವರು ಕಾರ್ಯನಿರ್ವಹಿಸುತ್ತಿರುವ ತಾಲ್ಲೂಕು ಅಥವಾ ಜಿಲ್ಲೆಯಲ್ಲಿ ಸ್ಥಳ ಆಯ್ಕೆಗೆ ಮಾಡಿಕೊಂಡು ಒಂದು ಬಾರಿ ವರ್ಗಾವಣೆಗೆ ಅವಕಾಶ ನೀಡಲಾಗುತ್ತದೆ’ ಎಂದರು.