ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ, ಭಾರತದ ಗ್ರಾಮೀಣ ಭಾಗದ ಆರ್ಥಿಕ ಚಟುವಟಿಕೆಗೆ ಇಂಬು ನೀಡಲು, ಸ್ವಸಹಾಯ ಸಂಘಗಳು ಮತ್ತು ಜಂಟಿ ಬಾಧ್ಯತಾ ಗುಂಪುಗಳು ಕೈಗೊಳ್ಳುವ ಕಿರು ಉದ್ದಿಮೆಗಳಿಗೆ ಹೆಚ್ಚಿನ ರೀತಿಯಲ್ಲಿ, ಸರಳವಾಗಿ ಹಣಕಾಸಿನ ನೆರವನ್ನು ಪಡೆಯುವ ನಿಟ್ಟಿನಲ್ಲಿ ಕ್ರೆಡಿಟ್ ಗ್ಯಾರಂಟಿ ನಿಧಿಗೆ ಕೆಲವು ಅವಶ್ಯಕ ತಿದ್ದುಪಡಿ ತಂದಿರುವುದು ಸ್ವಾಗತಾರ್ಹವಾಗಿದೆ ಎಂದು ಹೇಳಿದ್ದಾರೆ.