‘ಬಾಲ ಸನ್ಯಾಸಿಗಳನ್ನು ಮಠದ ಪೀಠಾಧಿಪತಿ ಮಾಡುವ ಸಂಪ್ರದಾಯ ತಲೆ ತಲಾಂತರಗಳಿಂದ ಇದೆ. ಶಂಕರಾಚಾರ್ಯರು 12ನೇ ವಯಸಿನಲ್ಲಿ, ಮಧ್ವಾಚಾರ್ಯರು 10ನೇ ವಯಸಿನಲ್ಲಿ ಸನ್ಯಾಸ ಸ್ವೀಕರಿಸಿ ಪೀಠಾಧಿಪತಿ ಆಗಿದ್ದರು. ಬಾಲ ಸನ್ಯಾಸಿಗೆ ದೀಕ್ಷೆ ಕೊಡಿಸಿ, ಧರ್ಮಶಾಸ್ತ್ರ, ವೇದ ಮತ್ತು ಉಪನಿಷತ್ತುಗಳನ್ನು ಬೋಧಿಸಿದ ಬಳಿಕ ಅವರನ್ನು ಪೀಠಾಧಿಪತಿ ಮಾಡಲಾಗುತ್ತದೆ. ಇದಕ್ಕೆ ಕಾನೂನಿನ ನಿರ್ಬಂಧ ಇಲ್ಲ. ಬಲವಂತವಾಗಿ ಸನ್ಯಾಸ ಹೇರಿಲ್ಲ’ ಎಂದು ಸೋದೆ ವಾದಿರಾಜ ಮಠದ ಪರ ವಕೀಲರು ವಾದಿಸಿದರು.