ಪಕ್ಷದಲ್ಲಿ ಮುನಿಸಿಕೊಂಡಿರುವ ನಾಯಕರನ್ನು ಸಮಾಧಾನಗೊಳಿಸಿ ಚುನಾವಣಾ ಕಾರ್ಯದಲ್ಲಿ ಅವರೆಲ್ಲರನ್ನು ತೊಡಗಿಸಿಕೊಳ್ಳಲು ವರಿಷ್ಠರು ಮುಂದಾಗಿದ್ದಾರೆ. ಶಾ ಅವರು ಬೆಂಗಳೂರಿಗೆ ಬಂದಾಗ ಸಣ್ಣ ಪುಟ್ಟ ಸಮಸ್ಯೆಗಳಿದ್ದರೂ ಅವುಗಳನ್ನು ಬಗೆಹರಿಸಲಿದ್ದಾರೆ. ಅತ್ಯಧಿಕ ಸ್ಥಾನಗಳನ್ನು ಗೆಲ್ಲುವ ಸಂಬಂಧ ಕಾರ್ಯತಂತ್ರಗಳನ್ನು ರೂಪಿಸಲು ಮಾರ್ಗದರ್ಶನ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.