ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೃತ್‌ ಯೋಜನೆ : ಬೆಂಗಳೂರಿಗೆ ₹991 ಕೋಟಿ

Published 27 ಜುಲೈ 2023, 14:58 IST
Last Updated 27 ಜುಲೈ 2023, 14:58 IST
ಅಕ್ಷರ ಗಾತ್ರ

ನವದೆಹಲಿ: ಅಮೃತ್‌ ಯೋಜನೆಯಡಿ ಕೇಂದ್ರ ಸರ್ಕಾರವು ಬಿಬಿಎಂಪಿಗೆ ₹991 ಕೋಟಿ ಅನುದಾನ ನೀಡಿದೆ ಎಂದು ಕೇಂದ್ರ ವಸತಿ ಹಾಗೂ ನಗರ ವ್ಯವಹಾರಗಳ ರಾಜ್ಯ ಸಚಿವ ಕೌಶಲ್‌ ಕಿಶೋರ್‌ ತಿಳಿಸಿದ್ದಾರೆ. 

ಲೋಕಸಭೆಯಲ್ಲಿ ಬೆಂಗಳೂರು ಕೇಂದ್ರ ಸಂಸದ ಪಿ.ಸಿ.ಮೋಹನ್‌ ಗುರುವಾರ ಕೇಳಿರುವ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ‘ಕುಡಿಯುವ ನೀರು, ತ್ಯಾಜ್ಯ ಸಂಗ್ರಹ, ಉದ್ಯಾನ ನಿರ್ಮಾಣ ಮತ್ತಿತರ ಕಾಮಗಾರಿಗಳಿಗೆ ಈ ಅನುದಾನ ನೀಡಲಾಗಿದೆ. ಬೆಂಗಳೂರಿನಲ್ಲಿ 26 ಯೋಜನೆಗಳ ಕಾಮಗಾರಿಗಳನ್ನು ನಡೆಸಲಾಗಿದ್ದು, 25 ಕಾಮಗಾರಿಗಳು ಪೂರ್ಣಗೊಂಡಿವೆ. ಮಲ್ಲಸಂದ್ರದ ಉದ್ಯಾನ ಕಾಮಗಾರಿ ಪೂರ್ಣ ಆಗಿಲ್ಲ’ ಎಂದು ಮಾಹಿತಿ ನೀಡಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT