<p><strong>ಬೆಂಗಳೂರು</strong>: ‘ದೇಶದ್ರೋಹ’ ಆರೋಪದಡಿ ನ್ಯಾಯಾಂಗ ಬಂಧನದಲ್ಲಿದ್ದ ಅಮೂಲ್ಯಾ ಲಿಯೋನ್ (19) ಅವರನ್ನು ಹೆಚ್ಚಿನ ವಿಚಾರಣೆಗಾಗಿ ಪಶ್ಚಿಮ ವಿಭಾಗದ ಪೊಲೀಸರ ಕಸ್ಟಡಿಗೆ ನೀಡಲಾಗಿದೆ.</p>.<p>ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ವಿರೋಧಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಫೆ. 20ರಂದು ನಡೆದಿದ್ದ ಪ್ರತಿಭಟನೆಯಲ್ಲಿ ಅಮೂಲ್ಯಾ ಲಿಯೋನ್, ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ್ದರು. ವೇದಿಕೆಯಲ್ಲೇ ಅವರನ್ನು ಬಂಧಿಸಲಾಗಿತ್ತು. ಅಂದಿನಿಂದಲೇ ಅವರು ನ್ಯಾಯಾಂಗ ಬಂಧನದಲ್ಲಿದ್ದರು.</p>.<p>‘ಪ್ರಕರಣ ಸಂಬಂಧ ಪ್ರತಿಭಟನೆ ಆಯೋಜಕರು ಸೇರಿ ಹಲವರ ಹೇಳಿಕೆ ಪಡೆಯಲಾಗಿದೆ. ಅಮೂಲ್ಯಾ ವಿಚಾರಣೆ ಅಗತ್ಯವಿದ್ದು, ಕಸ್ಟಡಿಗೆ ನೀಡಬೇಕು’ ಎಂದು ಕೋರಿ ಪೊಲೀಸರು ನ್ಯಾಯಾಲಯಕ್ಕೆ ಮಂಗಳವಾರ ಅರ್ಜಿ ಸಲ್ಲಿಸಿದ್ದರು. ಅದನ್ನು ಪುರಸ್ಕರಿಸಿದ ನ್ಯಾಯಾಲಯ, ಅಮೂಲ್ಯಾ ಅವರನ್ನು 5 ದಿನಗಳವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ.</p>.<p>ಅಮೂಲ್ಯಾ ಪರ ವಕಾಲತ್ತು ವಹಿಸಲು ಕೆಲ ವಕೀಲರು ಸಿದ್ಧತೆ ಮಾಡಿಕೊಂಡಿದ್ದರು. ಇದಕ್ಕೆ ಹಲವು ವಕೀಲರು ಆಕ್ಷೇಪ ವ್ಯಕ್ತಪಡಿಸುತ್ತಿದ್ದರು. ‘ದೇಶದ್ರೋಹ ಎಸಗಿರುವ ಅಮೂಲ್ಯಾ ಪರ ವಕಾಲತ್ತು ವಹಿಸಬಾರದು’ ಎಂದು ಎಚ್ಚರಿಕೆಯನ್ನೂ ನೀಡಿದ್ದರು. ಈ ಗೊಂದಲದ ಕಾರಣಕ್ಕೆ, ‘ವಿಡಿಯೊ ಕಾನ್ಫರೆನ್ಸ್ ಮೂಲಕವೇ ಅಮೂಲ್ಯಾ ಅವರ ವಿಚಾರಣೆ ನಡೆಸಬೇಕು’ ಎಂದು ತನಿಖಾಧಿಕಾರಿ ನ್ಯಾಯಾಲಯವನ್ನು ಕೋರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ದೇಶದ್ರೋಹ’ ಆರೋಪದಡಿ ನ್ಯಾಯಾಂಗ ಬಂಧನದಲ್ಲಿದ್ದ ಅಮೂಲ್ಯಾ ಲಿಯೋನ್ (19) ಅವರನ್ನು ಹೆಚ್ಚಿನ ವಿಚಾರಣೆಗಾಗಿ ಪಶ್ಚಿಮ ವಿಭಾಗದ ಪೊಲೀಸರ ಕಸ್ಟಡಿಗೆ ನೀಡಲಾಗಿದೆ.</p>.<p>ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ವಿರೋಧಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಫೆ. 20ರಂದು ನಡೆದಿದ್ದ ಪ್ರತಿಭಟನೆಯಲ್ಲಿ ಅಮೂಲ್ಯಾ ಲಿಯೋನ್, ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ್ದರು. ವೇದಿಕೆಯಲ್ಲೇ ಅವರನ್ನು ಬಂಧಿಸಲಾಗಿತ್ತು. ಅಂದಿನಿಂದಲೇ ಅವರು ನ್ಯಾಯಾಂಗ ಬಂಧನದಲ್ಲಿದ್ದರು.</p>.<p>‘ಪ್ರಕರಣ ಸಂಬಂಧ ಪ್ರತಿಭಟನೆ ಆಯೋಜಕರು ಸೇರಿ ಹಲವರ ಹೇಳಿಕೆ ಪಡೆಯಲಾಗಿದೆ. ಅಮೂಲ್ಯಾ ವಿಚಾರಣೆ ಅಗತ್ಯವಿದ್ದು, ಕಸ್ಟಡಿಗೆ ನೀಡಬೇಕು’ ಎಂದು ಕೋರಿ ಪೊಲೀಸರು ನ್ಯಾಯಾಲಯಕ್ಕೆ ಮಂಗಳವಾರ ಅರ್ಜಿ ಸಲ್ಲಿಸಿದ್ದರು. ಅದನ್ನು ಪುರಸ್ಕರಿಸಿದ ನ್ಯಾಯಾಲಯ, ಅಮೂಲ್ಯಾ ಅವರನ್ನು 5 ದಿನಗಳವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ.</p>.<p>ಅಮೂಲ್ಯಾ ಪರ ವಕಾಲತ್ತು ವಹಿಸಲು ಕೆಲ ವಕೀಲರು ಸಿದ್ಧತೆ ಮಾಡಿಕೊಂಡಿದ್ದರು. ಇದಕ್ಕೆ ಹಲವು ವಕೀಲರು ಆಕ್ಷೇಪ ವ್ಯಕ್ತಪಡಿಸುತ್ತಿದ್ದರು. ‘ದೇಶದ್ರೋಹ ಎಸಗಿರುವ ಅಮೂಲ್ಯಾ ಪರ ವಕಾಲತ್ತು ವಹಿಸಬಾರದು’ ಎಂದು ಎಚ್ಚರಿಕೆಯನ್ನೂ ನೀಡಿದ್ದರು. ಈ ಗೊಂದಲದ ಕಾರಣಕ್ಕೆ, ‘ವಿಡಿಯೊ ಕಾನ್ಫರೆನ್ಸ್ ಮೂಲಕವೇ ಅಮೂಲ್ಯಾ ಅವರ ವಿಚಾರಣೆ ನಡೆಸಬೇಕು’ ಎಂದು ತನಿಖಾಧಿಕಾರಿ ನ್ಯಾಯಾಲಯವನ್ನು ಕೋರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>