<p><strong>ಬೆಂಗಳೂರು</strong>: ‘ಪರಿಶಿಷ್ಟ ಜಾತಿಗಳಲ್ಲಿನ ಒಳಮೀಸಲಾತಿ ಸಂಬಂಧ ಸರ್ಕಾರಕ್ಕೆ ಸಲಹೆ ನೀಡುವಾಗ ರಾಜ್ಯದಲ್ಲಿನ 49 ಅಲೆಮಾರಿ ಸಮುದಾಯಗಳನ್ನೂ ಪರಿಗಣಿಸಬೇಕು’ ಎಂದು ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾವು ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ನೇತೃತ್ವದ ಏಕಸದಸ್ಯ ವಿಚಾರಣಾ ಆಯೋಗಕ್ಕೆ ಮನವಿ ಸಲ್ಲಿಸಿದೆ.</p>.<p>ಮಹಾಸಭಾದ ರಾಜ್ಯಾಧ್ಯಕ್ಷ ಬಿ.ಎಲ್.ಹನುಮಂತಪ್ಪ ಮತ್ತು ಪ್ರಧಾನ ಕಾರ್ಯದರ್ಶಿ ನಾಗರಾಜ್ ಎಚ್.ಸಿ ನೇತೃತ್ವದಲ್ಲಿ 49 ಅಲೆಮಾರಿ ಸಮುದಾಯಗಳ ಪ್ರತಿನಿಧಿಗಳು ನಾಗಮೋಹನ್ ದಾಸ್ ಅವರನ್ನು ಗುರುವಾರ ಭೇಟಿ ಮಾಡಿ, ಮನವಿ ಪತ್ರ ಸಲ್ಲಿಸಿದರು. </p>.<p>‘ಪರಿಶಿಷ್ಟ ಜಾತಿಯಲ್ಲಿರುವ ನೂರೊಂದು ಸಮುದಾಯಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ‘ಜಾತಿವಾರು ಸಮೀಕ್ಷೆ’ಯ ವರದಿಗಳನ್ನು ಸರ್ಕಾರ ಪ್ರಕಟಿಸಿಲ್ಲ. ಅಲೆಮಾರಿ ಸಮುದಾಯಗಳಿಗೆ ಸಂಬಂಧಿಸಿದ ದತ್ತಾಂಶಗಳು ಲಭ್ಯವಿಲ್ಲ’ ಎಂದು ಮನವಿಯಲ್ಲಿ ವಿವರಿಸಿದೆ.</p>.<p>‘ರಾಜ್ಯದಲ್ಲಿ ಎಲ್ಲಾ ಹಂತ ಮತ್ತು ಕ್ಷೇತ್ರದಲ್ಲೂ ಅತ್ಯಂತ ಹಿಂದುಳಿದವರು ಅಲೆಮಾರಿ ಸಮುದಾಯದವರೇ ಆಗಿದ್ದಾರೆ. ನೀವು ಈ ಸಮುದಾಯಗಳ ಸಮೀಕ್ಷೆ ನಡೆಸಿ, ಆ ದತ್ತಾಂಶದ ಆಧಾರದ ಮೇಲೆ ಸರ್ಕಾರಕ್ಕೆ ಸಲಹೆ ನೀಡಬೇಕು. ಒಳಮೀಸಲಾತಿಗೆ ಶಿಫಾರಸು ಮಾಡುವಾಗ ಅಲೆಮಾರಿ ಸಮುದಾಯಗಳನ್ನೂ ಪರಿಗಣಿಸಬೇಕು’ ಎಂದು ಕೋರಿದೆ.</p>.<p>‘ಅಲೆಮಾರಿ ಸಮುದಾಯಗಳ ಅಧ್ಯಯನಕ್ಕೆ ಎಂದು 2008ರಲ್ಲಿ ಕೇಂದ್ರ ಸರ್ಕಾರ ರಚಿಸಿದ್ದ ಬಾಲಕೃಷ್ಣ ರೇಣುಕೆ ರಾಷ್ಟ್ರೀಯ ಆಯೋಗ ಮತ್ತು 2015ರ ಬಿಕ್ಕುರಾಮ್ ಜೀ ಇದಾತೆ ಆಯೋಗದ ವರದಿಗಳ ಪ್ರಕಾರ, ಈ ಸಮುದಾಯಗಳ ಜನಸಂಖ್ಯಾ ಪ್ರಮಾಣ ಶೇ 10ರಷ್ಟಿದೆ. ಇದರ ಆಧಾರದಲ್ಲಿ ಶೇ 7ರಷ್ಟು ಮೀಸಲಾತಿ ಕೇಳಿ ಸರ್ಕಾರಕ್ಕೂ ಪತ್ರ ಬರೆಯಲಾಗಿದೆ. ಸರ್ಕಾರಕ್ಕೆ ಶಿಫಾರಸು ಮಾಡುವಲ್ಲಿ ಈ ದತ್ತಾಂಶಗಳನ್ನು ಬಳಸಿಕೊಳ್ಳಬಹುದು ಎಂದು ಪತ್ರದಲ್ಲಿ ವಿವರಿಸಲಾಗಿದೆ’ ಎಂದು ಮಹಾಸಭಾದ ಗೌರವಾಧ್ಯಕ್ಷ ಸಿ.ಎಸ್.ದ್ವಾರಕನಾಥ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಪರಿಶಿಷ್ಟ ಜಾತಿಗಳಲ್ಲಿನ ಒಳಮೀಸಲಾತಿ ಸಂಬಂಧ ಸರ್ಕಾರಕ್ಕೆ ಸಲಹೆ ನೀಡುವಾಗ ರಾಜ್ಯದಲ್ಲಿನ 49 ಅಲೆಮಾರಿ ಸಮುದಾಯಗಳನ್ನೂ ಪರಿಗಣಿಸಬೇಕು’ ಎಂದು ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾವು ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ನೇತೃತ್ವದ ಏಕಸದಸ್ಯ ವಿಚಾರಣಾ ಆಯೋಗಕ್ಕೆ ಮನವಿ ಸಲ್ಲಿಸಿದೆ.</p>.<p>ಮಹಾಸಭಾದ ರಾಜ್ಯಾಧ್ಯಕ್ಷ ಬಿ.ಎಲ್.ಹನುಮಂತಪ್ಪ ಮತ್ತು ಪ್ರಧಾನ ಕಾರ್ಯದರ್ಶಿ ನಾಗರಾಜ್ ಎಚ್.ಸಿ ನೇತೃತ್ವದಲ್ಲಿ 49 ಅಲೆಮಾರಿ ಸಮುದಾಯಗಳ ಪ್ರತಿನಿಧಿಗಳು ನಾಗಮೋಹನ್ ದಾಸ್ ಅವರನ್ನು ಗುರುವಾರ ಭೇಟಿ ಮಾಡಿ, ಮನವಿ ಪತ್ರ ಸಲ್ಲಿಸಿದರು. </p>.<p>‘ಪರಿಶಿಷ್ಟ ಜಾತಿಯಲ್ಲಿರುವ ನೂರೊಂದು ಸಮುದಾಯಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ‘ಜಾತಿವಾರು ಸಮೀಕ್ಷೆ’ಯ ವರದಿಗಳನ್ನು ಸರ್ಕಾರ ಪ್ರಕಟಿಸಿಲ್ಲ. ಅಲೆಮಾರಿ ಸಮುದಾಯಗಳಿಗೆ ಸಂಬಂಧಿಸಿದ ದತ್ತಾಂಶಗಳು ಲಭ್ಯವಿಲ್ಲ’ ಎಂದು ಮನವಿಯಲ್ಲಿ ವಿವರಿಸಿದೆ.</p>.<p>‘ರಾಜ್ಯದಲ್ಲಿ ಎಲ್ಲಾ ಹಂತ ಮತ್ತು ಕ್ಷೇತ್ರದಲ್ಲೂ ಅತ್ಯಂತ ಹಿಂದುಳಿದವರು ಅಲೆಮಾರಿ ಸಮುದಾಯದವರೇ ಆಗಿದ್ದಾರೆ. ನೀವು ಈ ಸಮುದಾಯಗಳ ಸಮೀಕ್ಷೆ ನಡೆಸಿ, ಆ ದತ್ತಾಂಶದ ಆಧಾರದ ಮೇಲೆ ಸರ್ಕಾರಕ್ಕೆ ಸಲಹೆ ನೀಡಬೇಕು. ಒಳಮೀಸಲಾತಿಗೆ ಶಿಫಾರಸು ಮಾಡುವಾಗ ಅಲೆಮಾರಿ ಸಮುದಾಯಗಳನ್ನೂ ಪರಿಗಣಿಸಬೇಕು’ ಎಂದು ಕೋರಿದೆ.</p>.<p>‘ಅಲೆಮಾರಿ ಸಮುದಾಯಗಳ ಅಧ್ಯಯನಕ್ಕೆ ಎಂದು 2008ರಲ್ಲಿ ಕೇಂದ್ರ ಸರ್ಕಾರ ರಚಿಸಿದ್ದ ಬಾಲಕೃಷ್ಣ ರೇಣುಕೆ ರಾಷ್ಟ್ರೀಯ ಆಯೋಗ ಮತ್ತು 2015ರ ಬಿಕ್ಕುರಾಮ್ ಜೀ ಇದಾತೆ ಆಯೋಗದ ವರದಿಗಳ ಪ್ರಕಾರ, ಈ ಸಮುದಾಯಗಳ ಜನಸಂಖ್ಯಾ ಪ್ರಮಾಣ ಶೇ 10ರಷ್ಟಿದೆ. ಇದರ ಆಧಾರದಲ್ಲಿ ಶೇ 7ರಷ್ಟು ಮೀಸಲಾತಿ ಕೇಳಿ ಸರ್ಕಾರಕ್ಕೂ ಪತ್ರ ಬರೆಯಲಾಗಿದೆ. ಸರ್ಕಾರಕ್ಕೆ ಶಿಫಾರಸು ಮಾಡುವಲ್ಲಿ ಈ ದತ್ತಾಂಶಗಳನ್ನು ಬಳಸಿಕೊಳ್ಳಬಹುದು ಎಂದು ಪತ್ರದಲ್ಲಿ ವಿವರಿಸಲಾಗಿದೆ’ ಎಂದು ಮಹಾಸಭಾದ ಗೌರವಾಧ್ಯಕ್ಷ ಸಿ.ಎಸ್.ದ್ವಾರಕನಾಥ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>