ಬೆಂಗಳೂರು: ತೋಟಗಾರಿಕೆ ನಿರ್ದೇಶನಾಲಯವು ರೈತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗಾಗಿ ಇದೇ 4 ರಂದು ಅಣಬೆ ಬೇಸಾಯ ತರಬೇತಿ ಕಾರ್ಯಾಗಾರ ಹಮ್ಮಿಕೊಂಡಿದೆ.
ಬೆಂಗಳೂರು ದಕ್ಷಿಣ ತಾಲ್ಲೂಕಿನ ಹುಳಿಮಾವು ತೋಟಗಾರಿಕೆ ಜೈವಿಕ ಕೇಂದ್ರದಲ್ಲಿ ಈ ಕಾರ್ಯಾಗಾರ ನಡೆಯಲಿದೆ. ಇದರಲ್ಲಿ ಪಾಲ್ಗೊಳ್ಳುವವರು ₹250 ಶುಲ್ಕ ಪಾವತಿಸಿ ಹೆಸರು ನೋಂದಾಯಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗೆ 9449833153 ಅಥವಾ 9066764248ಗೆ ಕರೆ ಮಾಡಬಹುದು.