<p><strong>ಬೆಂಗಳೂರು:</strong> ‘ವಿಧಾನ ಸಭಾಧ್ಯಕ್ಷರಿಗೆ ಸೋಮವಾರ ರಾಜೀನಾಮೆ ಕೊಟ್ಟಿದ್ದೇನೆ. ತಾಂತ್ರಿಕ ಕಾರಣದಿಂದ ಮತ್ತೊಮ್ಮೆ ರಾಜೀನಾಮೆ ನೀಡುವಂತೆ ಸಭಾಧ್ಯಕ್ಷರು ಸಲಹೆ ಮಾಡಿದರೆ ಇನ್ನೊಮ್ಮೆ ಭೇಟಿಯಾಗಿ ರಾಜೀನಾಮೆ ನೀಡುತ್ತೇನೆ’ ಎಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಆನಂದ್ ಸಿಂಗ್ ಹೇಳಿದರು.</p>.<p><a href="https://www.prajavani.net/stories/stateregional/anand-singh-letter-home-648025.html" target="_blank">ಜಿಂದಾಲ್ಗೆ ಸರ್ಕಾರಿ ಭೂಮಿ ನೀಡಿರುವುದನ್ನು ಆಕ್ಷೇಪಿಸಿ ಆನಂದ್ ಸಿಂಗ್ ಪತ್ರ</a></p>.<p>ರಾಜ್ಯಪಾಲರನ್ನು ಭೇಟಿಯಾದ ಬಲಿಕ ಸುದ್ದಿಗಾರರೊಂದಿಗೆ ಮಾತನಾಡಿ, ‘ವಿಧಾನ ಸಭಾಧ್ಯಕ್ಷರು ರಾಜೀನಾಮೆ ನೀಡಿಲ್ಲ ಎಂದು ಹೇಳುತ್ತಿದ್ದಾರೆ. ಅದನ್ನು ಸ್ಪಷ್ಟಪಡಿಸುವ ಸಲುವಾಗಿ ರಾಜ್ಯಪಾಲರನ್ನು ಭೇಟಿಯಾಗಿದ್ದೆ. ರಾಜೀನಾಮೆ ನೀಡಿರುವ ವಿಚಾರವನ್ನು ಸ್ಪಷ್ಟಪಡಿಸಿದ್ದೇನೆ. ರಾಜೀನಾಮೆಗೆ ಕಾರಣವನ್ನೂ ತಿಳಿಸಿದ್ದೇನೆ’ ಎಂದರು.</p>.<p><a href="https://www.prajavani.net/stories/stateregional/wiil-form-new-goverment-if-648022.html" target="_blank">ನಾನೇನು ಸನ್ಯಾಸಿಯಲ್ಲ; ಅತೃಪ್ತರು ಹೊರಬಂದರೆ ಸರ್ಕಾರ ರಚನೆಗೆ ಸಿದ್ಧ: ಯಡಿಯೂರಪ್ಪ</a></p>.<p><a href="https://www.prajavani.net/district/tumakuru/anand-sing-resign-648019.html" target="_blank">ಆನಂದಸಿಂಗ್ ರಾಜೀನಾಮೆಗೆ ಕಾರಣ ಗೊತ್ತಿಲ್ಲ: ಸಚಿವ ರಾಜಶೇಖರ್ ಪಾಟೀಲ್</a></p>.<p>'ಜಿಂದಾಲ್ ಕಂಪನಿಗೆ ಭೂಮಿ ಪರಭಾರೆ ಮಾಡುವುನ್ನು ವಿರೋಧಿಸಿದ್ದೆ. ಭೂಮಿ ನೀಡುವುದಾದರೆ ಗುತ್ತಿಗೆ ಆಧಾರದಲ್ಲಿ ನೀಡಲಿ. ಯಾವುದೇ ಕಾರಣಕ್ಕೂ ಮಾರಾಟ ಮಾಡಬಾರದು. ಜಮೀನು ಪರಭಾರೆ ಮಾಡಿದರೆ ಶಾಸಕ ಸ್ಥಾನ ಸೇರಿದಂತೆ ಯಾವುದೇ ತ್ಯಾಗಕ್ಕೂ ಸಿದ್ಧ ಎಂದು ಸ್ಪಷ್ಟಪಡಿಸಿದ್ದೆ. ಆದರೆ ಸರ್ಕಾರ ಈ ವಿಚಾರದಲ್ಲಿ ಸ್ಪಷ್ಟ ನಿರ್ಧಾರ ಕೈಗೊಳ್ಳದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡುತ್ತಿದ್ದೇನೆ’ ಎಂದು ಸ್ಪಷ್ಟಪಡಿಸಿದರು.</p>.<p><a href="https://www.prajavani.net/stories/stateregional/anand-singh-resignation-will-648017.html" target="_blank">ಹಲೋ... ಏನ್ ರಾಜೀನಾಮೆ ಕೊಡ್ತಿದೀರಾ?</a></p>.<p>‘ಬಳ್ಳಾರಿಯನ್ನು ವಿಜಯನಗರ ಜಿಲ್ಲೆ ಮಾಡಬೇಕು’ ಎಂದು ಆನಂದ್ ಸಿಂಗ್ ಒತ್ತಾಯಿಸಿದರು. ‘ಈಗ ರಾಜೀನಾಮೆ ನೀಡಿದ್ದೇನೆ. ಸರ್ಕಾರದ ನಿರ್ಧಾರ ಮೇಲೆ ರಾಜೀನಾಮೆ ವಾಸಪ್ ಪಡೆಯಬೇಕೆ, ಬೇಡವೆ ಎಂಬುದು ನಿರ್ಧಾರವಾಗುತ್ತದೆ’ಎಂದರು.</p>.<p><a href="https://www.prajavani.net/stories/stateregional/it-bit-shocking-me-im-trying-648021.html" target="_blank">ಆನಂದ್ ಸಿಂಗ್ ನಮ್ಮ ಸಂಪರ್ಕಕ್ಕೆ ಸಿಗುತ್ತಿಲ್ಲ: ಡಿ.ಕೆ ಶಿವಕುಮಾರ್</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ವಿಧಾನ ಸಭಾಧ್ಯಕ್ಷರಿಗೆ ಸೋಮವಾರ ರಾಜೀನಾಮೆ ಕೊಟ್ಟಿದ್ದೇನೆ. ತಾಂತ್ರಿಕ ಕಾರಣದಿಂದ ಮತ್ತೊಮ್ಮೆ ರಾಜೀನಾಮೆ ನೀಡುವಂತೆ ಸಭಾಧ್ಯಕ್ಷರು ಸಲಹೆ ಮಾಡಿದರೆ ಇನ್ನೊಮ್ಮೆ ಭೇಟಿಯಾಗಿ ರಾಜೀನಾಮೆ ನೀಡುತ್ತೇನೆ’ ಎಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಆನಂದ್ ಸಿಂಗ್ ಹೇಳಿದರು.</p>.<p><a href="https://www.prajavani.net/stories/stateregional/anand-singh-letter-home-648025.html" target="_blank">ಜಿಂದಾಲ್ಗೆ ಸರ್ಕಾರಿ ಭೂಮಿ ನೀಡಿರುವುದನ್ನು ಆಕ್ಷೇಪಿಸಿ ಆನಂದ್ ಸಿಂಗ್ ಪತ್ರ</a></p>.<p>ರಾಜ್ಯಪಾಲರನ್ನು ಭೇಟಿಯಾದ ಬಲಿಕ ಸುದ್ದಿಗಾರರೊಂದಿಗೆ ಮಾತನಾಡಿ, ‘ವಿಧಾನ ಸಭಾಧ್ಯಕ್ಷರು ರಾಜೀನಾಮೆ ನೀಡಿಲ್ಲ ಎಂದು ಹೇಳುತ್ತಿದ್ದಾರೆ. ಅದನ್ನು ಸ್ಪಷ್ಟಪಡಿಸುವ ಸಲುವಾಗಿ ರಾಜ್ಯಪಾಲರನ್ನು ಭೇಟಿಯಾಗಿದ್ದೆ. ರಾಜೀನಾಮೆ ನೀಡಿರುವ ವಿಚಾರವನ್ನು ಸ್ಪಷ್ಟಪಡಿಸಿದ್ದೇನೆ. ರಾಜೀನಾಮೆಗೆ ಕಾರಣವನ್ನೂ ತಿಳಿಸಿದ್ದೇನೆ’ ಎಂದರು.</p>.<p><a href="https://www.prajavani.net/stories/stateregional/wiil-form-new-goverment-if-648022.html" target="_blank">ನಾನೇನು ಸನ್ಯಾಸಿಯಲ್ಲ; ಅತೃಪ್ತರು ಹೊರಬಂದರೆ ಸರ್ಕಾರ ರಚನೆಗೆ ಸಿದ್ಧ: ಯಡಿಯೂರಪ್ಪ</a></p>.<p><a href="https://www.prajavani.net/district/tumakuru/anand-sing-resign-648019.html" target="_blank">ಆನಂದಸಿಂಗ್ ರಾಜೀನಾಮೆಗೆ ಕಾರಣ ಗೊತ್ತಿಲ್ಲ: ಸಚಿವ ರಾಜಶೇಖರ್ ಪಾಟೀಲ್</a></p>.<p>'ಜಿಂದಾಲ್ ಕಂಪನಿಗೆ ಭೂಮಿ ಪರಭಾರೆ ಮಾಡುವುನ್ನು ವಿರೋಧಿಸಿದ್ದೆ. ಭೂಮಿ ನೀಡುವುದಾದರೆ ಗುತ್ತಿಗೆ ಆಧಾರದಲ್ಲಿ ನೀಡಲಿ. ಯಾವುದೇ ಕಾರಣಕ್ಕೂ ಮಾರಾಟ ಮಾಡಬಾರದು. ಜಮೀನು ಪರಭಾರೆ ಮಾಡಿದರೆ ಶಾಸಕ ಸ್ಥಾನ ಸೇರಿದಂತೆ ಯಾವುದೇ ತ್ಯಾಗಕ್ಕೂ ಸಿದ್ಧ ಎಂದು ಸ್ಪಷ್ಟಪಡಿಸಿದ್ದೆ. ಆದರೆ ಸರ್ಕಾರ ಈ ವಿಚಾರದಲ್ಲಿ ಸ್ಪಷ್ಟ ನಿರ್ಧಾರ ಕೈಗೊಳ್ಳದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡುತ್ತಿದ್ದೇನೆ’ ಎಂದು ಸ್ಪಷ್ಟಪಡಿಸಿದರು.</p>.<p><a href="https://www.prajavani.net/stories/stateregional/anand-singh-resignation-will-648017.html" target="_blank">ಹಲೋ... ಏನ್ ರಾಜೀನಾಮೆ ಕೊಡ್ತಿದೀರಾ?</a></p>.<p>‘ಬಳ್ಳಾರಿಯನ್ನು ವಿಜಯನಗರ ಜಿಲ್ಲೆ ಮಾಡಬೇಕು’ ಎಂದು ಆನಂದ್ ಸಿಂಗ್ ಒತ್ತಾಯಿಸಿದರು. ‘ಈಗ ರಾಜೀನಾಮೆ ನೀಡಿದ್ದೇನೆ. ಸರ್ಕಾರದ ನಿರ್ಧಾರ ಮೇಲೆ ರಾಜೀನಾಮೆ ವಾಸಪ್ ಪಡೆಯಬೇಕೆ, ಬೇಡವೆ ಎಂಬುದು ನಿರ್ಧಾರವಾಗುತ್ತದೆ’ಎಂದರು.</p>.<p><a href="https://www.prajavani.net/stories/stateregional/it-bit-shocking-me-im-trying-648021.html" target="_blank">ಆನಂದ್ ಸಿಂಗ್ ನಮ್ಮ ಸಂಪರ್ಕಕ್ಕೆ ಸಿಗುತ್ತಿಲ್ಲ: ಡಿ.ಕೆ ಶಿವಕುಮಾರ್</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>