<p><strong>ಯಾದಗಿರಿ/ಗುರುಮಠಕಲ್:</strong> ಗುರುಮಠಕಲ್ ತಾಲ್ಲೂಕಿನ ಅನಪುರ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ನರಸಮ್ಮ ಯಲ್ಲಪ್ಪ (75) ಎಂಬುವರು ಬುಧವಾರ ರಾತ್ರಿ ಯಾದಗಿರಿ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಇದರೊಂದಿಗೆ ಮೃತರ ಸಂಖ್ಯೆ<br />ಮೂರಕ್ಕೆ ಏರಿಕೆಯಾಗಿದೆ. ಮೂರು ದಿನಗಳಲ್ಲಿ ಗ್ರಾಮದ ಒಟ್ಟು 66 ಮಂದಿ ವಾಂತಿ ಭೇದಿಯಿಂದ ಅಸ್ವಸ್ಥಗೊಂಡಿದ್ದಾರೆ.</p>.<p>ಅಸ್ವಸ್ಥ ಗ್ರಾಮಸ್ಥರಿಗೆ ಗ್ರಾಮದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ನಂತರ ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ.</p>.<p>‘ಜಿಲ್ಲಾ ಆಸ್ಪತ್ರೆ, ತೆಲಂಗಾಣದ ನಾರಾಯಣಪೇಟ ಮತ್ತು ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಅಸ್ವಸ್ಥರಿಗೆ ಚಿಕಿತ್ಸೆ ಮುಂದು<br />ವರೆದಿದೆ. ಈ ಎಲ್ಲದ್ದಕ್ಕೂ ಕಲುಷಿತ ನೀರು ಅಥವಾ ಕಳಪೆ ಆಹಾರ ಕಾರಣವೇ ಎಂಬುದು ಸ್ಪಷ್ಟವಾಗುತ್ತಿಲ್ಲ. ಎಲ್ಲ ಜಲ<br />ಮೂಲಗಳ ಪರಿಶೀಲನೆ ನಡೆಸಿ ದ್ದೇವೆ’ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಅನಪುರಕ್ಕೆ ಪೂರೈಕೆಯಾಗುವನೀರು ಕುಡಿಯಲು ಯೋಗ್ಯವಲ್ಲ ಎಂದು ಯಾದಗಿರಿಯ ಪ್ರಯೋಗಾಲಯವು ವರದಿ ನೀಡಿದೆ. ನೀರಿನಲ್ಲಿ ಯಾವ ಬ್ಯಾಕ್ಟೀರಿಯ ಇದೆ ಎಂಬುದನ್ನು ತಿಳಿಯಲು, ನೀರನ್ನು ರಾಯಚೂರು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ’ ಎಂದು ಯಾದಗಿರಿ ತಾಲ್ಲೂಕು ವೈದ್ಯಾಧಿಕಾರಿ ಡಾ.ಹಣಮಂತ ರೆಡ್ಡಿರವರು ಮಾಹಿತಿ ನೀಡಿದರು.</p>.<p>‘ಗ್ರಾಮಕ್ಕೆ ಪೂರೈಕೆಯಾಗುವ ಐದೂ ಕೊಳವೆಬಾವಿಗಳ ನೀರಿನ ಶುದ್ಧತೆ ಪರೀಕ್ಷಿಸಲು ಮತ್ತೊಮ್ಮೆ ಪ್ರಯೋಗಾಲಯಕ್ಕೆ ಕಳುಹಿಸಿದ್ದೇವೆ’ ಎಂದು ಗ್ರಾಮೀಣ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಸತೀಶ ಗುಡಿಗೆನವರ್ ತಿಳಿಸಿದರು.</p>.<p><strong>ಪರಿಹಾರ ಭರವಸೆ:</strong></p>.<p>ಗುರುಮಠಕಲ್ ತಾಲ್ಲೂಕಿನ ಅನಪುರದಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.</p>.<p>ವಿಧಾನಸಭೆಯಲ್ಲಿ ಶೂನ್ಯವೇಳೆಯಲ್ಲಿ ಜೆಡಿಎಸ್ನ ನಾಗನಗೌಡ ಕಂದಕೂರು ಅವರ ಪ್ರಶ್ನೆಗೆ ಉತ್ತರಿಸಿ, ಎಷ್ಟು ಪರಿಹಾರ ನೀಡಬೇಕು ಎಂಬುದನ್ನು ಮುಖ್ಯಮಂತ್ರಿಯವರ ಜತೆ ಚರ್ಚಿಸಲಾಗುವುದು ಎಂದರು.</p>.<p>‘ಈ ಪ್ರಕರಣದಲ್ಲಿ ಮೂವರು ಮೃತಪಟ್ಟಿದ್ದಾರೆ. 58 ಮಂದಿ ಅಸ್ವಸ್ಥಗೊಂಡಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಪರಿಸ್ಥಿತಿ ಗಂಭೀರವಾಗಿ ಇರುವವರಿಗೆ ಹೆಚ್ಚಿನ ಚಿಕಿತ್ಸೆ ಕೊಡಿಸಲು ವ್ಯವಸ್ಥೆ ಮಾಡಲಾಗುವುದು’ ಎಂದೂ ಜ್ಞಾನೇಂದ್ರ ಭರವಸೆ ನೀಡಿದರು.</p>.<p>ಈ ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ನ ಉಪನಾಯಕ ಯು.ಟಿ. ಖಾದರ್ ಮತ್ತು ಪ್ರಿಯಾಂಕ್ ಖರ್ಗೆ ಆಗ್ರಹಿಸಿದರು.</p>.<p>ವಿಷಯ ಪ್ರಸ್ತಾಪಿಸಿದ ನಾಗನಗೌಡ ಕಂದಕೂರ, ‘ಅನಪುರ ಗ್ರಾಮದಲ್ಲಿ ನೀರು ಸೇವಿಸಿ ಮೂವರು ಮೃತಪಟ್ಟಿದ್ದು, ಸಾಕಷ್ಟು ಮಂದಿ ಅಸ್ವಸ್ಥರಾಗಿದ್ದಾರೆ. ತೆಲಂಗಾಣದ ಮೆಹಬೂಬ್ ನಗರ, ನಾರಾಯಣ ಪೇಟೆ ಮತ್ತು ಯಾದಗಿರಿ ಜಿಲ್ಲೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನೀರಿನ ಪೈಪ್ನಲ್ಲಿ ಕಲುಷಿತ ನೀರು ಸೇರಿ ಈ ದುರಂತ ನಡೆದಿದೆ. ಸೂಕ್ತ ಪರಿಹಾರ ನೀಡಬೇಕು’ ಎಂದರು.</p>.<p>ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ‘ಅಸ್ವಸ್ಥರಾದವರನ್ನು ತೆಲಂಗಾಣದ ಆಸ್ಪತ್ರೆಗೆ ಒಯ್ಯಲಾಗಿದೆ ಎಂದರೆ, ರಾಜ್ಯದಲ್ಲಿ ಆರೋಗ್ಯ ಕ್ಷೇತ್ರದ ಸ್ಥಿತಿಗತಿ ಹೇಗಿದೆ ಎಂಬುದನ್ನು ಊಹಿಸಬಹುದು‘ ಎಂದು ಲೇವಡಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ/ಗುರುಮಠಕಲ್:</strong> ಗುರುಮಠಕಲ್ ತಾಲ್ಲೂಕಿನ ಅನಪುರ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ನರಸಮ್ಮ ಯಲ್ಲಪ್ಪ (75) ಎಂಬುವರು ಬುಧವಾರ ರಾತ್ರಿ ಯಾದಗಿರಿ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಇದರೊಂದಿಗೆ ಮೃತರ ಸಂಖ್ಯೆ<br />ಮೂರಕ್ಕೆ ಏರಿಕೆಯಾಗಿದೆ. ಮೂರು ದಿನಗಳಲ್ಲಿ ಗ್ರಾಮದ ಒಟ್ಟು 66 ಮಂದಿ ವಾಂತಿ ಭೇದಿಯಿಂದ ಅಸ್ವಸ್ಥಗೊಂಡಿದ್ದಾರೆ.</p>.<p>ಅಸ್ವಸ್ಥ ಗ್ರಾಮಸ್ಥರಿಗೆ ಗ್ರಾಮದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ನಂತರ ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ.</p>.<p>‘ಜಿಲ್ಲಾ ಆಸ್ಪತ್ರೆ, ತೆಲಂಗಾಣದ ನಾರಾಯಣಪೇಟ ಮತ್ತು ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಅಸ್ವಸ್ಥರಿಗೆ ಚಿಕಿತ್ಸೆ ಮುಂದು<br />ವರೆದಿದೆ. ಈ ಎಲ್ಲದ್ದಕ್ಕೂ ಕಲುಷಿತ ನೀರು ಅಥವಾ ಕಳಪೆ ಆಹಾರ ಕಾರಣವೇ ಎಂಬುದು ಸ್ಪಷ್ಟವಾಗುತ್ತಿಲ್ಲ. ಎಲ್ಲ ಜಲ<br />ಮೂಲಗಳ ಪರಿಶೀಲನೆ ನಡೆಸಿ ದ್ದೇವೆ’ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಅನಪುರಕ್ಕೆ ಪೂರೈಕೆಯಾಗುವನೀರು ಕುಡಿಯಲು ಯೋಗ್ಯವಲ್ಲ ಎಂದು ಯಾದಗಿರಿಯ ಪ್ರಯೋಗಾಲಯವು ವರದಿ ನೀಡಿದೆ. ನೀರಿನಲ್ಲಿ ಯಾವ ಬ್ಯಾಕ್ಟೀರಿಯ ಇದೆ ಎಂಬುದನ್ನು ತಿಳಿಯಲು, ನೀರನ್ನು ರಾಯಚೂರು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ’ ಎಂದು ಯಾದಗಿರಿ ತಾಲ್ಲೂಕು ವೈದ್ಯಾಧಿಕಾರಿ ಡಾ.ಹಣಮಂತ ರೆಡ್ಡಿರವರು ಮಾಹಿತಿ ನೀಡಿದರು.</p>.<p>‘ಗ್ರಾಮಕ್ಕೆ ಪೂರೈಕೆಯಾಗುವ ಐದೂ ಕೊಳವೆಬಾವಿಗಳ ನೀರಿನ ಶುದ್ಧತೆ ಪರೀಕ್ಷಿಸಲು ಮತ್ತೊಮ್ಮೆ ಪ್ರಯೋಗಾಲಯಕ್ಕೆ ಕಳುಹಿಸಿದ್ದೇವೆ’ ಎಂದು ಗ್ರಾಮೀಣ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಸತೀಶ ಗುಡಿಗೆನವರ್ ತಿಳಿಸಿದರು.</p>.<p><strong>ಪರಿಹಾರ ಭರವಸೆ:</strong></p>.<p>ಗುರುಮಠಕಲ್ ತಾಲ್ಲೂಕಿನ ಅನಪುರದಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.</p>.<p>ವಿಧಾನಸಭೆಯಲ್ಲಿ ಶೂನ್ಯವೇಳೆಯಲ್ಲಿ ಜೆಡಿಎಸ್ನ ನಾಗನಗೌಡ ಕಂದಕೂರು ಅವರ ಪ್ರಶ್ನೆಗೆ ಉತ್ತರಿಸಿ, ಎಷ್ಟು ಪರಿಹಾರ ನೀಡಬೇಕು ಎಂಬುದನ್ನು ಮುಖ್ಯಮಂತ್ರಿಯವರ ಜತೆ ಚರ್ಚಿಸಲಾಗುವುದು ಎಂದರು.</p>.<p>‘ಈ ಪ್ರಕರಣದಲ್ಲಿ ಮೂವರು ಮೃತಪಟ್ಟಿದ್ದಾರೆ. 58 ಮಂದಿ ಅಸ್ವಸ್ಥಗೊಂಡಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಪರಿಸ್ಥಿತಿ ಗಂಭೀರವಾಗಿ ಇರುವವರಿಗೆ ಹೆಚ್ಚಿನ ಚಿಕಿತ್ಸೆ ಕೊಡಿಸಲು ವ್ಯವಸ್ಥೆ ಮಾಡಲಾಗುವುದು’ ಎಂದೂ ಜ್ಞಾನೇಂದ್ರ ಭರವಸೆ ನೀಡಿದರು.</p>.<p>ಈ ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ನ ಉಪನಾಯಕ ಯು.ಟಿ. ಖಾದರ್ ಮತ್ತು ಪ್ರಿಯಾಂಕ್ ಖರ್ಗೆ ಆಗ್ರಹಿಸಿದರು.</p>.<p>ವಿಷಯ ಪ್ರಸ್ತಾಪಿಸಿದ ನಾಗನಗೌಡ ಕಂದಕೂರ, ‘ಅನಪುರ ಗ್ರಾಮದಲ್ಲಿ ನೀರು ಸೇವಿಸಿ ಮೂವರು ಮೃತಪಟ್ಟಿದ್ದು, ಸಾಕಷ್ಟು ಮಂದಿ ಅಸ್ವಸ್ಥರಾಗಿದ್ದಾರೆ. ತೆಲಂಗಾಣದ ಮೆಹಬೂಬ್ ನಗರ, ನಾರಾಯಣ ಪೇಟೆ ಮತ್ತು ಯಾದಗಿರಿ ಜಿಲ್ಲೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನೀರಿನ ಪೈಪ್ನಲ್ಲಿ ಕಲುಷಿತ ನೀರು ಸೇರಿ ಈ ದುರಂತ ನಡೆದಿದೆ. ಸೂಕ್ತ ಪರಿಹಾರ ನೀಡಬೇಕು’ ಎಂದರು.</p>.<p>ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ‘ಅಸ್ವಸ್ಥರಾದವರನ್ನು ತೆಲಂಗಾಣದ ಆಸ್ಪತ್ರೆಗೆ ಒಯ್ಯಲಾಗಿದೆ ಎಂದರೆ, ರಾಜ್ಯದಲ್ಲಿ ಆರೋಗ್ಯ ಕ್ಷೇತ್ರದ ಸ್ಥಿತಿಗತಿ ಹೇಗಿದೆ ಎಂಬುದನ್ನು ಊಹಿಸಬಹುದು‘ ಎಂದು ಲೇವಡಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>