ಆಂಧ್ರದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಸರಣಿ ಹಿಂದೂ ವಿರೋಧಿ ಕೃತ್ಯಗಳು , ದೇವಾಲಯ ಹಾಗೂ ಹಿಂದೂ ದೇವತೆಗಳ ವಿಗ್ರಹ ಭಗ್ನ ಮೊದಲಾದ ಪ್ರಕರಣಗಳ ಹಿನ್ನೆಲೆಯಲ್ಲಿ ಶ್ರೀಗಳು ಕಳೆದ ವಾರವಷ್ಟೆ ಹಾನಿಗೊಂಡ ಪ್ರದೇಶಗಳಿಗೆ ಭೇಟಿ ನೀಡಿ ಘಟನೆಗಳ ಕುರಿತಾಗಿ ಗಂಭೀರ ಕಳವಳ ವ್ಯಕ್ತಪಡಿಸಿದ್ದರು . ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಯವರ ಸೂಚನೆಯಂತೆ ಶ್ರೀನಿವಾಸ ರಾವ್ ಶ್ರೀಗಳನ್ನು ಭೇಟಿ ಮಾಡಿದ್ದು ವಿಷಯಗಳ ಬಗ್ಗೆ ವಿಸ್ತೃತವಾಗಿ ಸಮಾಲೋಚನೆ ನಡೆಸಿದರು .