<p><strong>ಬಂಗಾರಪೇಟೆ (ಕೋಲಾರ):</strong> ತಾಲ್ಲೂಕಿನ ದಾಸರಹೊಸಹಳ್ಳಿಯ ಅಂಗನವಾಡಿ ಕೇಂದ್ರದ ಚಾವಣಿಯ ಸಿಮೆಂಟ್ ತಳಪದರ (ಆರ್ಸಿಸಿ ಸೀಲಿಂಗ್ ಕಾಂಕ್ರೀಟ್) ಶನಿವಾರ ಕಳಚಿ ಬಿದ್ದು ನಾಲ್ವರು ಮಕ್ಕಳು ಗಾಯಗೊಂಡಿದ್ದಾರೆ.</p>.<p>ಗಾಯಗೊಂಡಿರುವ ಲಾಸ್ಯಾ, ಪರಿಣಿತಿ, ಲಿಖಿತಾ ಮತ್ತು ಚಾನ್ವಿ ಎಂಬ ಮಕ್ಕಳಿಗೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ನಾಲ್ಕೂ ಮಕ್ಕಳು ಮೂರರಿಂದ ನಾಲ್ಕು ವರ್ಷದವರಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p>.<p>ಲಿಖಿತಾ ಮತ್ತು ಚಾನ್ವಿ ಎಂಬ ಮಕ್ಕಳ ತಲೆಗೆ ಪೆಟ್ಟು ಬಿದ್ದಿದ್ದು, ಸಾರ್ವಜನಿಕ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಲಾಸ್ಯಾ ಕಾಲಿಗೆ ಏಟು ಬಿದ್ದಿದ್ದು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಪರಿಣಿತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. </p>.<p>ಈ ಅಂಗನವಾಡಿ ಕೇಂದ್ರದಲ್ಲಿ ಒಟ್ಟು ಏಳು ಮಕ್ಕಳಿದ್ದಾರೆ. ಚಾವಣಿಯ ಸಿಮೆಂಟ್ ಉದುರಲು ಆರಂಭವಾಗುತ್ತಿದ್ದಂತೆಯೇ ಮೂವರು ಬಾಲಕರು ಹೊರಗೆ ಓಡಿ ಬಂದಿದ್ದಾರೆ. ನಾಲ್ವರು ಬಾಲಕಿಯರು ಹೆದರಿ ಕೊಠಡಿಯಲ್ಲಿಯೇ ಕುಳಿತಿದ್ದರು.</p>.<p>ಈ ಘಟನೆ ನಡೆದಾಗ ಅಂಗನವಾಡಿ ಕಾರ್ಯಕರ್ತೆ ಕೇಂದ್ರದಲ್ಲಿ ಇರಲಿಲ್ಲ. ಅಂಗನವಾಡಿ ಅಕ್ಕಪಕ್ಕದ ಮನೆಯವರ ನೆರವಿನಿಂದ ಪೋಷಕರು ಮಕ್ಕಳನ್ನು ಆಸ್ಪತ್ರೆಗೆ ಕರೆದೊಯ್ದರು ಎಂದು ಸ್ಥಳೀಯರು ತಿಳಿಸಿದರು.</p>.<p>‘ಸುಮಾರು 30 ವರ್ಷ ಹಳೆಯ ಅಂಗನವಾಡಿ ಕಟ್ಟಡ ಶಿಥಿಲಗೊಂಡಿತ್ತು. ಎಂಟು ವರ್ಷದ ಹಿಂದೆ ನವೀಕರಣ ಮಾಡಲಾಗಿತ್ತು. ಕಳಪೆ ಕಾಮಗಾರಿ ಕಾರಣ ಚಾವಣಿ ತಳಪದರ ಕುಸಿದಿದೆ’ ಎಂದು ಸ್ಥಳೀಯರು ಆರೋಪಿಸಿದರು.</p>.<p><strong>ಕ್ರಮಕ್ಕೆ ಶಿಫಾರಸು:</strong> ಅಂಗನವಾಡಿ ಕೇಂದ್ರವನ್ನು ಬಾಡಿಗೆ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ ವಿರುದ್ಧ ಕ್ರಮ ಕೈಗೊಳ್ಳಲು ಮೇಲಧಿಕಾರಿಗೆ ವರದಿ ನೀಡಲಾಗಿದೆ ಎಂದು ಬಂಗಾರಪೇಟೆ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ) ಮುನಿರಾಜು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ (ಕೋಲಾರ):</strong> ತಾಲ್ಲೂಕಿನ ದಾಸರಹೊಸಹಳ್ಳಿಯ ಅಂಗನವಾಡಿ ಕೇಂದ್ರದ ಚಾವಣಿಯ ಸಿಮೆಂಟ್ ತಳಪದರ (ಆರ್ಸಿಸಿ ಸೀಲಿಂಗ್ ಕಾಂಕ್ರೀಟ್) ಶನಿವಾರ ಕಳಚಿ ಬಿದ್ದು ನಾಲ್ವರು ಮಕ್ಕಳು ಗಾಯಗೊಂಡಿದ್ದಾರೆ.</p>.<p>ಗಾಯಗೊಂಡಿರುವ ಲಾಸ್ಯಾ, ಪರಿಣಿತಿ, ಲಿಖಿತಾ ಮತ್ತು ಚಾನ್ವಿ ಎಂಬ ಮಕ್ಕಳಿಗೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ನಾಲ್ಕೂ ಮಕ್ಕಳು ಮೂರರಿಂದ ನಾಲ್ಕು ವರ್ಷದವರಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p>.<p>ಲಿಖಿತಾ ಮತ್ತು ಚಾನ್ವಿ ಎಂಬ ಮಕ್ಕಳ ತಲೆಗೆ ಪೆಟ್ಟು ಬಿದ್ದಿದ್ದು, ಸಾರ್ವಜನಿಕ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಲಾಸ್ಯಾ ಕಾಲಿಗೆ ಏಟು ಬಿದ್ದಿದ್ದು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಪರಿಣಿತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. </p>.<p>ಈ ಅಂಗನವಾಡಿ ಕೇಂದ್ರದಲ್ಲಿ ಒಟ್ಟು ಏಳು ಮಕ್ಕಳಿದ್ದಾರೆ. ಚಾವಣಿಯ ಸಿಮೆಂಟ್ ಉದುರಲು ಆರಂಭವಾಗುತ್ತಿದ್ದಂತೆಯೇ ಮೂವರು ಬಾಲಕರು ಹೊರಗೆ ಓಡಿ ಬಂದಿದ್ದಾರೆ. ನಾಲ್ವರು ಬಾಲಕಿಯರು ಹೆದರಿ ಕೊಠಡಿಯಲ್ಲಿಯೇ ಕುಳಿತಿದ್ದರು.</p>.<p>ಈ ಘಟನೆ ನಡೆದಾಗ ಅಂಗನವಾಡಿ ಕಾರ್ಯಕರ್ತೆ ಕೇಂದ್ರದಲ್ಲಿ ಇರಲಿಲ್ಲ. ಅಂಗನವಾಡಿ ಅಕ್ಕಪಕ್ಕದ ಮನೆಯವರ ನೆರವಿನಿಂದ ಪೋಷಕರು ಮಕ್ಕಳನ್ನು ಆಸ್ಪತ್ರೆಗೆ ಕರೆದೊಯ್ದರು ಎಂದು ಸ್ಥಳೀಯರು ತಿಳಿಸಿದರು.</p>.<p>‘ಸುಮಾರು 30 ವರ್ಷ ಹಳೆಯ ಅಂಗನವಾಡಿ ಕಟ್ಟಡ ಶಿಥಿಲಗೊಂಡಿತ್ತು. ಎಂಟು ವರ್ಷದ ಹಿಂದೆ ನವೀಕರಣ ಮಾಡಲಾಗಿತ್ತು. ಕಳಪೆ ಕಾಮಗಾರಿ ಕಾರಣ ಚಾವಣಿ ತಳಪದರ ಕುಸಿದಿದೆ’ ಎಂದು ಸ್ಥಳೀಯರು ಆರೋಪಿಸಿದರು.</p>.<p><strong>ಕ್ರಮಕ್ಕೆ ಶಿಫಾರಸು:</strong> ಅಂಗನವಾಡಿ ಕೇಂದ್ರವನ್ನು ಬಾಡಿಗೆ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ ವಿರುದ್ಧ ಕ್ರಮ ಕೈಗೊಳ್ಳಲು ಮೇಲಧಿಕಾರಿಗೆ ವರದಿ ನೀಡಲಾಗಿದೆ ಎಂದು ಬಂಗಾರಪೇಟೆ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ) ಮುನಿರಾಜು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>