<p><strong>ಬೆಂಗಳೂರು:</strong> ಬಿಜೆಪಿಯ ಅಧಿಕೃತ ಸಾಮಾಜಿಕ ಖಾತೆಯಲ್ಲಿ ಪ್ರಸಾರ ಮಾಡಲಾಗಿದ್ದ ಅನಿಮೇಟೆಡ್ ವಿಡಿಯೊವೊಂದನ್ನು ಆಕ್ಷೇಪಿಸಿ ಕೇಂದ್ರ ಸಚಿವ ಜೆ.ಪಿ.ನಡ್ಡಾ ಮತ್ತು ಬಿಜೆಪಿ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.</p>.<p>ಈ ಸಂಬಂಧ ಜೆ.ಪಿ. ನಡ್ಡಾ ಮತ್ತು ಅಮಿತ್ ಮಾಳವಿಯಾ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಪುರಸ್ಕರಿಸಿದ್ದಾರೆ.</p>.<p>ನಡ್ಡಾ ಮತ್ತು ಮಾಳವೀಯ ಪರ ಹೈಕೋರ್ಟ್ ವಕೀಲ ಬಿ.ವಿನೋದ್ ಕುಮಾರ್ ಮತ್ತು ಪ್ರಾಸಿಕ್ಯೂಷನ್ ಪರ ರಾಜ್ಯದ ಹೆಚ್ಚುವರಿ ಪ್ರಾಸಿಕ್ಯೂಟರ್ ಬಿ.ಎನ್.ಜಗದೀಶ್ ವಾದ ಮಂಡಿಸಿದ್ದರು.</p>.<p><strong>ಪ್ರಕರಣವೇನು?:</strong> ‘ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯ ಇನ್ಸ್ಟಾಗ್ರಾಂ ಖಾತೆಯಲ್ಲಿ ಬಿತ್ತರಿಸಲಾಗಿದ್ದ ವಿಡಿಯೊದಲ್ಲಿ; ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮೇತರರ ಆಸ್ತಿಯನ್ನು ಕಿತ್ತು, ಮುಸ್ಲಿಂ ಸಮುದಾಯಕ್ಕೆ ನೀಡುತ್ತದೆ ಎಂಬ ಆಕ್ಷೇಪಾರ್ಹ ಸಂದೇಶ ಪ್ರಸಾರ ಮಾಡಲಾಗಿದೆ’ ಎಂದು ಆರೋಪಿಸಿ ಜೇವರ್ಗಿಯ ಪ್ರವೀಣ ಕುಮಾರ್ ಪಾಟೀಲ್ ಕಲಬುರಗಿ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.</p>.<p>ಇದರನ್ವಯ ಪೊಲೀಸರು ನಡ್ಡಾ ಮತ್ತು ಮಾಳವಿಯಾ ವಿರುದ್ಧ, ಪ್ರಜಾಪ್ರತಿನಿಧಿ ಕಾಯ್ದೆ–1951ರ ಕಲಂ 125, ಮಾಹಿತಿ ತಂತ್ರಜ್ಞಾನ ಕಾಯ್ದೆ–2000ರ ಕಲಂ 66(ಡಿ), ಭಾರತೀಯ ದಂಡ ಸಂಹಿತೆ–1860ರ ಕಲಂ 53ಎ, 504, 171ಎಫ್, 171ಜಿ, 505(2), 171ಸಿ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿಜೆಪಿಯ ಅಧಿಕೃತ ಸಾಮಾಜಿಕ ಖಾತೆಯಲ್ಲಿ ಪ್ರಸಾರ ಮಾಡಲಾಗಿದ್ದ ಅನಿಮೇಟೆಡ್ ವಿಡಿಯೊವೊಂದನ್ನು ಆಕ್ಷೇಪಿಸಿ ಕೇಂದ್ರ ಸಚಿವ ಜೆ.ಪಿ.ನಡ್ಡಾ ಮತ್ತು ಬಿಜೆಪಿ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.</p>.<p>ಈ ಸಂಬಂಧ ಜೆ.ಪಿ. ನಡ್ಡಾ ಮತ್ತು ಅಮಿತ್ ಮಾಳವಿಯಾ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಪುರಸ್ಕರಿಸಿದ್ದಾರೆ.</p>.<p>ನಡ್ಡಾ ಮತ್ತು ಮಾಳವೀಯ ಪರ ಹೈಕೋರ್ಟ್ ವಕೀಲ ಬಿ.ವಿನೋದ್ ಕುಮಾರ್ ಮತ್ತು ಪ್ರಾಸಿಕ್ಯೂಷನ್ ಪರ ರಾಜ್ಯದ ಹೆಚ್ಚುವರಿ ಪ್ರಾಸಿಕ್ಯೂಟರ್ ಬಿ.ಎನ್.ಜಗದೀಶ್ ವಾದ ಮಂಡಿಸಿದ್ದರು.</p>.<p><strong>ಪ್ರಕರಣವೇನು?:</strong> ‘ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯ ಇನ್ಸ್ಟಾಗ್ರಾಂ ಖಾತೆಯಲ್ಲಿ ಬಿತ್ತರಿಸಲಾಗಿದ್ದ ವಿಡಿಯೊದಲ್ಲಿ; ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮೇತರರ ಆಸ್ತಿಯನ್ನು ಕಿತ್ತು, ಮುಸ್ಲಿಂ ಸಮುದಾಯಕ್ಕೆ ನೀಡುತ್ತದೆ ಎಂಬ ಆಕ್ಷೇಪಾರ್ಹ ಸಂದೇಶ ಪ್ರಸಾರ ಮಾಡಲಾಗಿದೆ’ ಎಂದು ಆರೋಪಿಸಿ ಜೇವರ್ಗಿಯ ಪ್ರವೀಣ ಕುಮಾರ್ ಪಾಟೀಲ್ ಕಲಬುರಗಿ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.</p>.<p>ಇದರನ್ವಯ ಪೊಲೀಸರು ನಡ್ಡಾ ಮತ್ತು ಮಾಳವಿಯಾ ವಿರುದ್ಧ, ಪ್ರಜಾಪ್ರತಿನಿಧಿ ಕಾಯ್ದೆ–1951ರ ಕಲಂ 125, ಮಾಹಿತಿ ತಂತ್ರಜ್ಞಾನ ಕಾಯ್ದೆ–2000ರ ಕಲಂ 66(ಡಿ), ಭಾರತೀಯ ದಂಡ ಸಂಹಿತೆ–1860ರ ಕಲಂ 53ಎ, 504, 171ಎಫ್, 171ಜಿ, 505(2), 171ಸಿ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>