ಕೊಪ್ಪಳ: ‘ಅಂಜನಾದ್ರಿ ಅಭಿವೃದ್ಧಿಯ ಬಗ್ಗೆ ದೊಡ್ಡಮಟ್ಟದಲ್ಲಿ ಪ್ರಚಾರ ಪಡೆದ ಹಿಂದಿನ ಬಿಜೆಪಿ ಸರ್ಕಾರ ತನ್ನ ಅಧಿಕಾರದ ಅವಧಿಯಲ್ಲಿ ನೀಡಿದ್ದು ₹ 20 ಕೋಟಿ ಮಾತ್ರ. ಆದರೆ, ಸಾರ್ವಜನಿಕವಾಗಿ ₹ 120 ಕೋಟಿ ನೀಡಿದ್ದಾಗಿ ಬಿಂಬಿಸಿಕೊಳ್ಳುತ್ತಿದೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಶಿವರಾಜ ತಂಗಡಗಿ ಹೇಳಿದರು.