<p>ಪ್ರಜಾವಾಣಿ ವಾರ್ತೆ</p>.<p><strong>ನವದೆಹಲಿ</strong>: ಕೊಪ್ಪಳದ ಅಂಜನಾದ್ರಿ ಬೆಟ್ಟದ ಆಂಜನೇಯ ದೇವಸ್ಥಾನವನ್ನು ಸ್ವಾಧೀನಪಡಿಸಿಕೊಳ್ಳುವುದರ ವಿರುದ್ಧ ವಿದ್ಯಾದಾಸ್ ಬಾಬಾಜಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ನೀಡಿದ್ದ ಮಧ್ಯಂತರ ಆದೇಶವನ್ನು ನಿಷ್ಠೆಯಿಂದ ಪಾಲಿಸುವಂತೆ ಕರ್ನಾಟಕ ಸರ್ಕಾರದ ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ.</p>.<p>ಅರ್ಜಿದಾರರ ಪರವಾಗಿ ವಕೀಲ ವಿಷ್ಣು ಶಂಕರ್ ಜೈನ್ ವಾದವನ್ನು ಆಲಿಸಿದ ನಂತರ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ದೀಪಂಕರ್ ದತ್ತ ಅವರ ಪೀಠವು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತು.</p>.<p>ಅರ್ಜಿದಾರರು ದೇವಾಲಯದ ಅರ್ಚಕರಾಗಿ ಮುಂದುವರಿಸಲು ಹಾಗೂ ಅವರಿಗೆ ಈ ಹಿಂದೆ ಒದಗಿಸಲಾದ ಎಲ್ಲ ಮೂಲಸೌಕರ್ಯಗಳೊಂದಿಗೆ ಒಂದೇ ಕೋಣೆಯಲ್ಲಿ ಉಳಿಯಲು ಪೀಠ ಅವಕಾಶ ನೀಡಿತು.</p>.<p>ಆದೇಶ ಪಾಲನೆಯಲ್ಲಿ ಯಾವುದೇ ಉಲ್ಲಂಘನೆಯಾದರೆ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಪೀಠವು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿತು. </p>.<p>ರಾಜ್ಯ ಸರ್ಕಾರದ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿಯನ್ನು ತಿರಸ್ಕರಿಸಿದ ಹೈಕೋರ್ಟ್ನ ಏಪ್ರಿಲ್ 9ರ ಆದೇಶವನ್ನು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. </p>.<p>‘ಅರ್ಜಿದಾರರು ರಾಮನಂದಿ ಸಂಪ್ರದಾಯದವರಾಗಿದ್ದು, ದೇವಾಲಯದಲ್ಲಿ ಪ್ರಧಾನ ಅರ್ಚಕರಾಗಿದ್ದರು. ಅವರ ಸಂಪ್ರದಾಯದವರು 120 ವರ್ಷಗಳಿಂದ ದೇವಸ್ಥಾನದ ಪೂಜೆ ಮಾಡುತ್ತಿದ್ದರು. ಆದರೆ, 2018 ರಲ್ಲಿ ಇದ್ದಕ್ಕಿದ್ದಂತೆ, ಕರ್ನಾಟಕ ಧಾರ್ಮಿಕ ದತ್ತಿ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿ ಈ ದೇವಾಲಯವನ್ನು ಸಂಪೂರ್ಣವಾಗಿ ಸ್ವಾಧೀನಪಡಿಸಿಕೊಳ್ಳಲಾಗಿತ್ತು’ ಎಂದು ಜೈನ್ ವಾದಿಸಿದರು. </p>.<p>‘ಅರ್ಜಿದಾರರು ಹೈಕೋರ್ಟ್ನಲ್ಲಿ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯಲ್ಲಿ ಸಲ್ಲಿಸಿರುವ ಹೇಳಿಕೆಗಳನ್ನು ನಾವು ನೋಡಿದ್ದೇವೆ. ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಬೇಕು. ಜತೆಗೆ, ಹೈಕೋರ್ಟ್ 2023ರ ಫೆಬ್ರವರಿ 14ರಂದು ನೀಡಿದ ಮಧ್ಯಂತರ ಆದೇಶವನ್ನು ನಿಷ್ಠೆಯಿಂದ ಪಾಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ’ ಎಂದು ಪೀಠ ಹೇಳಿದೆ.</p>.<p>ಕೊಪ್ಪಳ ಜಿಲ್ಲಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ 2025ರ ಮಾರ್ಚ್ 16ರಂದು ದೇವಸ್ಥಾನಕ್ಕೆ ಭೇಟಿ ನೀಡಿ ಕಾನೂನುಬಾಹಿರವಾಗಿ ಮತ್ತೊಬ್ಬರನ್ನು ಅರ್ಚಕರನ್ನಾಗಿ ನೇಮಿಸಿದರು. ಅರ್ಜಿದಾರರ ಸೇವೆಗೆ ಅಡ್ಡಿಪಡಿಸಿ ಬೆದರಿಕೆ ಹಾಕಿದರು’ ಎಂದು ಅರ್ಜಿಯಲ್ಲಿ ದೂರಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p><strong>ನವದೆಹಲಿ</strong>: ಕೊಪ್ಪಳದ ಅಂಜನಾದ್ರಿ ಬೆಟ್ಟದ ಆಂಜನೇಯ ದೇವಸ್ಥಾನವನ್ನು ಸ್ವಾಧೀನಪಡಿಸಿಕೊಳ್ಳುವುದರ ವಿರುದ್ಧ ವಿದ್ಯಾದಾಸ್ ಬಾಬಾಜಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ನೀಡಿದ್ದ ಮಧ್ಯಂತರ ಆದೇಶವನ್ನು ನಿಷ್ಠೆಯಿಂದ ಪಾಲಿಸುವಂತೆ ಕರ್ನಾಟಕ ಸರ್ಕಾರದ ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ.</p>.<p>ಅರ್ಜಿದಾರರ ಪರವಾಗಿ ವಕೀಲ ವಿಷ್ಣು ಶಂಕರ್ ಜೈನ್ ವಾದವನ್ನು ಆಲಿಸಿದ ನಂತರ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ದೀಪಂಕರ್ ದತ್ತ ಅವರ ಪೀಠವು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತು.</p>.<p>ಅರ್ಜಿದಾರರು ದೇವಾಲಯದ ಅರ್ಚಕರಾಗಿ ಮುಂದುವರಿಸಲು ಹಾಗೂ ಅವರಿಗೆ ಈ ಹಿಂದೆ ಒದಗಿಸಲಾದ ಎಲ್ಲ ಮೂಲಸೌಕರ್ಯಗಳೊಂದಿಗೆ ಒಂದೇ ಕೋಣೆಯಲ್ಲಿ ಉಳಿಯಲು ಪೀಠ ಅವಕಾಶ ನೀಡಿತು.</p>.<p>ಆದೇಶ ಪಾಲನೆಯಲ್ಲಿ ಯಾವುದೇ ಉಲ್ಲಂಘನೆಯಾದರೆ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಪೀಠವು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿತು. </p>.<p>ರಾಜ್ಯ ಸರ್ಕಾರದ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿಯನ್ನು ತಿರಸ್ಕರಿಸಿದ ಹೈಕೋರ್ಟ್ನ ಏಪ್ರಿಲ್ 9ರ ಆದೇಶವನ್ನು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. </p>.<p>‘ಅರ್ಜಿದಾರರು ರಾಮನಂದಿ ಸಂಪ್ರದಾಯದವರಾಗಿದ್ದು, ದೇವಾಲಯದಲ್ಲಿ ಪ್ರಧಾನ ಅರ್ಚಕರಾಗಿದ್ದರು. ಅವರ ಸಂಪ್ರದಾಯದವರು 120 ವರ್ಷಗಳಿಂದ ದೇವಸ್ಥಾನದ ಪೂಜೆ ಮಾಡುತ್ತಿದ್ದರು. ಆದರೆ, 2018 ರಲ್ಲಿ ಇದ್ದಕ್ಕಿದ್ದಂತೆ, ಕರ್ನಾಟಕ ಧಾರ್ಮಿಕ ದತ್ತಿ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿ ಈ ದೇವಾಲಯವನ್ನು ಸಂಪೂರ್ಣವಾಗಿ ಸ್ವಾಧೀನಪಡಿಸಿಕೊಳ್ಳಲಾಗಿತ್ತು’ ಎಂದು ಜೈನ್ ವಾದಿಸಿದರು. </p>.<p>‘ಅರ್ಜಿದಾರರು ಹೈಕೋರ್ಟ್ನಲ್ಲಿ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯಲ್ಲಿ ಸಲ್ಲಿಸಿರುವ ಹೇಳಿಕೆಗಳನ್ನು ನಾವು ನೋಡಿದ್ದೇವೆ. ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಬೇಕು. ಜತೆಗೆ, ಹೈಕೋರ್ಟ್ 2023ರ ಫೆಬ್ರವರಿ 14ರಂದು ನೀಡಿದ ಮಧ್ಯಂತರ ಆದೇಶವನ್ನು ನಿಷ್ಠೆಯಿಂದ ಪಾಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ’ ಎಂದು ಪೀಠ ಹೇಳಿದೆ.</p>.<p>ಕೊಪ್ಪಳ ಜಿಲ್ಲಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ 2025ರ ಮಾರ್ಚ್ 16ರಂದು ದೇವಸ್ಥಾನಕ್ಕೆ ಭೇಟಿ ನೀಡಿ ಕಾನೂನುಬಾಹಿರವಾಗಿ ಮತ್ತೊಬ್ಬರನ್ನು ಅರ್ಚಕರನ್ನಾಗಿ ನೇಮಿಸಿದರು. ಅರ್ಜಿದಾರರ ಸೇವೆಗೆ ಅಡ್ಡಿಪಡಿಸಿ ಬೆದರಿಕೆ ಹಾಕಿದರು’ ಎಂದು ಅರ್ಜಿಯಲ್ಲಿ ದೂರಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>