<p><strong>ಬೆಂಗಳೂರು</strong>: ರಾಜ್ಯದಾದ್ಯಂತ ಕಿರಿಯ ಆರೋಗ್ಯ ಸಹಾಯಕಿಯರ (ಎಎನ್ಎಂ) ತರಬೇತಿ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಾಂಶುಪಾಲರು ಹಾಗೂ ಬೋಧಕ ಸಿಬ್ಬಂದಿಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕರ್ತವ್ಯದಿಂದ ಬಿಡುಗಡೆಗೊಳಿಸುವಂತೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.</p>.<p>ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಚಿತ್ರದುರ್ಗ ತಾಲ್ಲೂಕು ದೊಡ್ಡಸಿದ್ದವ್ವನಹಳ್ಳಿ ದಂಡಿನ ಕುರುಬರಹಟ್ಟಿಯ ಎಸ್.ಪಿ.ಮೇಘನಾ ಹಾಗೂ ಇತರರು ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ಅವರಿದ್ದ ಏಸಕದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ. ಅಂತೆಯೇ ಎಎನ್ಎಂ ತರಬೇತಿ ಕೇಂದ್ರಗಳನ್ನು 2025–26ನೇ ಸಾಲಿನಿಂದಲೇ ಮುಚ್ಚಲು ನಿರ್ಧರಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ್ದ ಆದೇಶಕ್ಕೂ ಮಧ್ಯಂತರ ತಡೆ ನೀಡಲಾಗಿದೆ.</p>.<p>ಅರ್ಜಿದಾರರ ಪರ ಹೈಕೋರ್ಟ್ ವಕೀಲ ಜೆ.ಡಿ.ಕಾಶಿನಾಥ್, ‘ರಾಜ್ಯ ಸರ್ಕಾರ 2025ರ ಜೂನ್ 12ರಂದು ಹೊರಡಿಸಿರುವ ಆದೇಶ ಕಾನೂನು ಬಾಹಿರ ಮತ್ತು ಏಕಪಕ್ಷೀಯವಾಗಿದೆ’ ಎಂಬ ವಿಸ್ತೃತ ವಾದ ಮನ್ನಿಸಿದ ನ್ಯಾಯಪೀಠ; ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ನಿರ್ದೇಶಕ ಸೇರಿದಂತೆ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶಿಸಿದೆ.</p>.<p>ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ‘ಪ್ರಸ್ತುತ 417 ವಿದ್ಯಾರ್ಥಿಗಳು ಕೋರ್ಸ್ಗೆ ದಾಖಲಾಗಿದ್ದಾರೆ. ಇವರಲ್ಲಿ 117 ವಿದ್ಯಾರ್ಥಿಗಳು ತಮಗೆ ಕೋರ್ಸ್ನಲ್ಲಿ ಮುಂದುವರಿಯಲು ಇಷ್ಟವಿರಲಿಲ್ಲ ಎಂದು ತಿಳಿಸಿದ್ದಾರೆ. ಉಳಿದಂತೆ 115 ವಿದ್ಯಾರ್ಥಿಗಳು ಅದೇ ಕೋರ್ಸ್ನಲ್ಲಿಯೇ ಮುಂದುವರಿಯಲು ಇಚ್ಛಿಸಿದ್ದಾರೆ’ ಎಂದು ನ್ಯಾಯಪೀಠಕ್ಕೆ ವಿವರಿಸಿದರು.</p>.<p> <strong>ಸರ್ಕಾರದ ಆದೇಶವೇನು?</strong> </p><p>ಭವಿಷ್ಯದಲ್ಲಿ ಎಎನ್ಎಂ (ಕಿರಿಯ ಮಹಿಳಾ ಆರೋಗ್ಯ ಸಹಾಯಕಿ) ಅಥವಾ ಪಿಎಚ್ಸಿಒ (ಪ್ರಾಥಮಿಕ ಆರೋಗ್ಯ ಕೇಂದ್ರ ಅಧಿಕಾರಿ) ಹುದ್ದೆಗಳಿಗೆ ಸಂಬಂಧಿಸಿದಂತೆ ವೃಂದ ಮತ್ತು ನೇಮಕಾತಿ ನಿಯಮಗಳು ಬದಲಾವಣೆಗೆ ಒಳಪಡುವ ಕಾರಣ ಪ್ರಸ್ತುತ ವ್ಯಾಸಂಗದಲ್ಲಿರುವ ಎಎನ್ಎಂ ವಿದ್ಯಾರ್ಥಿಗಳಿಗೆ ಈ ಬಗ್ಗೆ ತಿಳಿವಳಿಕೆ ಮೂಡಿಸಿ ಸರ್ಕಾರಿ ಬಿಎಸ್ಸಿ ನರ್ಸಿಂಗ್ ಅಥವಾ ಜಿಎನ್ಎಂ ಕಾಲೇಜುಗಳಲ್ಲಿನ ಕೋರ್ಸ್ಗೆ ಬದಲಾವಣೆ ಮಾಡಿಕೊಳ್ಳುವಂತೆ ತಿಳಿಸಲಾಗಿದೆ ಹಾಗೂ ಸಾಧ್ಯವಾದಷ್ಟು ಅಭ್ಯರ್ಥಿಗಳನ್ನು ಬಿಎಸ್ಸಿ ನರ್ಸಿಂಗ್ ಅಥವಾ ಜಿಎನ್ಎಂ ತರಬೇತಿಗಳಿಗೆ ಪ್ರವೇಶ ಪಡೆಯಲು ಅನುಕೂಲ ಮಾಡಿಕೊಡಲು ಈ ಆದೇಶ ಹೊರಡಿಸಲಾಗಿದೆ. ‘ಕಡಿಮೆ ಸಂಖ್ಯೆಯ ಅಭ್ಯರ್ಥಿಗಳು ಬಾಕಿ ಉಳಿದಿರುವ ಎಎನ್ಎಂ ತರಬೇತಿ ಕೇಂದ್ರಗಳನ್ನು ಮುಚ್ಚಿ ಈ ಕೇಂದ್ರದಲ್ಲಿನ ಅಭ್ಯರ್ಥಿಗಳನ್ನು ಹತ್ತಿರದ ತರಬೇತಿ ಕೇಂದ್ರಗಳಿಗೆ ಸ್ಥಳಾಂತರಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಸ್ಥಳಾಂತರಗೊಳಿಸಿದ ನಂತರ ವಿದ್ಯಾರ್ಥಿಗಳು ಇಲ್ಲದಿರುವ ಎಎನ್ಎಂ ತರಬೇತಿ ಕೇಂದ್ರಗಳನ್ನು ಮುಚ್ಚಲಾಗುವುದು ಮತ್ತು ಈ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ಮಾತೃ ಇಲಾಖೆಗೆ ಹಿಂಪಡೆದುಕೊಳ್ಳಲಾಗುವುದು. ಕೌನ್ಸೆಲಿಂಗ್ ಮುಖಾಂತರ ಇಲಾಖೆಯಲ್ಲಿ ಲಭ್ಯವಿರುವ ನಿರ್ಣಾಯಕ ಖಾಲಿ ಹುದ್ದೆಗೆ ಅವರಿಗೆ ಸ್ಥಳ ನಿಯುಕ್ತಿಗೊಳಿಸಲಾಗುವುದು’ ಎಂದು ಆರೋಗ್ಯ ಇಲಾಖೆ 2025ರ ಏಪ್ರಿಲ್ 28ರಂದು ಮತ್ತು ಮೇ 20ರಂದು ಆದೇಶ ಹೊರಡಿಸಿತ್ತು. ಈ ಆದೇಶಗಳ ನಂತರ 2025ರ ಜೂನ್ 12ರಂದು ಮತ್ತೊಂದು ಜ್ಞಾಪನಾ ಪತ್ರ ಹೊರಡಿಸಿದ್ದ ಆರೋಗ್ಯ ಇಲಾಖೆಯ ನಿರ್ದೇಶಕರು ಎಎನ್ಎಂ ತರಬೇತಿ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಾಂಶುಪಾಲರು ಹಾಗೂ ಬೋಧಕ ಸಿಬ್ಬಂದಿಯನ್ನು ತಕ್ಷಣವೇ ಜಾರಿಗೆ ಬರುವಂತೆ ಕರ್ತವ್ಯದಿಂದ ಬಿಡುಗಡೆಗೊಳಿಸಲು ಆದೇಶಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯದಾದ್ಯಂತ ಕಿರಿಯ ಆರೋಗ್ಯ ಸಹಾಯಕಿಯರ (ಎಎನ್ಎಂ) ತರಬೇತಿ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಾಂಶುಪಾಲರು ಹಾಗೂ ಬೋಧಕ ಸಿಬ್ಬಂದಿಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕರ್ತವ್ಯದಿಂದ ಬಿಡುಗಡೆಗೊಳಿಸುವಂತೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.</p>.<p>ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಚಿತ್ರದುರ್ಗ ತಾಲ್ಲೂಕು ದೊಡ್ಡಸಿದ್ದವ್ವನಹಳ್ಳಿ ದಂಡಿನ ಕುರುಬರಹಟ್ಟಿಯ ಎಸ್.ಪಿ.ಮೇಘನಾ ಹಾಗೂ ಇತರರು ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ಅವರಿದ್ದ ಏಸಕದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ. ಅಂತೆಯೇ ಎಎನ್ಎಂ ತರಬೇತಿ ಕೇಂದ್ರಗಳನ್ನು 2025–26ನೇ ಸಾಲಿನಿಂದಲೇ ಮುಚ್ಚಲು ನಿರ್ಧರಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ್ದ ಆದೇಶಕ್ಕೂ ಮಧ್ಯಂತರ ತಡೆ ನೀಡಲಾಗಿದೆ.</p>.<p>ಅರ್ಜಿದಾರರ ಪರ ಹೈಕೋರ್ಟ್ ವಕೀಲ ಜೆ.ಡಿ.ಕಾಶಿನಾಥ್, ‘ರಾಜ್ಯ ಸರ್ಕಾರ 2025ರ ಜೂನ್ 12ರಂದು ಹೊರಡಿಸಿರುವ ಆದೇಶ ಕಾನೂನು ಬಾಹಿರ ಮತ್ತು ಏಕಪಕ್ಷೀಯವಾಗಿದೆ’ ಎಂಬ ವಿಸ್ತೃತ ವಾದ ಮನ್ನಿಸಿದ ನ್ಯಾಯಪೀಠ; ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ನಿರ್ದೇಶಕ ಸೇರಿದಂತೆ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶಿಸಿದೆ.</p>.<p>ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ‘ಪ್ರಸ್ತುತ 417 ವಿದ್ಯಾರ್ಥಿಗಳು ಕೋರ್ಸ್ಗೆ ದಾಖಲಾಗಿದ್ದಾರೆ. ಇವರಲ್ಲಿ 117 ವಿದ್ಯಾರ್ಥಿಗಳು ತಮಗೆ ಕೋರ್ಸ್ನಲ್ಲಿ ಮುಂದುವರಿಯಲು ಇಷ್ಟವಿರಲಿಲ್ಲ ಎಂದು ತಿಳಿಸಿದ್ದಾರೆ. ಉಳಿದಂತೆ 115 ವಿದ್ಯಾರ್ಥಿಗಳು ಅದೇ ಕೋರ್ಸ್ನಲ್ಲಿಯೇ ಮುಂದುವರಿಯಲು ಇಚ್ಛಿಸಿದ್ದಾರೆ’ ಎಂದು ನ್ಯಾಯಪೀಠಕ್ಕೆ ವಿವರಿಸಿದರು.</p>.<p> <strong>ಸರ್ಕಾರದ ಆದೇಶವೇನು?</strong> </p><p>ಭವಿಷ್ಯದಲ್ಲಿ ಎಎನ್ಎಂ (ಕಿರಿಯ ಮಹಿಳಾ ಆರೋಗ್ಯ ಸಹಾಯಕಿ) ಅಥವಾ ಪಿಎಚ್ಸಿಒ (ಪ್ರಾಥಮಿಕ ಆರೋಗ್ಯ ಕೇಂದ್ರ ಅಧಿಕಾರಿ) ಹುದ್ದೆಗಳಿಗೆ ಸಂಬಂಧಿಸಿದಂತೆ ವೃಂದ ಮತ್ತು ನೇಮಕಾತಿ ನಿಯಮಗಳು ಬದಲಾವಣೆಗೆ ಒಳಪಡುವ ಕಾರಣ ಪ್ರಸ್ತುತ ವ್ಯಾಸಂಗದಲ್ಲಿರುವ ಎಎನ್ಎಂ ವಿದ್ಯಾರ್ಥಿಗಳಿಗೆ ಈ ಬಗ್ಗೆ ತಿಳಿವಳಿಕೆ ಮೂಡಿಸಿ ಸರ್ಕಾರಿ ಬಿಎಸ್ಸಿ ನರ್ಸಿಂಗ್ ಅಥವಾ ಜಿಎನ್ಎಂ ಕಾಲೇಜುಗಳಲ್ಲಿನ ಕೋರ್ಸ್ಗೆ ಬದಲಾವಣೆ ಮಾಡಿಕೊಳ್ಳುವಂತೆ ತಿಳಿಸಲಾಗಿದೆ ಹಾಗೂ ಸಾಧ್ಯವಾದಷ್ಟು ಅಭ್ಯರ್ಥಿಗಳನ್ನು ಬಿಎಸ್ಸಿ ನರ್ಸಿಂಗ್ ಅಥವಾ ಜಿಎನ್ಎಂ ತರಬೇತಿಗಳಿಗೆ ಪ್ರವೇಶ ಪಡೆಯಲು ಅನುಕೂಲ ಮಾಡಿಕೊಡಲು ಈ ಆದೇಶ ಹೊರಡಿಸಲಾಗಿದೆ. ‘ಕಡಿಮೆ ಸಂಖ್ಯೆಯ ಅಭ್ಯರ್ಥಿಗಳು ಬಾಕಿ ಉಳಿದಿರುವ ಎಎನ್ಎಂ ತರಬೇತಿ ಕೇಂದ್ರಗಳನ್ನು ಮುಚ್ಚಿ ಈ ಕೇಂದ್ರದಲ್ಲಿನ ಅಭ್ಯರ್ಥಿಗಳನ್ನು ಹತ್ತಿರದ ತರಬೇತಿ ಕೇಂದ್ರಗಳಿಗೆ ಸ್ಥಳಾಂತರಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಸ್ಥಳಾಂತರಗೊಳಿಸಿದ ನಂತರ ವಿದ್ಯಾರ್ಥಿಗಳು ಇಲ್ಲದಿರುವ ಎಎನ್ಎಂ ತರಬೇತಿ ಕೇಂದ್ರಗಳನ್ನು ಮುಚ್ಚಲಾಗುವುದು ಮತ್ತು ಈ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ಮಾತೃ ಇಲಾಖೆಗೆ ಹಿಂಪಡೆದುಕೊಳ್ಳಲಾಗುವುದು. ಕೌನ್ಸೆಲಿಂಗ್ ಮುಖಾಂತರ ಇಲಾಖೆಯಲ್ಲಿ ಲಭ್ಯವಿರುವ ನಿರ್ಣಾಯಕ ಖಾಲಿ ಹುದ್ದೆಗೆ ಅವರಿಗೆ ಸ್ಥಳ ನಿಯುಕ್ತಿಗೊಳಿಸಲಾಗುವುದು’ ಎಂದು ಆರೋಗ್ಯ ಇಲಾಖೆ 2025ರ ಏಪ್ರಿಲ್ 28ರಂದು ಮತ್ತು ಮೇ 20ರಂದು ಆದೇಶ ಹೊರಡಿಸಿತ್ತು. ಈ ಆದೇಶಗಳ ನಂತರ 2025ರ ಜೂನ್ 12ರಂದು ಮತ್ತೊಂದು ಜ್ಞಾಪನಾ ಪತ್ರ ಹೊರಡಿಸಿದ್ದ ಆರೋಗ್ಯ ಇಲಾಖೆಯ ನಿರ್ದೇಶಕರು ಎಎನ್ಎಂ ತರಬೇತಿ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಾಂಶುಪಾಲರು ಹಾಗೂ ಬೋಧಕ ಸಿಬ್ಬಂದಿಯನ್ನು ತಕ್ಷಣವೇ ಜಾರಿಗೆ ಬರುವಂತೆ ಕರ್ತವ್ಯದಿಂದ ಬಿಡುಗಡೆಗೊಳಿಸಲು ಆದೇಶಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>