<p><strong>ಬೆಂಗಳೂರು:</strong> ‘ಸಾಲ ಮನ್ನಾ ಯೋಜನೆಯಿಂದ ರೈತರ ಸಮಸ್ಯೆ ತಾತ್ಕಾಲಿಕ ಪರಿಹಾರ ಸಿಗುತ್ತದೆ ಅಷ್ಟೇ. ಅವರಿಗೆ ನೀರು, ವಿದ್ಯುತ್ ಪೂರೈಸಿ ಮಾರುಕಟ್ಟೆ ಒದಗಿಸಿ ಸಮಗ್ರ ಅಭಿವೃದ್ಧಿಗೆ ಕಾರ್ಯಕ್ರಮ ರೂಪಿಸಬೇಕು’ ಎಂದು ಕಾಂಗ್ರೆಸ್ ಶಾಸಕ ಡಾ.ಕೆ.ಸುಧಾಕರ್ ಸಲಹೆ ನೀಡಿದರು.</p>.<p>ವಿಧಾನಸಭೆಯಲ್ಲಿ ಮಂಗಳವಾರ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿ, ‘ಸಹಕಾರಿ ಬ್ಯಾಂಕ್ಗಳಲ್ಲಿ ರೈತರು ಹೊಂದಿದ್ದ ₹8,156 ಕೋಟಿಯನ್ನು ಕಾಂಗ್ರೆಸ್ ಸರ್ಕಾರ ಮನ್ನಾ ಮಾಡಿತ್ತು. ಕುಮಾರಸ್ವಾಮಿ ಅವರು ₹34 ಸಾವಿರ ಕೋಟಿ ಸುಸ್ತಿ ಸಾಲ ಮನ್ನಾ ಯೋಜನೆ ಪ್ರಕಟಿಸಿದ್ದಾರೆ. ಸಹಕಾರಿ ಬ್ಯಾಂಕ್ಗಳಲ್ಲಿ ಸುಸ್ತಿದಾರರು ಬಹಳ ಕಡಿಮೆ. 20 ಸಾವಿರ ರೈತರ ₹145 ಕೋಟಿ ಸಾಲ ಮನ್ನಾ ಆಗಲಿದೆ. ಈ ಬ್ಯಾಂಕ್ಗಳಲ್ಲಿ 23 ಲಕ್ಷ ರೈತರ ₹13,054 ಕೋಟಿ ಸಾಲ ಇದೆ. ಅದನ್ನೂ ಮನ್ನಾ ಮಾಡಬೇಕು’ ಎಂದು ಆಗ್ರಹಿಸಿದರು.</p>.<p>‘ಅನ್ನ ಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 7 ಕೆ.ಜಿ. ಅಕ್ಕಿ ನೀಡಲಾಗುತ್ತಿತ್ತು. ಅದನ್ನು 5 ಕೆ.ಜಿ.ಗೆ ಇಳಿಸಿರುವುದು ಸರಿಯಲ್ಲ. ಇದರಿಂದ ಬೊಕ್ಕಸಕ್ಕೆ ₹500 ಕೋಟಿ ಉಳಿತಾಯ ಆಗಬಹುದು. ಇದೇನು ದೊಡ್ಡ ಹೊರೆ ಅಲ್ಲ’ ಎಂದರು.</p>.<p>‘ಕೆ.ಸಿ. ವ್ಯಾಲಿ ಹಾಗೂ ಎಚ್.ಎನ್. ವ್ಯಾಲಿ ಮೂಲಕ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ಸಂಸ್ಕರಿಸಿದ ನೀರು ಪೂರೈಸಲಾಗುತ್ತಿದೆ. ಸದ್ಯ ಎರಡು ಹಂತಗಳಲ್ಲಿ ಸಂಸ್ಕರಿಸಿ ನೀರು ಬಿಡಲಾಗುತ್ತಿದೆ. ಇದರ ಬಗ್ಗೆ ವಿಜ್ಞಾನಿಗಳು ಟೀಕೆ ಮಾಡಿದ್ದಾರೆ. ಮೂರು ಹಂತಗಳಲ್ಲಿ ಸಂಸ್ಕರಿಸಿ ಪೂರೈಸಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಸಾಲ ಮನ್ನಾ ಯೋಜನೆಯಿಂದ ರೈತರ ಸಮಸ್ಯೆ ತಾತ್ಕಾಲಿಕ ಪರಿಹಾರ ಸಿಗುತ್ತದೆ ಅಷ್ಟೇ. ಅವರಿಗೆ ನೀರು, ವಿದ್ಯುತ್ ಪೂರೈಸಿ ಮಾರುಕಟ್ಟೆ ಒದಗಿಸಿ ಸಮಗ್ರ ಅಭಿವೃದ್ಧಿಗೆ ಕಾರ್ಯಕ್ರಮ ರೂಪಿಸಬೇಕು’ ಎಂದು ಕಾಂಗ್ರೆಸ್ ಶಾಸಕ ಡಾ.ಕೆ.ಸುಧಾಕರ್ ಸಲಹೆ ನೀಡಿದರು.</p>.<p>ವಿಧಾನಸಭೆಯಲ್ಲಿ ಮಂಗಳವಾರ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿ, ‘ಸಹಕಾರಿ ಬ್ಯಾಂಕ್ಗಳಲ್ಲಿ ರೈತರು ಹೊಂದಿದ್ದ ₹8,156 ಕೋಟಿಯನ್ನು ಕಾಂಗ್ರೆಸ್ ಸರ್ಕಾರ ಮನ್ನಾ ಮಾಡಿತ್ತು. ಕುಮಾರಸ್ವಾಮಿ ಅವರು ₹34 ಸಾವಿರ ಕೋಟಿ ಸುಸ್ತಿ ಸಾಲ ಮನ್ನಾ ಯೋಜನೆ ಪ್ರಕಟಿಸಿದ್ದಾರೆ. ಸಹಕಾರಿ ಬ್ಯಾಂಕ್ಗಳಲ್ಲಿ ಸುಸ್ತಿದಾರರು ಬಹಳ ಕಡಿಮೆ. 20 ಸಾವಿರ ರೈತರ ₹145 ಕೋಟಿ ಸಾಲ ಮನ್ನಾ ಆಗಲಿದೆ. ಈ ಬ್ಯಾಂಕ್ಗಳಲ್ಲಿ 23 ಲಕ್ಷ ರೈತರ ₹13,054 ಕೋಟಿ ಸಾಲ ಇದೆ. ಅದನ್ನೂ ಮನ್ನಾ ಮಾಡಬೇಕು’ ಎಂದು ಆಗ್ರಹಿಸಿದರು.</p>.<p>‘ಅನ್ನ ಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 7 ಕೆ.ಜಿ. ಅಕ್ಕಿ ನೀಡಲಾಗುತ್ತಿತ್ತು. ಅದನ್ನು 5 ಕೆ.ಜಿ.ಗೆ ಇಳಿಸಿರುವುದು ಸರಿಯಲ್ಲ. ಇದರಿಂದ ಬೊಕ್ಕಸಕ್ಕೆ ₹500 ಕೋಟಿ ಉಳಿತಾಯ ಆಗಬಹುದು. ಇದೇನು ದೊಡ್ಡ ಹೊರೆ ಅಲ್ಲ’ ಎಂದರು.</p>.<p>‘ಕೆ.ಸಿ. ವ್ಯಾಲಿ ಹಾಗೂ ಎಚ್.ಎನ್. ವ್ಯಾಲಿ ಮೂಲಕ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ಸಂಸ್ಕರಿಸಿದ ನೀರು ಪೂರೈಸಲಾಗುತ್ತಿದೆ. ಸದ್ಯ ಎರಡು ಹಂತಗಳಲ್ಲಿ ಸಂಸ್ಕರಿಸಿ ನೀರು ಬಿಡಲಾಗುತ್ತಿದೆ. ಇದರ ಬಗ್ಗೆ ವಿಜ್ಞಾನಿಗಳು ಟೀಕೆ ಮಾಡಿದ್ದಾರೆ. ಮೂರು ಹಂತಗಳಲ್ಲಿ ಸಂಸ್ಕರಿಸಿ ಪೂರೈಸಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>