<p><strong>ಬೆಂಗಳೂರು:</strong> 'ಮೀಸಲಾತಿ ಬೇಡಿಕೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿ ರಚಿಸುವ ರಾಜ್ಯ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಆದರೆ, ಈ ಸಮಿತಿಯನ್ನು ರಚಿಸುವ ದಿನಾಂಕ ಈಗಲೇ ಘೋಷಿಸಬೇಕು. ಎಷ್ಟು ದಿನದಲ್ಲಿ ಸಮಿತಿಯು ವರದಿ ನೀಡಲಿದೆ ಎಂಬುದನ್ನೂ ಸ್ಪಷ್ಟಪಡಿಸಬೇಕು' ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ದಿನಾಂಕ ಘೋಷಿಸಿದ ನಂತರವೇ ಚರ್ಚೆಗೆ ಬರುತ್ತೇನೆ. ಮಾತುಕತೆಗೆ ನಾನು ವಿಧಾನಸೌಧ ಅಥವಾ ಕೃಷ್ಣಾಗೆ ತೆರಳುವುದಿಲ್ಲ. ಸರ್ಕಾರದ ಪ್ರತಿನಿಧಿಯೇ ಧರಣಿ ಸ್ಥಳಕ್ಕೆ ಬರಬೇಕು' ಎಂದರು.</p>.<p>ಇದನ್ನೂ ಓದಿ..<a href="https://www.prajavani.net/karnataka-news/will-return-with-reservation-order-basava-jaya-mruthyunjaya-swamiji-panchamasali-807550.html" target="_blank"><strong>ಮೀಸಲಾತಿ ದೊರಕದೇ ಪೀಠಕ್ಕೆ ಮರಳುವುದಿಲ್ಲ: ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಘೋಷಣೆ</strong></a></p>.<p>'ಬಸನಗೌಡ ಪಾಟೀಲ ಯತ್ನಾಳ, ವಿಜಯಾನಂದ ಕಾಶಪ್ಪನವರ ಬಗ್ಗೆ ಸಚಿವರು ಈಗ ಮಾತನಾಡುತ್ತಿದ್ದಾರೆ. ಪ್ರತಿಭಟನೆ, ಪಾದಯಾತ್ರೆ ನಡೆಸಿ ಹಲವು ಬಾರಿ ಗಡುವು ನೀಡಿದರೂ ಸರ್ಕಾರ ಸ್ಪಂದಿಸಲಿಲ್ಲ. ಇಂತಹ ಸಂದರ್ಭದಲ್ಲಿ ಈ ನಾಯಕರು ಸಮುದಾಯಕ್ಕೆ ನ್ಯಾಯ ಒದಗಿಸಲು ಹೋರಾಡುತ್ತಿದ್ದಾರೆ' ಎಂದರು.</p>.<p>'ನನ್ನನ್ನು ಯಾರೂ ದಾರಿ ತಪ್ಪಿಸಲು ಸಾಧ್ಯವಿಲ್ಲ. ನಾನು ಚನ್ನಮ್ಮ, ಬಸವ ಮಾರ್ಗದಲ್ಲಿ ನಡೆಯುತ್ತಿದ್ದೇನೆ. ಅದೇ ಮಾರ್ಗದಲ್ಲಿ ಎಲ್ಲರನ್ನೂ ಕರೆದೊಯ್ಯುತ್ತಿದ್ದೇನೆ' ಎಂದರು.</p>.<p>'ನಾನು ಜನಪ್ರತಿನಿಧಿಗಳ ಮಾತು ಕೇಳುವ ಸ್ವಾಮೀಜಿಯಲ್ಲ.ಜನರ ಮಾತು ಕೇಳುವ ಸ್ವಾಮೀಜಿ. ಹೋರಾಟದ ಬಗ್ಗೆ ಜನರು ತಪ್ಪು ತಿಳಿದುಕೊಂಡರೆ ಅದನ್ನು ಸರಿ ಪಡಿಸಲು ಸಾಧ್ಯವಿಲ್ಲ. ಸಮುದಾಯದ ಜನರ ಬೇಡಿಕೆಯಂತೆಯೇ ಹೋರಾಟ ನಡೆಸುತ್ತಿದ್ದೇನೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> 'ಮೀಸಲಾತಿ ಬೇಡಿಕೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿ ರಚಿಸುವ ರಾಜ್ಯ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಆದರೆ, ಈ ಸಮಿತಿಯನ್ನು ರಚಿಸುವ ದಿನಾಂಕ ಈಗಲೇ ಘೋಷಿಸಬೇಕು. ಎಷ್ಟು ದಿನದಲ್ಲಿ ಸಮಿತಿಯು ವರದಿ ನೀಡಲಿದೆ ಎಂಬುದನ್ನೂ ಸ್ಪಷ್ಟಪಡಿಸಬೇಕು' ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ದಿನಾಂಕ ಘೋಷಿಸಿದ ನಂತರವೇ ಚರ್ಚೆಗೆ ಬರುತ್ತೇನೆ. ಮಾತುಕತೆಗೆ ನಾನು ವಿಧಾನಸೌಧ ಅಥವಾ ಕೃಷ್ಣಾಗೆ ತೆರಳುವುದಿಲ್ಲ. ಸರ್ಕಾರದ ಪ್ರತಿನಿಧಿಯೇ ಧರಣಿ ಸ್ಥಳಕ್ಕೆ ಬರಬೇಕು' ಎಂದರು.</p>.<p>ಇದನ್ನೂ ಓದಿ..<a href="https://www.prajavani.net/karnataka-news/will-return-with-reservation-order-basava-jaya-mruthyunjaya-swamiji-panchamasali-807550.html" target="_blank"><strong>ಮೀಸಲಾತಿ ದೊರಕದೇ ಪೀಠಕ್ಕೆ ಮರಳುವುದಿಲ್ಲ: ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಘೋಷಣೆ</strong></a></p>.<p>'ಬಸನಗೌಡ ಪಾಟೀಲ ಯತ್ನಾಳ, ವಿಜಯಾನಂದ ಕಾಶಪ್ಪನವರ ಬಗ್ಗೆ ಸಚಿವರು ಈಗ ಮಾತನಾಡುತ್ತಿದ್ದಾರೆ. ಪ್ರತಿಭಟನೆ, ಪಾದಯಾತ್ರೆ ನಡೆಸಿ ಹಲವು ಬಾರಿ ಗಡುವು ನೀಡಿದರೂ ಸರ್ಕಾರ ಸ್ಪಂದಿಸಲಿಲ್ಲ. ಇಂತಹ ಸಂದರ್ಭದಲ್ಲಿ ಈ ನಾಯಕರು ಸಮುದಾಯಕ್ಕೆ ನ್ಯಾಯ ಒದಗಿಸಲು ಹೋರಾಡುತ್ತಿದ್ದಾರೆ' ಎಂದರು.</p>.<p>'ನನ್ನನ್ನು ಯಾರೂ ದಾರಿ ತಪ್ಪಿಸಲು ಸಾಧ್ಯವಿಲ್ಲ. ನಾನು ಚನ್ನಮ್ಮ, ಬಸವ ಮಾರ್ಗದಲ್ಲಿ ನಡೆಯುತ್ತಿದ್ದೇನೆ. ಅದೇ ಮಾರ್ಗದಲ್ಲಿ ಎಲ್ಲರನ್ನೂ ಕರೆದೊಯ್ಯುತ್ತಿದ್ದೇನೆ' ಎಂದರು.</p>.<p>'ನಾನು ಜನಪ್ರತಿನಿಧಿಗಳ ಮಾತು ಕೇಳುವ ಸ್ವಾಮೀಜಿಯಲ್ಲ.ಜನರ ಮಾತು ಕೇಳುವ ಸ್ವಾಮೀಜಿ. ಹೋರಾಟದ ಬಗ್ಗೆ ಜನರು ತಪ್ಪು ತಿಳಿದುಕೊಂಡರೆ ಅದನ್ನು ಸರಿ ಪಡಿಸಲು ಸಾಧ್ಯವಿಲ್ಲ. ಸಮುದಾಯದ ಜನರ ಬೇಡಿಕೆಯಂತೆಯೇ ಹೋರಾಟ ನಡೆಸುತ್ತಿದ್ದೇನೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>