‘ಮಹದೇವಪುರ ವಿಧಾನಸಭಾ ಕ್ಷೇತ್ರದ ಮತದಾರರ ಸಮೀಕ್ಷೆ ಮಾಡಲು ಮುಂದಾಗಿದ್ದ ಚಿಲುಮೆ ಸಂಸ್ಥೆ ಸಿಬ್ಬಂದಿ, ಅದೇ ಕ್ಷೇತ್ರ ವ್ಯಾಪ್ತಿಯಲ್ಲಿ ಕಚೇರಿ ತೆರೆದಿದ್ದರು. ಕಚೇರಿ ನಿರ್ವಹಣೆ ಜವಾಬ್ದಾರಿ ವಹಿಸಿಕೊಂಡಿದ್ದ ಅನಿಲ್, ಸಿಬ್ಬಂದಿ ನೇಮಕ ಹಾಗೂ ಸಾರಿಗೆ ಸೌಕರ್ಯ ಕಲ್ಪಿಸುವ ಕೆಲಸವನ್ನೂ ಮಾಡುತ್ತಿದ್ದ. ಪ್ರಕರಣ ದಾಖಲಾಗುತ್ತಿದ್ದಂತೆ ಈತ ಪರಾರಿಯಾಗಿದ್ದ’ ಎಂದು ತಿಳಿಸಿದರು.